Homeಕರ್ನಾಟಕಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

- Advertisement -
- Advertisement -

ಜನ ಹಣಕ್ಕಿಂತ ಸ್ವಾಭಿಮಾನಕ್ಕೆ ಬೆಲೆ ಕೊಡುತ್ತಾರೆಂಬ ಸತ್ಯ ಅನರ್ಹರಿಗೆ ತಿಳಿದಿಲ್ಲ. ಮಂಡ್ಯದ ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅವರಿಗೆ ಮತ ನೀಡಲಿಲ್ಲವೇ? ಹಾಗೆ ಇಲ್ಲಿನ ಮತದಾರರೂ ಹಣಕ್ಕೆ ಸ್ವಾಭಿಮಾನವನ್ನು ಮಾರಿಕೊಳ್ಳುವುದಿಲ್ಲ ಎಂದು ನಂಬಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಉಪ ಚುನಾವಣೆಗೆ ಕಹಳೆ ಊದಿದ್ದಾರೆ.

ಹೊಸಕೋಟೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ‘ಸ್ವಾಭಿಮಾನಿ ಸಮಾವೇಶದಲ್ಲಿ’ ಭಾಗವಹಿಸಿ ಮಾತನಾಡಿದ ಅವರು, ಎಂಬಿಟಿ ನಾಗರಾಜ್ ಅವರು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ತಮ್ಮನ್ನು ತಾವು ಮಾರಿಕೊಂಡು ಬಿಜೆಪಿ ಪಕ್ಷ ಸೇರಿರುವುದರ ಫಲ ಇಂದು ಹೊಸಕೋಟೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವಂತಾಗಿದೆ. ಜನರ ತೀರ್ಪನ್ನು ಧಿಕ್ಕರಿಸಿದವರಿಗೆ ಈ ಚುನಾವಣೆ ತಕ್ಕ ಪಾಠವಾಗಬೇಕು ಎಂದಿದ್ದಾರೆ.

ಕ್ಷೇತ್ರದ ಮತದಾರರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ. ಬೆಳಿಗ್ಗೆಯಿಂದ ರಾತ್ರಿ ಹನ್ನೆರಡು ಗಂಟೆಯವರೆಗೂ ನಮ್ಮ ಮನೆಯಲ್ಲಿ ಕೂತು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ವಾಪಸು ಪಡೆಯುತ್ತೇನೆ ಎಂದು ಮಾತು ಕೊಟ್ಟು, ನಮ್ಮ ಮನೆ ಗೇಟಿನ ಬಳಿ ಹೋದಕೂಡಲೇ ಸುಧಾಕರ್ ಅವರ ಜೊತೆ ಮಾತನಾಡಿ ರಾಜೀನಾಮೆ ಹಿಂಪಡೆಯುವ ಬಗ್ಗೆ ನಿರ್ಧರಿಸುತ್ತೇನೆ ಎಂದು ಮಾತು ಬದಲಿಸಿದವರು ನಾಗರಾಜ್, ಇಂಥವರು ನಂಬಿಕೆಗೆ ಅರ್ಹರೇ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಹಣ ಹೆಚ್ಚಿದ್ದಲ್ಲಿ ಭಯವಿರುತ್ತದೆ. ಕಾಂಗ್ರೆಸ್ ಪಕ್ಷ ಎಲ್ಲ‌ ರೀತಿಯ ಅಧಿಕಾಗಳನ್ನು ನೀಡಿದ್ದರೂ ನಾಗರಾಜ್ ಅವರು ಪಕ್ಷ ತೊರೆಯಲು ಕಾರಣ ಕೇಂದ್ರ ಸರ್ಕಾರದ ಭಯವಿರಬಹುದು. ಅವರು ಪಕ್ಷ ತೊರೆದದ್ದು ನನಗೆ ಬೇಸರವಿಲ್ಲ, ಆದರೆ ಕ್ಷೇತ್ರದ ಮತದಾರರ ಬೆನ್ನಿಗೆ ಚೂರಿ ಹಾಕಿ ರಾತ್ರೋರಾತ್ರಿ ಬಿಜೆಪಿ ಸೇರಿರುವುದು ಸರಿಯಲ್ಲ ಅಷ್ಟೆ. ಎಂಟಿಬಿ ನಾಗರಾಜ್ ಅವರ ಬಳಿ ಹಣವಿದೆ, ಜನರನ್ನು ಹಣ ಕೊಟ್ಟು ಕೊಂಡುಕೊಳ್ಳಬಹುದು ಎಂದು ತಪ್ಪು ತಿಳಿದಿದ್ದಾರೆ ಎಂದರು.

ದೇಶದ ಯುವ ಜನತೆಗೆ ಉದ್ಯೋಗವಿಲ್ಲ, ಬಡತನ, ಅಪೌಷ್ಟಿಕತೆ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿದೆ. ಸಮಾಜದ ಎರಡು ಕೋಮುಗಳ ನಡುವೆ ಬೆಂಕಿಹಚ್ಚಿ, ತನ್ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಪಕ್ಷಕ್ಕೆ ಎಂಟಿಬಿ ನಾಗರಾಜ್ ಸೇರಿದ್ದಾರಲ್ಲ, ಅವರಿಗೆ ಜನಪರ ಕಾಳಜಿ ಮತ್ತು ತಾವು ನಂಬಿದ ಸಿದ್ದಾಂತದ ಬಗ್ಗೆ ಗೌರವವೇನಾದರೂ ಇದೆಯೇ? ಎಂಟಿಬಿ ನಾಗರಾಜ್ ಸ್ಪರ್ಧೆ ಇನ್ನೂ ಖಚಿತಗೊಂಡಿಲ್ಲ. ಅವರ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಅವರೇ ಸ್ಪರ್ಧಿಸಲಿ ಅಥವಾ ಅವರ ಪರವಾಗಿ ಯಾರಾದರೂ ಸ್ಪರ್ಧಿಸಲಿ, ಹೊಸಕೋಟೆ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕ್ಷೇತ್ರದ ಜನರ ಸ್ವಾಭಿಮಾನ ಎತ್ತಿಹಿಡಿಯಿರಿ ಎಂದು ಮನವಿ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...