Homeಕರ್ನಾಟಕಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು

ಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು

- Advertisement -
- Advertisement -

ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಕುರುಬರ ಸಂಘದ ನಡುವೆ ನಡೆಯುತ್ತಿರುವ ಪರಸ್ಪರ ಆರೋಪ ಪ್ರತ್ಯಾರೋಪ ಮುಂದುವರಿದಿದೆ. ಇಂದು ತುಮಕೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕುರುಬ ಸಮಾಜದ ಮುಖಂಡರು ಸಿದ್ದರಾಮಯ್ಯ ವಿರುದ್ಧ ಕ್ಷುಲ್ಲಕವಾಗಿ ಮಾತನಾಡುವ ಯಾರೇ ಆಗಲಿ ಅಂತಹ ಚಾಳಿ ಬಿಡಬೇಕು. ಇದನ್ನೇ ಮುಂದುವರಿಸಿದರೆ ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಚುನಾವಣೆ ಸಮಯದಲ್ಲಿ ಹಿಂದೂ ಧರ್ಮದ ಬಗ್ಗೆ ಮಾತನಾಡಿ ಅಧಿಕಾರಕ್ಕೆ ಬರುವ ಬಿಜೆಪಿ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣನಂಥಹ ಮಹಾನುಭಾವರು ಮೊದಲು ದಲಿತರೊಂದಿಗೆ ಸಹಪಂಕ್ತಿ ಭೋಜನ ಮಾಡಲಿ. ದಲಿತರ ಮನೆಯಲ್ಲಿ ಉಣ್ಣುತ್ತೇವೆ ಎನ್ನುವ ಸೊಗಡು ಶಿವಣ್ಣ ತಮ್ಮ ಸಮುದಾಯದವರು ಮತ್ತು ದಲಿತರೊಂದಿಗೆ ಸಹಪಂಕ್ತಿ ಭೋಜನ ಮಾಡಲಿ ನೋಡೋಣ ಎಂದು ಜಿಲ್ಲಾ ಪಂಚಾಯತಿ ಸದಸ್ಯ ತಿಮ್ಮಯ್ಯ ಸವಾಲು ಹಾಕಿದರು.

ಸಿದ್ದರಾಮಯ್ಯ ಗಾಂಧೀ ಹತ್ಯೆಯ ಏಳನೇ ಆರೋಪಿ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡುವುದು ಬೇಡ. ಅದರ ಬದಲು ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ಕೊಡಬೇಕು ಎಂದು ಹೇಳಿದ್ದಾರೆ. ಸಾವರ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿಲ್ಲ. ಸಾವರ್ಕರ್ ಅವರಿಗೆ ಭಾರತ ರತ್ನ ಕೊಡಬಾರದು ಎಂದು ಹೇಳಿದ್ದನ್ನೇ ನೆಪಮಾಡಿಕೊಂಡು ಸಿದ್ದರಾಮಯ್ಯ ಜಾತಿವಾದಿ, ಟೆರರಿಸ್ಟ್ ಎನ್ನುವುದು ಮೂರ್ಖತನದ ಪರಮಾವಧಿ. ಇದನ್ನು ನಾವು ಸಹಿಸುವುದಿಲ್ಲ ಎಂದು ಕಿಡಿಕಾರಿದರು.

ದೇಶದಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕಾದವರ ಪಟ್ಟಿಯೇ ಇದೆ. ಸ್ವಾಮಿ ವಿವೇಕಾನಂದ, ಸಿದ್ದಗಂಗಾ ಹಿರಿಯ ಶ್ರೀಗಳು ಹೀಗೆ ಹಲವರಿದ್ದಾರೆ. ಅವರಿಗೆ ಕೊಡಲಿ, ಕೊಲೆಯ ಆರೋಪಿಗೆ ಕೊಡುವುದು ಬೇಡ. ಸಮಾಜಕ್ಕಾಗಿ ದುಡಿದ ಮಹನೀಯರಿಗೆ ಭಾರತ ರತ್ನ ಕೊಡುವುದರಿಂದ ಪ್ರಶಸ್ತಿಗೂ ಗೌರವ ಬರುತ್ತದೆ ಎಂದು ಹೇಳಿದರು.

ಕುರುಬ ಸಮುದಾಯದ ಮುಖಂಡ ಕೆಂಪರಾಜು ಮಾತನಾಡಿ, ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಯಾವುದೇ ಅಧಿಕಾರವಿಲ್ಲ. ತಮ್ಮ ಪಕ್ಷದ ನಾಯಕರನ್ನು ಮೆಚ್ಚಿಸಲು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಅಧಿಕಾರ ಪಡೆಯಬೇಕೆಂದರೆ ಗೌರವಯುತ ವ್ಯಕ್ತಿಯ ವಿರುದ್ಧ ಮಾತನಾಡಿದರೆ ನನಗೆ ಅಧಿಕಾರ ಲಭಿಸುತ್ತದೆ ಎಂದು ನಂಬಿರುವುದರಿಂದ ಪ್ರಯೋಜನ ಇಲ್ಲ ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...