Homeಕರ್ನಾಟಕನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

’ನಾವು ಬೀದಿಗಿಳಿದು ಹೋರಾಟ ಮಾಡಿದರೆ ಕೋವಿಡ್ ನಿಯಮ ಉಲ್ಲಂಘನೆ ಎಂದು ಕೇಸು ಹಾಕುತ್ತಾರೆ. ಅರೆಸ್ಟ್ ಮಾಡುತ್ತಾರೆ. ಆದರೆ ಬಿಜೆಪಿ ಅವರಿಗೆ ಮಾತ್ರ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲ’

- Advertisement -
- Advertisement -

“ನಗರದ ಮಧ್ಯಮ ವರ್ಗದ ಮಂದಿಗೆ ನಕಲಿ ದೇಶಭಕ್ತಿಯನ್ನು ಹೇಳುತ್ತಿದ್ದ ಬಿಜೆಪಿ ಈಗ ನಗರ ವಾಸಿಗಳ ಮತ್ತು ತೆರಿಗೆದಾರರ ಬದುಕನ್ನೂ ಹೈರಾಣ ಮಾಡಿಟ್ಟಿದೆ. ವಿಪರೀತ ಬೆಲೆ ಏರಿಕೆ ಮತ್ತು ಪರೋಕ್ಷ ಹಾಗೂ ಪ್ರತ್ಯಕ್ಷ ತೆರಿಗೆಗಳ ಭಾರಕ್ಕೆ ನಗರ ಪ್ರದೇಶಗಳಲ್ಲಿರುವ ಜನರು, ಮಧ್ಯಮ ವರ್ಗದ ಮಂದಿ ಕೂಡ ಇತರೆ ಸಮುದಾಯಗಳ ರೀತಿಯಲ್ಲಿ ಹೈರಾಣಾಗಿ ಹೋಗಿದ್ದಾರೆ” ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ಕೆಲವರಿಗೆ ತಮ್ಮಲ್ಲಿ ಯಾವುದರ ಕೊರತೆ ಇರುತ್ತದೋ ಅದರ ಬಗ್ಗೆಯೇ ಹೆಚ್ಚೆಚ್ಚು ಮಾತನಾಡುವ ಚಟ ಇರುತ್ತದೆ. ಬಿಜೆಪಿ ಮತ್ತು ಪರಿವಾರದ ಮಂದಿ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲ. ಇಡೀ ದೇಶದ ಜನ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾಗ ಬಿಜೆಪಿ ಮತ್ತು ಪರಿವಾರ ದೇಶದ ಜನತೆಯ ಜತೆಗೆ ನಿಲ್ಲಲಿಲ್ಲ. ಹೀಗಾಗಿ ಬಿಜೆಪಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇಲ್ಲ ಮತ್ತು ಬಿಜೆಪಿಯಲ್ಲಿ ಹುತಾತ್ಮರಾದವರು ಯಾರೂ ಇಲ್ಲ. ಅದಕ್ಕೇ ಬಿಜೆಪಿ ಹೆಚ್ಚೆಚ್ಚು ದೇಶಭಕ್ತಿಯ ಬಗ್ಗೆ ಮಾತನಾಡುತ್ತದೆ” ಎಂದಿದ್ದಾರೆ.

’ಒಂದೇ ಮಾತರಂ, ಜೈ ಜವಾನ್-ಜೈ ಕಿಸಾನ್, ಸ್ವದೇಶಿ ಘೋಷಣೆಗಳೆಲ್ಲಾ ಸ್ವಾತಂತ್ರ್ಯ ಹೋರಾಟದ ನಾಯಕರುಗಳು ಕೊಟ್ಟಿದ್ದು. ಈ ಘೋಷಣೆಗಳಿಗೂ ಬಿಜೆಪಿಗೂ ಯಾವ ಸಂಬಂಧವೂ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ  ತಂದು ಕೊಟ್ಟಿದ್ದು, ದೇಶದ ಜನರ ಹೋರಾಟದ ಜತೆಗೆ ನಿಂತಿದ್ದು ಕಾಂಗ್ರೆಸ್ ಪಕ್ಷ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

