Homeಕರ್ನಾಟಕನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

’ನಾವು ಬೀದಿಗಿಳಿದು ಹೋರಾಟ ಮಾಡಿದರೆ ಕೋವಿಡ್ ನಿಯಮ ಉಲ್ಲಂಘನೆ ಎಂದು ಕೇಸು ಹಾಕುತ್ತಾರೆ. ಅರೆಸ್ಟ್ ಮಾಡುತ್ತಾರೆ. ಆದರೆ ಬಿಜೆಪಿ ಅವರಿಗೆ ಮಾತ್ರ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲ’

- Advertisement -
- Advertisement -

“ನಗರದ ಮಧ್ಯಮ ವರ್ಗದ ಮಂದಿಗೆ ನಕಲಿ ದೇಶಭಕ್ತಿಯನ್ನು ಹೇಳುತ್ತಿದ್ದ ಬಿಜೆಪಿ ಈಗ ನಗರ ವಾಸಿಗಳ ಮತ್ತು ತೆರಿಗೆದಾರರ ಬದುಕನ್ನೂ ಹೈರಾಣ ಮಾಡಿಟ್ಟಿದೆ. ವಿಪರೀತ ಬೆಲೆ ಏರಿಕೆ ಮತ್ತು ಪರೋಕ್ಷ ಹಾಗೂ ಪ್ರತ್ಯಕ್ಷ ತೆರಿಗೆಗಳ ಭಾರಕ್ಕೆ ನಗರ ಪ್ರದೇಶಗಳಲ್ಲಿರುವ ಜನರು, ಮಧ್ಯಮ ವರ್ಗದ ಮಂದಿ ಕೂಡ ಇತರೆ ಸಮುದಾಯಗಳ ರೀತಿಯಲ್ಲಿ ಹೈರಾಣಾಗಿ ಹೋಗಿದ್ದಾರೆ” ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ಕೆಲವರಿಗೆ ತಮ್ಮಲ್ಲಿ ಯಾವುದರ ಕೊರತೆ ಇರುತ್ತದೋ ಅದರ ಬಗ್ಗೆಯೇ ಹೆಚ್ಚೆಚ್ಚು ಮಾತನಾಡುವ ಚಟ ಇರುತ್ತದೆ. ಬಿಜೆಪಿ ಮತ್ತು ಪರಿವಾರದ ಮಂದಿ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲ. ಇಡೀ ದೇಶದ ಜನ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾಗ ಬಿಜೆಪಿ ಮತ್ತು ಪರಿವಾರ ದೇಶದ ಜನತೆಯ ಜತೆಗೆ ನಿಲ್ಲಲಿಲ್ಲ. ಹೀಗಾಗಿ ಬಿಜೆಪಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇಲ್ಲ ಮತ್ತು ಬಿಜೆಪಿಯಲ್ಲಿ ಹುತಾತ್ಮರಾದವರು ಯಾರೂ ಇಲ್ಲ. ಅದಕ್ಕೇ ಬಿಜೆಪಿ ಹೆಚ್ಚೆಚ್ಚು ದೇಶಭಕ್ತಿಯ ಬಗ್ಗೆ ಮಾತನಾಡುತ್ತದೆ” ಎಂದಿದ್ದಾರೆ.

’ಒಂದೇ ಮಾತರಂ, ಜೈ ಜವಾನ್-ಜೈ ಕಿಸಾನ್, ಸ್ವದೇಶಿ ಘೋಷಣೆಗಳೆಲ್ಲಾ ಸ್ವಾತಂತ್ರ್ಯ ಹೋರಾಟದ ನಾಯಕರುಗಳು ಕೊಟ್ಟಿದ್ದು. ಈ ಘೋಷಣೆಗಳಿಗೂ ಬಿಜೆಪಿಗೂ ಯಾವ ಸಂಬಂಧವೂ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ  ತಂದು ಕೊಟ್ಟಿದ್ದು, ದೇಶದ ಜನರ ಹೋರಾಟದ ಜತೆಗೆ ನಿಂತಿದ್ದು ಕಾಂಗ್ರೆಸ್ ಪಕ್ಷ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

