Homeಕರ್ನಾಟಕಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

- Advertisement -
- Advertisement -

ಜನ ಹಣಕ್ಕಿಂತ ಸ್ವಾಭಿಮಾನಕ್ಕೆ ಬೆಲೆ ಕೊಡುತ್ತಾರೆಂಬ ಸತ್ಯ ಅನರ್ಹರಿಗೆ ತಿಳಿದಿಲ್ಲ. ಮಂಡ್ಯದ ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅವರಿಗೆ ಮತ ನೀಡಲಿಲ್ಲವೇ? ಹಾಗೆ ಇಲ್ಲಿನ ಮತದಾರರೂ ಹಣಕ್ಕೆ ಸ್ವಾಭಿಮಾನವನ್ನು ಮಾರಿಕೊಳ್ಳುವುದಿಲ್ಲ ಎಂದು ನಂಬಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಉಪ ಚುನಾವಣೆಗೆ ಕಹಳೆ ಊದಿದ್ದಾರೆ.

ಹೊಸಕೋಟೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ‘ಸ್ವಾಭಿಮಾನಿ ಸಮಾವೇಶದಲ್ಲಿ’ ಭಾಗವಹಿಸಿ ಮಾತನಾಡಿದ ಅವರು, ಎಂಬಿಟಿ ನಾಗರಾಜ್ ಅವರು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ತಮ್ಮನ್ನು ತಾವು ಮಾರಿಕೊಂಡು ಬಿಜೆಪಿ ಪಕ್ಷ ಸೇರಿರುವುದರ ಫಲ ಇಂದು ಹೊಸಕೋಟೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವಂತಾಗಿದೆ. ಜನರ ತೀರ್ಪನ್ನು ಧಿಕ್ಕರಿಸಿದವರಿಗೆ ಈ ಚುನಾವಣೆ ತಕ್ಕ ಪಾಠವಾಗಬೇಕು ಎಂದಿದ್ದಾರೆ.

ಕ್ಷೇತ್ರದ ಮತದಾರರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ. ಬೆಳಿಗ್ಗೆಯಿಂದ ರಾತ್ರಿ ಹನ್ನೆರಡು ಗಂಟೆಯವರೆಗೂ ನಮ್ಮ ಮನೆಯಲ್ಲಿ ಕೂತು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ವಾಪಸು ಪಡೆಯುತ್ತೇನೆ ಎಂದು ಮಾತು ಕೊಟ್ಟು, ನಮ್ಮ ಮನೆ ಗೇಟಿನ ಬಳಿ ಹೋದಕೂಡಲೇ ಸುಧಾಕರ್ ಅವರ ಜೊತೆ ಮಾತನಾಡಿ ರಾಜೀನಾಮೆ ಹಿಂಪಡೆಯುವ ಬಗ್ಗೆ ನಿರ್ಧರಿಸುತ್ತೇನೆ ಎಂದು ಮಾತು ಬದಲಿಸಿದವರು ನಾಗರಾಜ್, ಇಂಥವರು ನಂಬಿಕೆಗೆ ಅರ್ಹರೇ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಹಣ ಹೆಚ್ಚಿದ್ದಲ್ಲಿ ಭಯವಿರುತ್ತದೆ. ಕಾಂಗ್ರೆಸ್ ಪಕ್ಷ ಎಲ್ಲ‌ ರೀತಿಯ ಅಧಿಕಾಗಳನ್ನು ನೀಡಿದ್ದರೂ ನಾಗರಾಜ್ ಅವರು ಪಕ್ಷ ತೊರೆಯಲು ಕಾರಣ ಕೇಂದ್ರ ಸರ್ಕಾರದ ಭಯವಿರಬಹುದು. ಅವರು ಪಕ್ಷ ತೊರೆದದ್ದು ನನಗೆ ಬೇಸರವಿಲ್ಲ, ಆದರೆ ಕ್ಷೇತ್ರದ ಮತದಾರರ ಬೆನ್ನಿಗೆ ಚೂರಿ ಹಾಕಿ ರಾತ್ರೋರಾತ್ರಿ ಬಿಜೆಪಿ ಸೇರಿರುವುದು ಸರಿಯಲ್ಲ ಅಷ್ಟೆ. ಎಂಟಿಬಿ ನಾಗರಾಜ್ ಅವರ ಬಳಿ ಹಣವಿದೆ, ಜನರನ್ನು ಹಣ ಕೊಟ್ಟು ಕೊಂಡುಕೊಳ್ಳಬಹುದು ಎಂದು ತಪ್ಪು ತಿಳಿದಿದ್ದಾರೆ ಎಂದರು.

ದೇಶದ ಯುವ ಜನತೆಗೆ ಉದ್ಯೋಗವಿಲ್ಲ, ಬಡತನ, ಅಪೌಷ್ಟಿಕತೆ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿದೆ. ಸಮಾಜದ ಎರಡು ಕೋಮುಗಳ ನಡುವೆ ಬೆಂಕಿಹಚ್ಚಿ, ತನ್ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಪಕ್ಷಕ್ಕೆ ಎಂಟಿಬಿ ನಾಗರಾಜ್ ಸೇರಿದ್ದಾರಲ್ಲ, ಅವರಿಗೆ ಜನಪರ ಕಾಳಜಿ ಮತ್ತು ತಾವು ನಂಬಿದ ಸಿದ್ದಾಂತದ ಬಗ್ಗೆ ಗೌರವವೇನಾದರೂ ಇದೆಯೇ? ಎಂಟಿಬಿ ನಾಗರಾಜ್ ಸ್ಪರ್ಧೆ ಇನ್ನೂ ಖಚಿತಗೊಂಡಿಲ್ಲ. ಅವರ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಅವರೇ ಸ್ಪರ್ಧಿಸಲಿ ಅಥವಾ ಅವರ ಪರವಾಗಿ ಯಾರಾದರೂ ಸ್ಪರ್ಧಿಸಲಿ, ಹೊಸಕೋಟೆ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕ್ಷೇತ್ರದ ಜನರ ಸ್ವಾಭಿಮಾನ ಎತ್ತಿಹಿಡಿಯಿರಿ ಎಂದು ಮನವಿ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...