Homeಮುಖಪುಟಕವಿತೆ ಓದಿದ್ದಕ್ಕಾಗಿ ಸಿರಾಜ್ ಬಿಸರಳ್ಳಿ, ರಾಜಭಕ್ಷಿಯವರ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ- ಸಿದ್ದು

ಕವಿತೆ ಓದಿದ್ದಕ್ಕಾಗಿ ಸಿರಾಜ್ ಬಿಸರಳ್ಳಿ, ರಾಜಭಕ್ಷಿಯವರ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ- ಸಿದ್ದು

- Advertisement -
- Advertisement -

ಪ್ರತಿರೋಧ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೌಂದರ್ಯ. ಸರ್ಕಾರ ರೂಪಿಸಿ ಜಾರಿಗೊಳಿಸುವ ಯಾವುದೇ ಕಾನೂನಿಗೆ ಪರ-ವಿರೋಧದ ಅಭಿಪ್ರಾಯಗಳು ಮೂಡಿಬರುವುದು ಸಾಮಾನ್ಯ. ಹೀಗೆ ಮೂಡಿಬಂದ ಜನರ ಅಭಿಪ್ರಾಯವನ್ನು ಹತ್ತಿಕ್ಕಲು ಸರ್ಕಾರಗಳು ಪ್ರಯತ್ನಿಸಿದರೆ ಅದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಅಲ್ಲಿನ ಸ್ಥಳೀಯರು ಡಿ.18ರ ಬೆಳಿಗ್ಗೆ ಪೊಲೀಸ್ ಇಲಾಖೆಯ ಅನುಮತಿ ಪಡೆದಿದ್ದರು. ಆದರೆ ಇದೇ ದಿನ ಸಂಜೆ ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿ ಮಾಡಿತು. ಈ ವಿಚಾರ ಹೆಚ್ಚು ಪ್ರಚಾರವಾಗದ ಕಾರಣ, ಡಿ.19 ರಂದು 100 ರಿಂದ 150 ಮಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಗೋಪಾಲಗೌಡರ ನೇತೃತ್ವದ ಪೀಪಲ್ಸ್ ಟ್ರಿಬ್ಯುನಲ್ ಮಂಗಳೂರಿಗೆ ತೆರಳಿ ಪರಿಸ್ಥಿತಿಯ ಅಧ್ಯಯನ ಮಾಡಿ ನೀಡಿರುವ ವರದಿಯಲ್ಲಿ, ಆ ದಿನ 144 ಸೆಕ್ಷನ್ ಜಾರಿಗೊಳಿಸುವ ಅಗತ್ಯವೇ ಇರಲಿಲ್ಲ ಎಂದು ಹೇಳಿದೆ ಅಂದರೆ ಇಲ್ಲಿ ಪಿತೂರಿಯಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಗಳೂರಿನ ಸ್ಟೇಟ್ ಬ್ಯಾಂಕ್ ಎಂಬ ಜನನಿಬಿಡ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಲ್ಲದೆ, 144 ಸೆಕ್ಷನ್ ಬಗ್ಗೆ ಮಾಹಿತಿಯಿಲ್ಲದೆ ಪ್ರತಿಭಟನೆಗೆ ಬಂದಿದ್ದ ಪ್ರತಿಭಟನಾಕಾರರ ಮನವೊಲಿಸಿ ಮನೆಗೆ ಕಳುಹಿಸುವ ಬದಲು ಗೋಲಿಬಾರ್ ಮಾಡಿ ಇಬ್ಬರು ಅಮಾಯಕರನ್ನು ಬಲಿ ಪಡೆದಿರುವುದು ದುರಂತ ಎಂದು ಹೇಳಿದ್ದಾರೆ.

ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಸಿಸಿಟಿವಿ ವೀಡಿಯೊ ಹಾಗೂ ಫೋಟೋಗಳಲ್ಲಿ ತೋರಿಸಿರುವಂತೆ ಪ್ರತಿಭಟನಾಕಾರರು ಮಾರಕಾಸ್ತ್ರ ಹೊಂದಿರುವ ಬಗ್ಗೆ ಯಾವುದೇ ಆಧಾರಗಳನ್ನು ಹಾಜರುಪಡಿಸಿಲ್ಲ ಹಾಗೂ ಈ ವೇಳೆ ಏನು 21 ಜನರನ್ನು ಬಂಧಿಸಲಾಗಿತ್ತು, ಅವರಲ್ಲಿ ಯಾರೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ಸೂಕ್ತ ದಾಖಲೆಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬಂಧನಕ್ಕೊಳಗಾಗಿದ್ದ 21 ಜನರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಆದರೆ ಅವರ ಜೊತೆಯಲ್ಲಿದ್ದ ಇಬ್ಬರು ಗೋಲಿಬಾರ್‌ಗೆ ಬಲಿಯಾಗಿದ್ದಾರೆ. ಬಂಧನಕ್ಕೊಳಗಾದವರು ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ ಎಂದಾದರೆ ಗೋಲಿಬಾರ್‌ನಲ್ಲಿ ಮೃತಪಟ್ಟವರು ಕೂಡ ಅಮಾಯಕರಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಮಂಗಳೂರು ಗೋಲಿಬಾರ್ ಗೆ ಮುನ್ನದಿನ ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಲಾಠಿಚಾರ್ಜ್ ಮಾಡದಂತೆ ಆದೇಶಿಸಿದ್ದೇನೆ ಎಂದು ಹೇಳಿದ್ದರು, ಮರುದಿನವೇ ಗೋಲಿಬಾರ್ ನಡೆದು ಇಬ್ಬರು ಅಮಾಯಕರು ಮೃತರಾದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಮೀರಿ ಆದೇಶ ನೀಡುವ ಕಾಣದ ಕೈಗಳಿವೆ. ಇಲ್ಲದಿದ್ದರೆ ಆದೇಶವಿಲ್ಲದೆ ಪೊಲೀಸರು ಲಾಠಿಚಾರ್ಜ್, ಗೋಲಿಬಾರ್ ಮಾಡಲು ಹೇಗೆ ಸಾಧ್ಯ ಎಂದಿದ್ದಾರೆ.

ಸಿಎಎ-ಎನ್ ಆರ್‌ಸಿ ವಿರೋಧಿಸಿ ಕವಿತೆ ಓದಿದ್ದ ಸಿರಾಜ್ ಬಿಸರಳ್ಳಿ‌‌ ಮತ್ತು ಪತ್ರಕರ್ತ ರಾಜಭಕ್ಷಿ ಅವರ‌ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ.‌ ಪ್ರತಿರೋಧವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಪಕ್ಷ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕುತ್ತಿರುವುದು ಅದರ ಬೌದ್ಧಿಕ‌ ದಿವಾಳಿತನಕ್ಕೆ‌‌ ಸಾಕ್ಷಿ. ಸೋಮಶೇಖರ್ ರೆಡ್ಡಿ, ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಾಖಲಾಗದ ದೇಶದ್ರೋಹದ ಪ್ರಕರಣಗಳು ನಮ್ಮ ಪಕ್ಷದ ನಾಯಕರ ವಿರುದ್ಧ ಮಾತ್ರ ಏಕೆ ದಾಖಲಾಗಿವೆ? ಇದಕ್ಕೆ ಪೊಲೀಸ್ ರಾಜ್ಯವೆನ್ನದೆ ಬೇರೇನು ಕರೆಯಲು ಸಾಧ್ಯ ಎಂದಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಪೊಲೀಸ್ ದೌರ್ಜನ್ಯಗಳ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಯಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...