’ಬೆಲೆ ಏರಿಕೆ ಮತ್ತು ಹಣದುಬ್ಬರದಿಂದ ನಗರವಾಸಿಗಳ ಬದುಕು ನರಕವಾಗಿದೆ. ವಿದ್ಯುಚ್ಚಕ್ತಿ ಬಿಲ್ಲುಗಳು ಶೇ 30 ರಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮೋದಿ ಅವರು ಪ್ರಧಾನಿ ಆಗಿರುವವರೆಗೂ ಇಳಿಯುವಂತೆ ಕಾಣುತ್ತಿಲ್ಲ. ಒಂದು ವಾರದಲ್ಲಿ ಅಡುಗೆ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಾಗಿ ನಗರದಲ್ಲಿ 886 ರೂಪಾಯಿ ಗ್ರಾಮೀಣ ಭಾಗದಲ್ಲಿ 900 ರೂಪಾಯಿ ತಲುಪಿದೆ. ಮನೆಗಳ ಆಸ್ತಿ ತೆರಿಗೆ ವಿಪರೀತ ಹೆಚ್ಚಾಗಿರುವುದು ಮಾತ್ರವಲ್ಲದೆ ಖಾಲಿ ಜಾಗಗಳಿಗೂ ತೆರಿಗೆ ವಿಧಿಸುತ್ತಿದ್ದಾರೆ. ಕಬ್ಬಿಣ, ಸಿಮೆಂಟ್ ಸೇರಿ ದಿನನಿತ್ಯ ಬಳಕೆಯ ಎಲ್ಲಾ ವಸ್ತುಗಳ ಬೆಲೆಯೂ ಆಕಾಶ ಮುಟ್ಟುತ್ತಿದೆ. ಅಚ್ಛೆ ದಿನ್ ಅಂದರೆ ಇದೇನಾ…?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

’ಕೇಂದ್ರ ಸರ್ಕಾರ ನಗರ ಪ್ರದೇಶಗಳಿಗೆ ಕೊಡುತ್ತಿದ್ದ ಅನುದಾನ ಕಡಿತಗೊಳಿಸಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬಜೆಟ್ ಗಾತ್ರ ಕಡಿಮೆ ಇದ್ದಾಗಲೂ 15 ಸಾವಿರ ಕೋಟಿ ಅನುದಾನ ನೀಡಿದ್ದೆ. ಈಗ ಬಜೆಟ್ ಗಾತ್ರ ಹೆಚ್ಚಾಗಿದ್ದರೂ ಬಿಜೆಪಿ ಸರ್ಕಾರ ನೀಡಿರುವುದು 14 ಸಾವಿರ ಕೋಟಿ ಮಾತ್ರ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲೇ ಅತಿ ಹೆಚ್ಚು ಹಣ ನಗರ ಅಭಿವೃದ್ಧಿಗೆ ನೀಡಿದ್ದು ಬಿಟ್ಟರೆ ಬಿಜೆಪಿಯವರು ಮಾಡಿದ್ದು ಬರೀ ಭಜನೆ ಅಷ್ಟೆ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

’ತೆರಿಗೆದಾರರ, ನಗರ ವಾಸಿಗಳ, ಗ್ರಾಮೀಣ ಜನರನ್ನು ಬೆಲೆ ಏರಿಕೆಯ ನರಕದಲ್ಲಿ ನರಳಿಸುತ್ತಿರುವ ಬಿಜೆಪಿ ಸರ್ಕಾರ ಕಾರ್ಪೋರೇಟ್ ಶ್ರೀಮಂತರ ಆಸ್ತಿ ಪ್ರತೀ ವರ್ಷ ಲಕ್ಷ ಲಕ್ಷ ಕೋಟಿಗಳ ಗಡಿ ದಾಟಿಸುತ್ತಿದೆ.
ರೈತರು ಸಾಲ ತೀರಿಸಿಲ್ಲ ಎಂದು ಅವರ ಟ್ರಾಕ್ಟರ್‌ಗಳನ್ನು ಜಪ್ತಿ ಮಾಡುವ ಬಿಜೆಪಿ ಸರ್ಕಾರ ಮೋದಿ ಪ್ರಧಾನಿ ಆದ 7 ವರ್ಷಗಳಲ್ಲಿ 7 ಲಕ್ಷ ಕೋಟಿಯಷ್ಟು ಕಾರ್ಪೋರೇಟ್ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದೆ. ಇದರಲ್ಲಿ ಅಂಬಾನಿ ಒಬ್ಬನದ್ದೇ 4.5 ಲಕ್ಷ ಕೋಟಿ ಸೇರಿದೆ’ ಎಂದಿದ್ದಾರೆ.

’ಆಸ್ತಿ ನಗದೀಕರಣ ಹೆಸರಿನಲ್ಲಿ ಭಾರತದ ರಸ್ತೆಗಳು, ಏರ್ಪೋರ್ಟ್ಗಳು, ರೈಲು ನಿಲ್ದಾಣಗಳು ಸೇರಿ ಪ್ರತಿಯೊಂದನ್ನೂ ಖಾಸಗಿಯವರಿಗೆ ಒಪ್ಪಿಸಲಾಗುತ್ತಿದೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುವ ಮೋದಿ ಅವರು ಈಗ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದೆಲ್ಲಾ ಯಾರ ಅವಧಿಯಲ್ಲಿ ಆಗಿದ್ದು..? ದೇಶದ ಜನ ಕಳೆದ 70 ವರ್ಷಗಳಲ್ಲಿ ಸೃಷ್ಟಿಸಿದ 6 ಲಕ್ಷ ಕೋಟಿ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಮೋದಿಯವರು ಈ ದೇಶದ ಜನರ ಅನುಮತಿ, ಒಪ್ಪಿಗೆ ಪಡೆದಿದ್ದಾರಾ..?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

