Homeಕರ್ನಾಟಕಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

- Advertisement -
- Advertisement -

ಜನ ಹಣಕ್ಕಿಂತ ಸ್ವಾಭಿಮಾನಕ್ಕೆ ಬೆಲೆ ಕೊಡುತ್ತಾರೆಂಬ ಸತ್ಯ ಅನರ್ಹರಿಗೆ ತಿಳಿದಿಲ್ಲ. ಮಂಡ್ಯದ ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅವರಿಗೆ ಮತ ನೀಡಲಿಲ್ಲವೇ? ಹಾಗೆ ಇಲ್ಲಿನ ಮತದಾರರೂ ಹಣಕ್ಕೆ ಸ್ವಾಭಿಮಾನವನ್ನು ಮಾರಿಕೊಳ್ಳುವುದಿಲ್ಲ ಎಂದು ನಂಬಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಉಪ ಚುನಾವಣೆಗೆ ಕಹಳೆ ಊದಿದ್ದಾರೆ.

ಹೊಸಕೋಟೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ‘ಸ್ವಾಭಿಮಾನಿ ಸಮಾವೇಶದಲ್ಲಿ’ ಭಾಗವಹಿಸಿ ಮಾತನಾಡಿದ ಅವರು, ಎಂಬಿಟಿ ನಾಗರಾಜ್ ಅವರು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ತಮ್ಮನ್ನು ತಾವು ಮಾರಿಕೊಂಡು ಬಿಜೆಪಿ ಪಕ್ಷ ಸೇರಿರುವುದರ ಫಲ ಇಂದು ಹೊಸಕೋಟೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವಂತಾಗಿದೆ. ಜನರ ತೀರ್ಪನ್ನು ಧಿಕ್ಕರಿಸಿದವರಿಗೆ ಈ ಚುನಾವಣೆ ತಕ್ಕ ಪಾಠವಾಗಬೇಕು ಎಂದಿದ್ದಾರೆ.

ಕ್ಷೇತ್ರದ ಮತದಾರರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ. ಬೆಳಿಗ್ಗೆಯಿಂದ ರಾತ್ರಿ ಹನ್ನೆರಡು ಗಂಟೆಯವರೆಗೂ ನಮ್ಮ ಮನೆಯಲ್ಲಿ ಕೂತು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ವಾಪಸು ಪಡೆಯುತ್ತೇನೆ ಎಂದು ಮಾತು ಕೊಟ್ಟು, ನಮ್ಮ ಮನೆ ಗೇಟಿನ ಬಳಿ ಹೋದಕೂಡಲೇ ಸುಧಾಕರ್ ಅವರ ಜೊತೆ ಮಾತನಾಡಿ ರಾಜೀನಾಮೆ ಹಿಂಪಡೆಯುವ ಬಗ್ಗೆ ನಿರ್ಧರಿಸುತ್ತೇನೆ ಎಂದು ಮಾತು ಬದಲಿಸಿದವರು ನಾಗರಾಜ್, ಇಂಥವರು ನಂಬಿಕೆಗೆ ಅರ್ಹರೇ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಹಣ ಹೆಚ್ಚಿದ್ದಲ್ಲಿ ಭಯವಿರುತ್ತದೆ. ಕಾಂಗ್ರೆಸ್ ಪಕ್ಷ ಎಲ್ಲ‌ ರೀತಿಯ ಅಧಿಕಾಗಳನ್ನು ನೀಡಿದ್ದರೂ ನಾಗರಾಜ್ ಅವರು ಪಕ್ಷ ತೊರೆಯಲು ಕಾರಣ ಕೇಂದ್ರ ಸರ್ಕಾರದ ಭಯವಿರಬಹುದು. ಅವರು ಪಕ್ಷ ತೊರೆದದ್ದು ನನಗೆ ಬೇಸರವಿಲ್ಲ, ಆದರೆ ಕ್ಷೇತ್ರದ ಮತದಾರರ ಬೆನ್ನಿಗೆ ಚೂರಿ ಹಾಕಿ ರಾತ್ರೋರಾತ್ರಿ ಬಿಜೆಪಿ ಸೇರಿರುವುದು ಸರಿಯಲ್ಲ ಅಷ್ಟೆ. ಎಂಟಿಬಿ ನಾಗರಾಜ್ ಅವರ ಬಳಿ ಹಣವಿದೆ, ಜನರನ್ನು ಹಣ ಕೊಟ್ಟು ಕೊಂಡುಕೊಳ್ಳಬಹುದು ಎಂದು ತಪ್ಪು ತಿಳಿದಿದ್ದಾರೆ ಎಂದರು.

ದೇಶದ ಯುವ ಜನತೆಗೆ ಉದ್ಯೋಗವಿಲ್ಲ, ಬಡತನ, ಅಪೌಷ್ಟಿಕತೆ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿದೆ. ಸಮಾಜದ ಎರಡು ಕೋಮುಗಳ ನಡುವೆ ಬೆಂಕಿಹಚ್ಚಿ, ತನ್ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಪಕ್ಷಕ್ಕೆ ಎಂಟಿಬಿ ನಾಗರಾಜ್ ಸೇರಿದ್ದಾರಲ್ಲ, ಅವರಿಗೆ ಜನಪರ ಕಾಳಜಿ ಮತ್ತು ತಾವು ನಂಬಿದ ಸಿದ್ದಾಂತದ ಬಗ್ಗೆ ಗೌರವವೇನಾದರೂ ಇದೆಯೇ? ಎಂಟಿಬಿ ನಾಗರಾಜ್ ಸ್ಪರ್ಧೆ ಇನ್ನೂ ಖಚಿತಗೊಂಡಿಲ್ಲ. ಅವರ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಅವರೇ ಸ್ಪರ್ಧಿಸಲಿ ಅಥವಾ ಅವರ ಪರವಾಗಿ ಯಾರಾದರೂ ಸ್ಪರ್ಧಿಸಲಿ, ಹೊಸಕೋಟೆ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕ್ಷೇತ್ರದ ಜನರ ಸ್ವಾಭಿಮಾನ ಎತ್ತಿಹಿಡಿಯಿರಿ ಎಂದು ಮನವಿ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...