Homeಮುಖಪುಟಕವಿತೆ ಓದಿದ್ದಕ್ಕಾಗಿ ಸಿರಾಜ್ ಬಿಸರಳ್ಳಿ, ರಾಜಭಕ್ಷಿಯವರ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ- ಸಿದ್ದು

ಕವಿತೆ ಓದಿದ್ದಕ್ಕಾಗಿ ಸಿರಾಜ್ ಬಿಸರಳ್ಳಿ, ರಾಜಭಕ್ಷಿಯವರ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ- ಸಿದ್ದು

- Advertisement -
- Advertisement -

ಪ್ರತಿರೋಧ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೌಂದರ್ಯ. ಸರ್ಕಾರ ರೂಪಿಸಿ ಜಾರಿಗೊಳಿಸುವ ಯಾವುದೇ ಕಾನೂನಿಗೆ ಪರ-ವಿರೋಧದ ಅಭಿಪ್ರಾಯಗಳು ಮೂಡಿಬರುವುದು ಸಾಮಾನ್ಯ. ಹೀಗೆ ಮೂಡಿಬಂದ ಜನರ ಅಭಿಪ್ರಾಯವನ್ನು ಹತ್ತಿಕ್ಕಲು ಸರ್ಕಾರಗಳು ಪ್ರಯತ್ನಿಸಿದರೆ ಅದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಅಲ್ಲಿನ ಸ್ಥಳೀಯರು ಡಿ.18ರ ಬೆಳಿಗ್ಗೆ ಪೊಲೀಸ್ ಇಲಾಖೆಯ ಅನುಮತಿ ಪಡೆದಿದ್ದರು. ಆದರೆ ಇದೇ ದಿನ ಸಂಜೆ ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿ ಮಾಡಿತು. ಈ ವಿಚಾರ ಹೆಚ್ಚು ಪ್ರಚಾರವಾಗದ ಕಾರಣ, ಡಿ.19 ರಂದು 100 ರಿಂದ 150 ಮಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಗೋಪಾಲಗೌಡರ ನೇತೃತ್ವದ ಪೀಪಲ್ಸ್ ಟ್ರಿಬ್ಯುನಲ್ ಮಂಗಳೂರಿಗೆ ತೆರಳಿ ಪರಿಸ್ಥಿತಿಯ ಅಧ್ಯಯನ ಮಾಡಿ ನೀಡಿರುವ ವರದಿಯಲ್ಲಿ, ಆ ದಿನ 144 ಸೆಕ್ಷನ್ ಜಾರಿಗೊಳಿಸುವ ಅಗತ್ಯವೇ ಇರಲಿಲ್ಲ ಎಂದು ಹೇಳಿದೆ ಅಂದರೆ ಇಲ್ಲಿ ಪಿತೂರಿಯಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಗಳೂರಿನ ಸ್ಟೇಟ್ ಬ್ಯಾಂಕ್ ಎಂಬ ಜನನಿಬಿಡ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಲ್ಲದೆ, 144 ಸೆಕ್ಷನ್ ಬಗ್ಗೆ ಮಾಹಿತಿಯಿಲ್ಲದೆ ಪ್ರತಿಭಟನೆಗೆ ಬಂದಿದ್ದ ಪ್ರತಿಭಟನಾಕಾರರ ಮನವೊಲಿಸಿ ಮನೆಗೆ ಕಳುಹಿಸುವ ಬದಲು ಗೋಲಿಬಾರ್ ಮಾಡಿ ಇಬ್ಬರು ಅಮಾಯಕರನ್ನು ಬಲಿ ಪಡೆದಿರುವುದು ದುರಂತ ಎಂದು ಹೇಳಿದ್ದಾರೆ.

ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಸಿಸಿಟಿವಿ ವೀಡಿಯೊ ಹಾಗೂ ಫೋಟೋಗಳಲ್ಲಿ ತೋರಿಸಿರುವಂತೆ ಪ್ರತಿಭಟನಾಕಾರರು ಮಾರಕಾಸ್ತ್ರ ಹೊಂದಿರುವ ಬಗ್ಗೆ ಯಾವುದೇ ಆಧಾರಗಳನ್ನು ಹಾಜರುಪಡಿಸಿಲ್ಲ ಹಾಗೂ ಈ ವೇಳೆ ಏನು 21 ಜನರನ್ನು ಬಂಧಿಸಲಾಗಿತ್ತು, ಅವರಲ್ಲಿ ಯಾರೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ಸೂಕ್ತ ದಾಖಲೆಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬಂಧನಕ್ಕೊಳಗಾಗಿದ್ದ 21 ಜನರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಆದರೆ ಅವರ ಜೊತೆಯಲ್ಲಿದ್ದ ಇಬ್ಬರು ಗೋಲಿಬಾರ್‌ಗೆ ಬಲಿಯಾಗಿದ್ದಾರೆ. ಬಂಧನಕ್ಕೊಳಗಾದವರು ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ ಎಂದಾದರೆ ಗೋಲಿಬಾರ್‌ನಲ್ಲಿ ಮೃತಪಟ್ಟವರು ಕೂಡ ಅಮಾಯಕರಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಮಂಗಳೂರು ಗೋಲಿಬಾರ್ ಗೆ ಮುನ್ನದಿನ ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಲಾಠಿಚಾರ್ಜ್ ಮಾಡದಂತೆ ಆದೇಶಿಸಿದ್ದೇನೆ ಎಂದು ಹೇಳಿದ್ದರು, ಮರುದಿನವೇ ಗೋಲಿಬಾರ್ ನಡೆದು ಇಬ್ಬರು ಅಮಾಯಕರು ಮೃತರಾದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಮೀರಿ ಆದೇಶ ನೀಡುವ ಕಾಣದ ಕೈಗಳಿವೆ. ಇಲ್ಲದಿದ್ದರೆ ಆದೇಶವಿಲ್ಲದೆ ಪೊಲೀಸರು ಲಾಠಿಚಾರ್ಜ್, ಗೋಲಿಬಾರ್ ಮಾಡಲು ಹೇಗೆ ಸಾಧ್ಯ ಎಂದಿದ್ದಾರೆ.

ಸಿಎಎ-ಎನ್ ಆರ್‌ಸಿ ವಿರೋಧಿಸಿ ಕವಿತೆ ಓದಿದ್ದ ಸಿರಾಜ್ ಬಿಸರಳ್ಳಿ‌‌ ಮತ್ತು ಪತ್ರಕರ್ತ ರಾಜಭಕ್ಷಿ ಅವರ‌ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ.‌ ಪ್ರತಿರೋಧವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಪಕ್ಷ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕುತ್ತಿರುವುದು ಅದರ ಬೌದ್ಧಿಕ‌ ದಿವಾಳಿತನಕ್ಕೆ‌‌ ಸಾಕ್ಷಿ. ಸೋಮಶೇಖರ್ ರೆಡ್ಡಿ, ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಾಖಲಾಗದ ದೇಶದ್ರೋಹದ ಪ್ರಕರಣಗಳು ನಮ್ಮ ಪಕ್ಷದ ನಾಯಕರ ವಿರುದ್ಧ ಮಾತ್ರ ಏಕೆ ದಾಖಲಾಗಿವೆ? ಇದಕ್ಕೆ ಪೊಲೀಸ್ ರಾಜ್ಯವೆನ್ನದೆ ಬೇರೇನು ಕರೆಯಲು ಸಾಧ್ಯ ಎಂದಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಪೊಲೀಸ್ ದೌರ್ಜನ್ಯಗಳ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಯಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...