’7 ವರ್ಷಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಂದ ಸುಲಿಗೆ ಮಾಡಿದ ಹಣದ ಪ್ರಮಾಣ 22 ಲಕ್ಷ ಕೋಟಿ. ಇದರಲ್ಲಿ ಕರ್ನಾಟಕವೊಂದರಿಂದಲೇ ಸುಲಿಗೆ ಮಾಡಿದ್ದು 1.20 ಲಕ್ಷ ಕೋಟಿ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ದೇಶಕ್ಕೆ ಆಹಾರ ಭದ್ರತೆ ಒದಗಿಸಿ, ಸಾರ್ವಜನಿಕ ಉದ್ದಿಮೆಗಳನ್ನು ಸೃಷ್ಟಿಸಿ ಲಕ್ಷಾಂತರ ಕೋಟಿ ಆಸ್ತಿಯನ್ನು ಸೃಷ್ಟಿಸಿದ್ದು ಕಾಂಗ್ರೆಸ್. ಇದನ್ನೆಲ್ಲಾ ಒಂದೊಂದಾಗಿ ಮಾರಾಟ ಮಾಡುತ್ತಾ ಕುಳಿತಿರುವ ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ಸಾವಿರಾರು ಸುಳ್ಳುಗಳನ್ನು ಹಿಂದೆ ಮುಂದೆ ನೋಡದೆ ಹೇಳುತ್ತಲೇ ಹೋಗುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

’ನಾನು ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿತ್ತು. ಈ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ ಒಂದೇ ಒಂದು ಮನೆ ಕಟ್ಟಿಸಿದ್ದರೆ ತೋರಿಸಲಿ. ನಮ್ಮ ಕಾಂಗ್ರೆಸ್ ಅವಧಿಯಲ್ಲಿ ನೀಡಿದ ಬಡವರ ಮನೆಗಳಿಗೆ ಕಟ್ಟಲು ಬಾಕಿ ಇದ್ದ 2,786 ಕೋಟಿ ರೂಪಾಯಿಯನ್ನು ಮನ್ನಾ ಮಾಡಿ ಬಡವರಿಗೆ ನೆರವಾದೆವು’ ಎಂದಿದ್ದಾರೆ.

“ವಿಪರೀತ ಬೆಲೆ ಏರಿಕೆ, ತೆರಿಗೆಯ ಸುಲಿಗೆ ನಡೆಯುತ್ತಿದ್ದರೂ ಕಾಂಗ್ರೆಸ್ ವಿರೋಧ ಪಕ್ಷವಾಗಿ ದೊಡ್ಡ ಮಟ್ಟದ ಹೋರಾಟ ಮಾಡುವಲ್ಲಿ ವಿಫಲವಾಗಿದ್ದು ಏಕೆ ಎಂದು ಕೆಲವರು ಪ್ರಶ್ನಿಸುತ್ತಾರೆ. ನಾವೇನು ಬಿಜೆಪಿಯವರ ಕಪಾಳಕ್ಕೆ ಹೊಡೆಯಲು ಸಾಧ್ಯವಾ ? ನಾವು ಬೀದಿಗಿಳಿದು ಹೋರಾಟ ಮಾಡಿದರೆ ಕೋವಿಡ್ ನಿಯಮ ಉಲ್ಲಂಘನೆ ಎಂದು ಕೇಸು ಹಾಕುತ್ತಾರೆ. ಅರೆಸ್ಟ್ ಮಾಡುತ್ತಾರೆ. ಆದರೆ ಬಿಜೆಪಿ ಕೇಂದ್ರ ಮಂತ್ರಿಗಳು ‘ಜನಾಶೀರ್ವಾದ ಯಾತ್ರೆ” ಹೆಸರಿನಲ್ಲಿ ಸಾವಿರಾರು ಮಂದಿಯನ್ನು ಸೇರಿಸಿ ಮೆರವಣಿಗೆ ಮಾಡಬಹುದು. ಅವರಿಗೆ ಮಾತ್ರ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲ. ಆದರೆ ಬೆಲೆ ಏರಿಕೆ, ತೆರಿಗೆ ಸುಲಿಗೆ ವಿರೋಧಿಸಿ ಜನಪರವಾದ ಪ್ರತಿಭಟನೆ ಮಾಡಲೂ ಅವಕಾಶ ಆಗುತ್ತಿಲ್ಲ” ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...