Homeಕರ್ನಾಟಕಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ

- Advertisement -
- Advertisement -

ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ತೆರೆಮರೆಗೆ ಸರಿಯುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಿನ್ನೆ(ಅ.21) ರಾಜರಾಜೇಶ್ವರಿ ನಗರದ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಿ, ಅಲ್ಲಿನ ಮಾಜಿ ಕಾರ್ಪೋರೇಟರ್‌ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿದ ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರನ್ನು ಲೇವಡಿ ಮಾಡಿದ್ದರು.

ಹುಲಿಯಾ ಕಾಡಿಗೆ ಹೋಗಬೇಕಾಗುತ್ತದೆ, ಬಂಡೆ ಛಿಧ್ರವಾಗುತ್ತದೆ ಎಂಬ ಮಾತುಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ಕಿಡಿಕಾರಿದ್ದು, ಸರಣಿ ಟ್ವೀಟ್‌ಗಳ ಮೂಲಕ ತರಾಟೆ ತೆಗೆದುಕೊಂಡಿದ್ದಾರೆ.

“ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ” ಎಂದು ಟ್ವೀಟ್ ಒಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ – ಸಚಿವ ಸೋಮಣ್ಣ

 

“ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳೀನ್ ಕುಮಾರ್‌‍ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ” ಎಂದು ಕಿಡಿ ಕಾರಿದ್ದಾರೆ.

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದಿದ್ದಾರೆ.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಮತ್ತೊಂದು ಟ್ವೀಟ್‌ನಲ್ಲಿ ಈ ಹಿಂದೆ ಸಚಿವ ಕೆ.ಈಶ್ವರಪ್ಪ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿ. ’ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” ಎಂದು ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಬಿಜೆಪಿ ನಾಯಕರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್‌ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ” ಎಂದಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಿಎಂ ಸ್ಥಾನದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದರು. ಈಗ ಇದು ವಿವಾದಕ್ಕೆ ಕಾರಣವಾಗಿದ್ದು, ಯಡಿಯೂರಪ್ಪ ಕೂಡ ಯತ್ನಾಳ್ ಜೊತೆ ಮಾತನಾಡುವುದಾಗಿ ಹೇಳಿದ್ದರು.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...