Homeಕರ್ನಾಟಕಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು

ಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು

- Advertisement -
- Advertisement -

ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಕುರುಬರ ಸಂಘದ ನಡುವೆ ನಡೆಯುತ್ತಿರುವ ಪರಸ್ಪರ ಆರೋಪ ಪ್ರತ್ಯಾರೋಪ ಮುಂದುವರಿದಿದೆ. ಇಂದು ತುಮಕೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕುರುಬ ಸಮಾಜದ ಮುಖಂಡರು ಸಿದ್ದರಾಮಯ್ಯ ವಿರುದ್ಧ ಕ್ಷುಲ್ಲಕವಾಗಿ ಮಾತನಾಡುವ ಯಾರೇ ಆಗಲಿ ಅಂತಹ ಚಾಳಿ ಬಿಡಬೇಕು. ಇದನ್ನೇ ಮುಂದುವರಿಸಿದರೆ ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಚುನಾವಣೆ ಸಮಯದಲ್ಲಿ ಹಿಂದೂ ಧರ್ಮದ ಬಗ್ಗೆ ಮಾತನಾಡಿ ಅಧಿಕಾರಕ್ಕೆ ಬರುವ ಬಿಜೆಪಿ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣನಂಥಹ ಮಹಾನುಭಾವರು ಮೊದಲು ದಲಿತರೊಂದಿಗೆ ಸಹಪಂಕ್ತಿ ಭೋಜನ ಮಾಡಲಿ. ದಲಿತರ ಮನೆಯಲ್ಲಿ ಉಣ್ಣುತ್ತೇವೆ ಎನ್ನುವ ಸೊಗಡು ಶಿವಣ್ಣ ತಮ್ಮ ಸಮುದಾಯದವರು ಮತ್ತು ದಲಿತರೊಂದಿಗೆ ಸಹಪಂಕ್ತಿ ಭೋಜನ ಮಾಡಲಿ ನೋಡೋಣ ಎಂದು ಜಿಲ್ಲಾ ಪಂಚಾಯತಿ ಸದಸ್ಯ ತಿಮ್ಮಯ್ಯ ಸವಾಲು ಹಾಕಿದರು.

ಸಿದ್ದರಾಮಯ್ಯ ಗಾಂಧೀ ಹತ್ಯೆಯ ಏಳನೇ ಆರೋಪಿ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡುವುದು ಬೇಡ. ಅದರ ಬದಲು ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ಕೊಡಬೇಕು ಎಂದು ಹೇಳಿದ್ದಾರೆ. ಸಾವರ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿಲ್ಲ. ಸಾವರ್ಕರ್ ಅವರಿಗೆ ಭಾರತ ರತ್ನ ಕೊಡಬಾರದು ಎಂದು ಹೇಳಿದ್ದನ್ನೇ ನೆಪಮಾಡಿಕೊಂಡು ಸಿದ್ದರಾಮಯ್ಯ ಜಾತಿವಾದಿ, ಟೆರರಿಸ್ಟ್ ಎನ್ನುವುದು ಮೂರ್ಖತನದ ಪರಮಾವಧಿ. ಇದನ್ನು ನಾವು ಸಹಿಸುವುದಿಲ್ಲ ಎಂದು ಕಿಡಿಕಾರಿದರು.

ದೇಶದಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕಾದವರ ಪಟ್ಟಿಯೇ ಇದೆ. ಸ್ವಾಮಿ ವಿವೇಕಾನಂದ, ಸಿದ್ದಗಂಗಾ ಹಿರಿಯ ಶ್ರೀಗಳು ಹೀಗೆ ಹಲವರಿದ್ದಾರೆ. ಅವರಿಗೆ ಕೊಡಲಿ, ಕೊಲೆಯ ಆರೋಪಿಗೆ ಕೊಡುವುದು ಬೇಡ. ಸಮಾಜಕ್ಕಾಗಿ ದುಡಿದ ಮಹನೀಯರಿಗೆ ಭಾರತ ರತ್ನ ಕೊಡುವುದರಿಂದ ಪ್ರಶಸ್ತಿಗೂ ಗೌರವ ಬರುತ್ತದೆ ಎಂದು ಹೇಳಿದರು.

ಕುರುಬ ಸಮುದಾಯದ ಮುಖಂಡ ಕೆಂಪರಾಜು ಮಾತನಾಡಿ, ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಯಾವುದೇ ಅಧಿಕಾರವಿಲ್ಲ. ತಮ್ಮ ಪಕ್ಷದ ನಾಯಕರನ್ನು ಮೆಚ್ಚಿಸಲು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಅಧಿಕಾರ ಪಡೆಯಬೇಕೆಂದರೆ ಗೌರವಯುತ ವ್ಯಕ್ತಿಯ ವಿರುದ್ಧ ಮಾತನಾಡಿದರೆ ನನಗೆ ಅಧಿಕಾರ ಲಭಿಸುತ್ತದೆ ಎಂದು ನಂಬಿರುವುದರಿಂದ ಪ್ರಯೋಜನ ಇಲ್ಲ ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...