’ಬೆಲೆ ಏರಿಕೆ ಮತ್ತು ಹಣದುಬ್ಬರದಿಂದ ನಗರವಾಸಿಗಳ ಬದುಕು ನರಕವಾಗಿದೆ. ವಿದ್ಯುಚ್ಚಕ್ತಿ ಬಿಲ್ಲುಗಳು ಶೇ 30 ರಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮೋದಿ ಅವರು ಪ್ರಧಾನಿ ಆಗಿರುವವರೆಗೂ ಇಳಿಯುವಂತೆ ಕಾಣುತ್ತಿಲ್ಲ. ಒಂದು ವಾರದಲ್ಲಿ ಅಡುಗೆ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಾಗಿ ನಗರದಲ್ಲಿ 886 ರೂಪಾಯಿ ಗ್ರಾಮೀಣ ಭಾಗದಲ್ಲಿ 900 ರೂಪಾಯಿ ತಲುಪಿದೆ. ಮನೆಗಳ ಆಸ್ತಿ ತೆರಿಗೆ ವಿಪರೀತ ಹೆಚ್ಚಾಗಿರುವುದು ಮಾತ್ರವಲ್ಲದೆ ಖಾಲಿ ಜಾಗಗಳಿಗೂ ತೆರಿಗೆ ವಿಧಿಸುತ್ತಿದ್ದಾರೆ. ಕಬ್ಬಿಣ, ಸಿಮೆಂಟ್ ಸೇರಿ ದಿನನಿತ್ಯ ಬಳಕೆಯ ಎಲ್ಲಾ ವಸ್ತುಗಳ ಬೆಲೆಯೂ ಆಕಾಶ ಮುಟ್ಟುತ್ತಿದೆ. ಅಚ್ಛೆ ದಿನ್ ಅಂದರೆ ಇದೇನಾ…?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

’ಕೇಂದ್ರ ಸರ್ಕಾರ ನಗರ ಪ್ರದೇಶಗಳಿಗೆ ಕೊಡುತ್ತಿದ್ದ ಅನುದಾನ ಕಡಿತಗೊಳಿಸಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬಜೆಟ್ ಗಾತ್ರ ಕಡಿಮೆ ಇದ್ದಾಗಲೂ 15 ಸಾವಿರ ಕೋಟಿ ಅನುದಾನ ನೀಡಿದ್ದೆ. ಈಗ ಬಜೆಟ್ ಗಾತ್ರ ಹೆಚ್ಚಾಗಿದ್ದರೂ ಬಿಜೆಪಿ ಸರ್ಕಾರ ನೀಡಿರುವುದು 14 ಸಾವಿರ ಕೋಟಿ ಮಾತ್ರ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲೇ ಅತಿ ಹೆಚ್ಚು ಹಣ ನಗರ ಅಭಿವೃದ್ಧಿಗೆ ನೀಡಿದ್ದು ಬಿಟ್ಟರೆ ಬಿಜೆಪಿಯವರು ಮಾಡಿದ್ದು ಬರೀ ಭಜನೆ ಅಷ್ಟೆ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

’ತೆರಿಗೆದಾರರ, ನಗರ ವಾಸಿಗಳ, ಗ್ರಾಮೀಣ ಜನರನ್ನು ಬೆಲೆ ಏರಿಕೆಯ ನರಕದಲ್ಲಿ ನರಳಿಸುತ್ತಿರುವ ಬಿಜೆಪಿ ಸರ್ಕಾರ ಕಾರ್ಪೋರೇಟ್ ಶ್ರೀಮಂತರ ಆಸ್ತಿ ಪ್ರತೀ ವರ್ಷ ಲಕ್ಷ ಲಕ್ಷ ಕೋಟಿಗಳ ಗಡಿ ದಾಟಿಸುತ್ತಿದೆ.
ರೈತರು ಸಾಲ ತೀರಿಸಿಲ್ಲ ಎಂದು ಅವರ ಟ್ರಾಕ್ಟರ್‌ಗಳನ್ನು ಜಪ್ತಿ ಮಾಡುವ ಬಿಜೆಪಿ ಸರ್ಕಾರ ಮೋದಿ ಪ್ರಧಾನಿ ಆದ 7 ವರ್ಷಗಳಲ್ಲಿ 7 ಲಕ್ಷ ಕೋಟಿಯಷ್ಟು ಕಾರ್ಪೋರೇಟ್ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದೆ. ಇದರಲ್ಲಿ ಅಂಬಾನಿ ಒಬ್ಬನದ್ದೇ 4.5 ಲಕ್ಷ ಕೋಟಿ ಸೇರಿದೆ’ ಎಂದಿದ್ದಾರೆ.

’ಆಸ್ತಿ ನಗದೀಕರಣ ಹೆಸರಿನಲ್ಲಿ ಭಾರತದ ರಸ್ತೆಗಳು, ಏರ್ಪೋರ್ಟ್ಗಳು, ರೈಲು ನಿಲ್ದಾಣಗಳು ಸೇರಿ ಪ್ರತಿಯೊಂದನ್ನೂ ಖಾಸಗಿಯವರಿಗೆ ಒಪ್ಪಿಸಲಾಗುತ್ತಿದೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನಿಸುವ ಮೋದಿ ಅವರು ಈಗ ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದೆಲ್ಲಾ ಯಾರ ಅವಧಿಯಲ್ಲಿ ಆಗಿದ್ದು..? ದೇಶದ ಜನ ಕಳೆದ 70 ವರ್ಷಗಳಲ್ಲಿ ಸೃಷ್ಟಿಸಿದ 6 ಲಕ್ಷ ಕೋಟಿ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಮೋದಿಯವರು ಈ ದೇಶದ ಜನರ ಅನುಮತಿ, ಒಪ್ಪಿಗೆ ಪಡೆದಿದ್ದಾರಾ..?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

