Homeಮುಖಪುಟಕವಿತೆ ಓದಿದ್ದಕ್ಕಾಗಿ ಸಿರಾಜ್ ಬಿಸರಳ್ಳಿ, ರಾಜಭಕ್ಷಿಯವರ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ- ಸಿದ್ದು

ಕವಿತೆ ಓದಿದ್ದಕ್ಕಾಗಿ ಸಿರಾಜ್ ಬಿಸರಳ್ಳಿ, ರಾಜಭಕ್ಷಿಯವರ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ- ಸಿದ್ದು

- Advertisement -
- Advertisement -

ಪ್ರತಿರೋಧ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೌಂದರ್ಯ. ಸರ್ಕಾರ ರೂಪಿಸಿ ಜಾರಿಗೊಳಿಸುವ ಯಾವುದೇ ಕಾನೂನಿಗೆ ಪರ-ವಿರೋಧದ ಅಭಿಪ್ರಾಯಗಳು ಮೂಡಿಬರುವುದು ಸಾಮಾನ್ಯ. ಹೀಗೆ ಮೂಡಿಬಂದ ಜನರ ಅಭಿಪ್ರಾಯವನ್ನು ಹತ್ತಿಕ್ಕಲು ಸರ್ಕಾರಗಳು ಪ್ರಯತ್ನಿಸಿದರೆ ಅದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಅಲ್ಲಿನ ಸ್ಥಳೀಯರು ಡಿ.18ರ ಬೆಳಿಗ್ಗೆ ಪೊಲೀಸ್ ಇಲಾಖೆಯ ಅನುಮತಿ ಪಡೆದಿದ್ದರು. ಆದರೆ ಇದೇ ದಿನ ಸಂಜೆ ಪೊಲೀಸ್ ಇಲಾಖೆ 144 ಸೆಕ್ಷನ್ ಜಾರಿ ಮಾಡಿತು. ಈ ವಿಚಾರ ಹೆಚ್ಚು ಪ್ರಚಾರವಾಗದ ಕಾರಣ, ಡಿ.19 ರಂದು 100 ರಿಂದ 150 ಮಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಗೋಪಾಲಗೌಡರ ನೇತೃತ್ವದ ಪೀಪಲ್ಸ್ ಟ್ರಿಬ್ಯುನಲ್ ಮಂಗಳೂರಿಗೆ ತೆರಳಿ ಪರಿಸ್ಥಿತಿಯ ಅಧ್ಯಯನ ಮಾಡಿ ನೀಡಿರುವ ವರದಿಯಲ್ಲಿ, ಆ ದಿನ 144 ಸೆಕ್ಷನ್ ಜಾರಿಗೊಳಿಸುವ ಅಗತ್ಯವೇ ಇರಲಿಲ್ಲ ಎಂದು ಹೇಳಿದೆ ಅಂದರೆ ಇಲ್ಲಿ ಪಿತೂರಿಯಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಗಳೂರಿನ ಸ್ಟೇಟ್ ಬ್ಯಾಂಕ್ ಎಂಬ ಜನನಿಬಿಡ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಲ್ಲದೆ, 144 ಸೆಕ್ಷನ್ ಬಗ್ಗೆ ಮಾಹಿತಿಯಿಲ್ಲದೆ ಪ್ರತಿಭಟನೆಗೆ ಬಂದಿದ್ದ ಪ್ರತಿಭಟನಾಕಾರರ ಮನವೊಲಿಸಿ ಮನೆಗೆ ಕಳುಹಿಸುವ ಬದಲು ಗೋಲಿಬಾರ್ ಮಾಡಿ ಇಬ್ಬರು ಅಮಾಯಕರನ್ನು ಬಲಿ ಪಡೆದಿರುವುದು ದುರಂತ ಎಂದು ಹೇಳಿದ್ದಾರೆ.

ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಸಿಸಿಟಿವಿ ವೀಡಿಯೊ ಹಾಗೂ ಫೋಟೋಗಳಲ್ಲಿ ತೋರಿಸಿರುವಂತೆ ಪ್ರತಿಭಟನಾಕಾರರು ಮಾರಕಾಸ್ತ್ರ ಹೊಂದಿರುವ ಬಗ್ಗೆ ಯಾವುದೇ ಆಧಾರಗಳನ್ನು ಹಾಜರುಪಡಿಸಿಲ್ಲ ಹಾಗೂ ಈ ವೇಳೆ ಏನು 21 ಜನರನ್ನು ಬಂಧಿಸಲಾಗಿತ್ತು, ಅವರಲ್ಲಿ ಯಾರೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ಸೂಕ್ತ ದಾಖಲೆಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ. ಬಂಧನಕ್ಕೊಳಗಾಗಿದ್ದ 21 ಜನರಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಆದರೆ ಅವರ ಜೊತೆಯಲ್ಲಿದ್ದ ಇಬ್ಬರು ಗೋಲಿಬಾರ್‌ಗೆ ಬಲಿಯಾಗಿದ್ದಾರೆ. ಬಂಧನಕ್ಕೊಳಗಾದವರು ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ ಎಂದಾದರೆ ಗೋಲಿಬಾರ್‌ನಲ್ಲಿ ಮೃತಪಟ್ಟವರು ಕೂಡ ಅಮಾಯಕರಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಮಂಗಳೂರು ಗೋಲಿಬಾರ್ ಗೆ ಮುನ್ನದಿನ ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಲಾಠಿಚಾರ್ಜ್ ಮಾಡದಂತೆ ಆದೇಶಿಸಿದ್ದೇನೆ ಎಂದು ಹೇಳಿದ್ದರು, ಮರುದಿನವೇ ಗೋಲಿಬಾರ್ ನಡೆದು ಇಬ್ಬರು ಅಮಾಯಕರು ಮೃತರಾದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಮೀರಿ ಆದೇಶ ನೀಡುವ ಕಾಣದ ಕೈಗಳಿವೆ. ಇಲ್ಲದಿದ್ದರೆ ಆದೇಶವಿಲ್ಲದೆ ಪೊಲೀಸರು ಲಾಠಿಚಾರ್ಜ್, ಗೋಲಿಬಾರ್ ಮಾಡಲು ಹೇಗೆ ಸಾಧ್ಯ ಎಂದಿದ್ದಾರೆ.

ಸಿಎಎ-ಎನ್ ಆರ್‌ಸಿ ವಿರೋಧಿಸಿ ಕವಿತೆ ಓದಿದ್ದ ಸಿರಾಜ್ ಬಿಸರಳ್ಳಿ‌‌ ಮತ್ತು ಪತ್ರಕರ್ತ ರಾಜಭಕ್ಷಿ ಅವರ‌ ಬಂಧನ ಭವಿಷ್ಯದ ಕರಾಳ ದಿನಗಳ ಸೂಚನೆ.‌ ಪ್ರತಿರೋಧವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಪಕ್ಷ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕುತ್ತಿರುವುದು ಅದರ ಬೌದ್ಧಿಕ‌ ದಿವಾಳಿತನಕ್ಕೆ‌‌ ಸಾಕ್ಷಿ. ಸೋಮಶೇಖರ್ ರೆಡ್ಡಿ, ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಾಖಲಾಗದ ದೇಶದ್ರೋಹದ ಪ್ರಕರಣಗಳು ನಮ್ಮ ಪಕ್ಷದ ನಾಯಕರ ವಿರುದ್ಧ ಮಾತ್ರ ಏಕೆ ದಾಖಲಾಗಿವೆ? ಇದಕ್ಕೆ ಪೊಲೀಸ್ ರಾಜ್ಯವೆನ್ನದೆ ಬೇರೇನು ಕರೆಯಲು ಸಾಧ್ಯ ಎಂದಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಪೊಲೀಸ್ ದೌರ್ಜನ್ಯಗಳ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಯಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...