Homeಮುಖಪುಟಕವಿತೆ ಓದಿದ್ದಕ್ಕಾಗಿ ಸಿರಾಜ್ ಬಿಸರಳ್ಳಿ, ರಾಜಭಕ್ಷಿಯವರ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ- ಸಿದ್ದು

ಕವಿತೆ ಓದಿದ್ದಕ್ಕಾಗಿ ಸಿರಾಜ್ ಬಿಸರಳ್ಳಿ, ರಾಜಭಕ್ಷಿಯವರ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ- ಸಿದ್ದು

- Advertisement -
- Advertisement -

ಪ್ರತಿರೋಧ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೌಂದರ್ಯ. ಸರ್ಕಾರ ರೂಪಿಸಿ ಜಾರಿಗೊಳಿಸುವ ಯಾವುದೇ ಕಾನೂನಿಗೆ ಪರ-ವಿರೋಧದ ಅಭಿಪ್ರಾಯಗಳು ಮೂಡಿಬರುವುದು ಸಾಮಾನ್ಯ. ಹೀಗೆ ಮೂಡಿಬಂದ ಜನರ ಅಭಿಪ್ರಾಯವನ್ನು ಹತ್ತಿಕ್ಕಲು ಸರ್ಕಾರಗಳು ಪ್ರಯತ್ನಿಸಿದರೆ ಅದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಅಲ್ಲಿನ ಸ್ಥಳೀಯರು ಡಿ.18ರ ಬೆಳಿಗ್ಗೆ ಪೊಲೀಸ್ ಇಲಾಖೆಯ ಅನುಮತಿ ಪಡೆದಿದ್ದರು. ಆದರೆ ಇದೇ ದಿನ ಸಂಜೆ ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿ ಮಾಡಿತು. ಈ ವಿಚಾರ ಹೆಚ್ಚು ಪ್ರಚಾರವಾಗದ ಕಾರಣ, ಡಿ.19 ರಂದು 100 ರಿಂದ 150 ಮಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಗೋಪಾಲಗೌಡರ ನೇತೃತ್ವದ ಪೀಪಲ್ಸ್ ಟ್ರಿಬ್ಯುನಲ್ ಮಂಗಳೂರಿಗೆ ತೆರಳಿ ಪರಿಸ್ಥಿತಿಯ ಅಧ್ಯಯನ ಮಾಡಿ ನೀಡಿರುವ ವರದಿಯಲ್ಲಿ, ಆ ದಿನ 144 ಸೆಕ್ಷನ್ ಜಾರಿಗೊಳಿಸುವ ಅಗತ್ಯವೇ ಇರಲಿಲ್ಲ ಎಂದು ಹೇಳಿದೆ ಅಂದರೆ ಇಲ್ಲಿ ಪಿತೂರಿಯಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಗಳೂರಿನ ಸ್ಟೇಟ್ ಬ್ಯಾಂಕ್ ಎಂಬ ಜನನಿಬಿಡ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಲ್ಲದೆ, 144 ಸೆಕ್ಷನ್ ಬಗ್ಗೆ ಮಾಹಿತಿಯಿಲ್ಲದೆ ಪ್ರತಿಭಟನೆಗೆ ಬಂದಿದ್ದ ಪ್ರತಿಭಟನಾಕಾರರ ಮನವೊಲಿಸಿ ಮನೆಗೆ ಕಳುಹಿಸುವ ಬದಲು ಗೋಲಿಬಾರ್ ಮಾಡಿ ಇಬ್ಬರು ಅಮಾಯಕರನ್ನು ಬಲಿ ಪಡೆದಿರುವುದು ದುರಂತ ಎಂದು ಹೇಳಿದ್ದಾರೆ.

ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಸಿಸಿಟಿವಿ ವೀಡಿಯೊ ಹಾಗೂ ಫೋಟೋಗಳಲ್ಲಿ ತೋರಿಸಿರುವಂತೆ ಪ್ರತಿಭಟನಾಕಾರರು ಮಾರಕಾಸ್ತ್ರ ಹೊಂದಿರುವ ಬಗ್ಗೆ ಯಾವುದೇ ಆಧಾರಗಳನ್ನು ಹಾಜರುಪಡಿಸಿಲ್ಲ ಹಾಗೂ ಈ ವೇಳೆ ಏನು 21 ಜನರನ್ನು ಬಂಧಿಸಲಾಗಿತ್ತು, ಅವರಲ್ಲಿ ಯಾರೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ಸೂಕ್ತ ದಾಖಲೆಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬಂಧನಕ್ಕೊಳಗಾಗಿದ್ದ 21 ಜನರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಆದರೆ ಅವರ ಜೊತೆಯಲ್ಲಿದ್ದ ಇಬ್ಬರು ಗೋಲಿಬಾರ್‌ಗೆ ಬಲಿಯಾಗಿದ್ದಾರೆ. ಬಂಧನಕ್ಕೊಳಗಾದವರು ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ ಎಂದಾದರೆ ಗೋಲಿಬಾರ್‌ನಲ್ಲಿ ಮೃತಪಟ್ಟವರು ಕೂಡ ಅಮಾಯಕರಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಮಂಗಳೂರು ಗೋಲಿಬಾರ್ ಗೆ ಮುನ್ನದಿನ ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಲಾಠಿಚಾರ್ಜ್ ಮಾಡದಂತೆ ಆದೇಶಿಸಿದ್ದೇನೆ ಎಂದು ಹೇಳಿದ್ದರು, ಮರುದಿನವೇ ಗೋಲಿಬಾರ್ ನಡೆದು ಇಬ್ಬರು ಅಮಾಯಕರು ಮೃತರಾದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಮೀರಿ ಆದೇಶ ನೀಡುವ ಕಾಣದ ಕೈಗಳಿವೆ. ಇಲ್ಲದಿದ್ದರೆ ಆದೇಶವಿಲ್ಲದೆ ಪೊಲೀಸರು ಲಾಠಿಚಾರ್ಜ್, ಗೋಲಿಬಾರ್ ಮಾಡಲು ಹೇಗೆ ಸಾಧ್ಯ ಎಂದಿದ್ದಾರೆ.

ಸಿಎಎ-ಎನ್ ಆರ್‌ಸಿ ವಿರೋಧಿಸಿ ಕವಿತೆ ಓದಿದ್ದ ಸಿರಾಜ್ ಬಿಸರಳ್ಳಿ‌‌ ಮತ್ತು ಪತ್ರಕರ್ತ ರಾಜಭಕ್ಷಿ ಅವರ‌ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ.‌ ಪ್ರತಿರೋಧವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಪಕ್ಷ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕುತ್ತಿರುವುದು ಅದರ ಬೌದ್ಧಿಕ‌ ದಿವಾಳಿತನಕ್ಕೆ‌‌ ಸಾಕ್ಷಿ. ಸೋಮಶೇಖರ್ ರೆಡ್ಡಿ, ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಾಖಲಾಗದ ದೇಶದ್ರೋಹದ ಪ್ರಕರಣಗಳು ನಮ್ಮ ಪಕ್ಷದ ನಾಯಕರ ವಿರುದ್ಧ ಮಾತ್ರ ಏಕೆ ದಾಖಲಾಗಿವೆ? ಇದಕ್ಕೆ ಪೊಲೀಸ್ ರಾಜ್ಯವೆನ್ನದೆ ಬೇರೇನು ಕರೆಯಲು ಸಾಧ್ಯ ಎಂದಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಪೊಲೀಸ್ ದೌರ್ಜನ್ಯಗಳ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಯಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...