’7 ವರ್ಷಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಂದ ಸುಲಿಗೆ ಮಾಡಿದ ಹಣದ ಪ್ರಮಾಣ 22 ಲಕ್ಷ ಕೋಟಿ. ಇದರಲ್ಲಿ ಕರ್ನಾಟಕವೊಂದರಿಂದಲೇ ಸುಲಿಗೆ ಮಾಡಿದ್ದು 1.20 ಲಕ್ಷ ಕೋಟಿ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ದೇಶಕ್ಕೆ ಆಹಾರ ಭದ್ರತೆ ಒದಗಿಸಿ, ಸಾರ್ವಜನಿಕ ಉದ್ದಿಮೆಗಳನ್ನು ಸೃಷ್ಟಿಸಿ ಲಕ್ಷಾಂತರ ಕೋಟಿ ಆಸ್ತಿಯನ್ನು ಸೃಷ್ಟಿಸಿದ್ದು ಕಾಂಗ್ರೆಸ್. ಇದನ್ನೆಲ್ಲಾ ಒಂದೊಂದಾಗಿ ಮಾರಾಟ ಮಾಡುತ್ತಾ ಕುಳಿತಿರುವ ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ಸಾವಿರಾರು ಸುಳ್ಳುಗಳನ್ನು ಹಿಂದೆ ಮುಂದೆ ನೋಡದೆ ಹೇಳುತ್ತಲೇ ಹೋಗುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

’ನಾನು ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿತ್ತು. ಈ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ ಒಂದೇ ಒಂದು ಮನೆ ಕಟ್ಟಿಸಿದ್ದರೆ ತೋರಿಸಲಿ. ನಮ್ಮ ಕಾಂಗ್ರೆಸ್ ಅವಧಿಯಲ್ಲಿ ನೀಡಿದ ಬಡವರ ಮನೆಗಳಿಗೆ ಕಟ್ಟಲು ಬಾಕಿ ಇದ್ದ 2,786 ಕೋಟಿ ರೂಪಾಯಿಯನ್ನು ಮನ್ನಾ ಮಾಡಿ ಬಡವರಿಗೆ ನೆರವಾದೆವು’ ಎಂದಿದ್ದಾರೆ.

“ವಿಪರೀತ ಬೆಲೆ ಏರಿಕೆ, ತೆರಿಗೆಯ ಸುಲಿಗೆ ನಡೆಯುತ್ತಿದ್ದರೂ ಕಾಂಗ್ರೆಸ್ ವಿರೋಧ ಪಕ್ಷವಾಗಿ ದೊಡ್ಡ ಮಟ್ಟದ ಹೋರಾಟ ಮಾಡುವಲ್ಲಿ ವಿಫಲವಾಗಿದ್ದು ಏಕೆ ಎಂದು ಕೆಲವರು ಪ್ರಶ್ನಿಸುತ್ತಾರೆ. ನಾವೇನು ಬಿಜೆಪಿಯವರ ಕಪಾಳಕ್ಕೆ ಹೊಡೆಯಲು ಸಾಧ್ಯವಾ ? ನಾವು ಬೀದಿಗಿಳಿದು ಹೋರಾಟ ಮಾಡಿದರೆ ಕೋವಿಡ್ ನಿಯಮ ಉಲ್ಲಂಘನೆ ಎಂದು ಕೇಸು ಹಾಕುತ್ತಾರೆ. ಅರೆಸ್ಟ್ ಮಾಡುತ್ತಾರೆ. ಆದರೆ ಬಿಜೆಪಿ ಕೇಂದ್ರ ಮಂತ್ರಿಗಳು ‘ಜನಾಶೀರ್ವಾದ ಯಾತ್ರೆ” ಹೆಸರಿನಲ್ಲಿ ಸಾವಿರಾರು ಮಂದಿಯನ್ನು ಸೇರಿಸಿ ಮೆರವಣಿಗೆ ಮಾಡಬಹುದು. ಅವರಿಗೆ ಮಾತ್ರ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲ. ಆದರೆ ಬೆಲೆ ಏರಿಕೆ, ತೆರಿಗೆ ಸುಲಿಗೆ ವಿರೋಧಿಸಿ ಜನಪರವಾದ ಪ್ರತಿಭಟನೆ ಮಾಡಲೂ ಅವಕಾಶ ಆಗುತ್ತಿಲ್ಲ” ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...