ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ತೆರೆಮರೆಗೆ ಸರಿಯುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಿನ್ನೆ(ಅ.21) ರಾಜರಾಜೇಶ್ವರಿ ನಗರದ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಿ, ಅಲ್ಲಿನ ಮಾಜಿ ಕಾರ್ಪೋರೇಟರ್ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿದ ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಲೇವಡಿ ಮಾಡಿದ್ದರು.
ಹುಲಿಯಾ ಕಾಡಿಗೆ ಹೋಗಬೇಕಾಗುತ್ತದೆ, ಬಂಡೆ ಛಿಧ್ರವಾಗುತ್ತದೆ ಎಂಬ ಮಾತುಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ಕಿಡಿಕಾರಿದ್ದು, ಸರಣಿ ಟ್ವೀಟ್ಗಳ ಮೂಲಕ ತರಾಟೆ ತೆಗೆದುಕೊಂಡಿದ್ದಾರೆ.
“ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ” ಎಂದು ಟ್ವೀಟ್ ಒಂದರಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ – ಸಚಿವ ಸೋಮಣ್ಣ
ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ @nalinkateel ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ. 1/6
— Siddaramaiah (@siddaramaiah) October 22, 2020
“ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳೀನ್ ಕುಮಾರ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ” ಎಂದು ಕಿಡಿ ಕಾರಿದ್ದಾರೆ.
ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ @nalinkateel ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ. 4/6
— Siddaramaiah (@siddaramaiah) October 22, 2020
ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದಿದ್ದಾರೆ.
ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ
ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ @nalinkateel ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು. 6/6 pic.twitter.com/lMgEizA0tC
— Siddaramaiah (@siddaramaiah) October 22, 2020
ಮತ್ತೊಂದು ಟ್ವೀಟ್ನಲ್ಲಿ ಈ ಹಿಂದೆ ಸಚಿವ ಕೆ.ಈಶ್ವರಪ್ಪ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿ. ’ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” ಎಂದು ಲೇವಡಿ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಬಿಜೆಪಿ ನಾಯಕರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ” ಎಂದಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಿಎಂ ಸ್ಥಾನದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದರು. ಈಗ ಇದು ವಿವಾದಕ್ಕೆ ಕಾರಣವಾಗಿದ್ದು, ಯಡಿಯೂರಪ್ಪ ಕೂಡ ಯತ್ನಾಳ್ ಜೊತೆ ಮಾತನಾಡುವುದಾಗಿ ಹೇಳಿದ್ದರು.