Homeಕರ್ನಾಟಕಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

- Advertisement -
- Advertisement -

ಜನ ಹಣಕ್ಕಿಂತ ಸ್ವಾಭಿಮಾನಕ್ಕೆ ಬೆಲೆ ಕೊಡುತ್ತಾರೆಂಬ ಸತ್ಯ ಅನರ್ಹರಿಗೆ ತಿಳಿದಿಲ್ಲ. ಮಂಡ್ಯದ ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅವರಿಗೆ ಮತ ನೀಡಲಿಲ್ಲವೇ? ಹಾಗೆ ಇಲ್ಲಿನ ಮತದಾರರೂ ಹಣಕ್ಕೆ ಸ್ವಾಭಿಮಾನವನ್ನು ಮಾರಿಕೊಳ್ಳುವುದಿಲ್ಲ ಎಂದು ನಂಬಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಉಪ ಚುನಾವಣೆಗೆ ಕಹಳೆ ಊದಿದ್ದಾರೆ.

ಹೊಸಕೋಟೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ‘ಸ್ವಾಭಿಮಾನಿ ಸಮಾವೇಶದಲ್ಲಿ’ ಭಾಗವಹಿಸಿ ಮಾತನಾಡಿದ ಅವರು, ಎಂಬಿಟಿ ನಾಗರಾಜ್ ಅವರು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ತಮ್ಮನ್ನು ತಾವು ಮಾರಿಕೊಂಡು ಬಿಜೆಪಿ ಪಕ್ಷ ಸೇರಿರುವುದರ ಫಲ ಇಂದು ಹೊಸಕೋಟೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವಂತಾಗಿದೆ. ಜನರ ತೀರ್ಪನ್ನು ಧಿಕ್ಕರಿಸಿದವರಿಗೆ ಈ ಚುನಾವಣೆ ತಕ್ಕ ಪಾಠವಾಗಬೇಕು ಎಂದಿದ್ದಾರೆ.

ಕ್ಷೇತ್ರದ ಮತದಾರರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ. ಬೆಳಿಗ್ಗೆಯಿಂದ ರಾತ್ರಿ ಹನ್ನೆರಡು ಗಂಟೆಯವರೆಗೂ ನಮ್ಮ ಮನೆಯಲ್ಲಿ ಕೂತು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ವಾಪಸು ಪಡೆಯುತ್ತೇನೆ ಎಂದು ಮಾತು ಕೊಟ್ಟು, ನಮ್ಮ ಮನೆ ಗೇಟಿನ ಬಳಿ ಹೋದಕೂಡಲೇ ಸುಧಾಕರ್ ಅವರ ಜೊತೆ ಮಾತನಾಡಿ ರಾಜೀನಾಮೆ ಹಿಂಪಡೆಯುವ ಬಗ್ಗೆ ನಿರ್ಧರಿಸುತ್ತೇನೆ ಎಂದು ಮಾತು ಬದಲಿಸಿದವರು ನಾಗರಾಜ್, ಇಂಥವರು ನಂಬಿಕೆಗೆ ಅರ್ಹರೇ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಹಣ ಹೆಚ್ಚಿದ್ದಲ್ಲಿ ಭಯವಿರುತ್ತದೆ. ಕಾಂಗ್ರೆಸ್ ಪಕ್ಷ ಎಲ್ಲ‌ ರೀತಿಯ ಅಧಿಕಾಗಳನ್ನು ನೀಡಿದ್ದರೂ ನಾಗರಾಜ್ ಅವರು ಪಕ್ಷ ತೊರೆಯಲು ಕಾರಣ ಕೇಂದ್ರ ಸರ್ಕಾರದ ಭಯವಿರಬಹುದು. ಅವರು ಪಕ್ಷ ತೊರೆದದ್ದು ನನಗೆ ಬೇಸರವಿಲ್ಲ, ಆದರೆ ಕ್ಷೇತ್ರದ ಮತದಾರರ ಬೆನ್ನಿಗೆ ಚೂರಿ ಹಾಕಿ ರಾತ್ರೋರಾತ್ರಿ ಬಿಜೆಪಿ ಸೇರಿರುವುದು ಸರಿಯಲ್ಲ ಅಷ್ಟೆ. ಎಂಟಿಬಿ ನಾಗರಾಜ್ ಅವರ ಬಳಿ ಹಣವಿದೆ, ಜನರನ್ನು ಹಣ ಕೊಟ್ಟು ಕೊಂಡುಕೊಳ್ಳಬಹುದು ಎಂದು ತಪ್ಪು ತಿಳಿದಿದ್ದಾರೆ ಎಂದರು.

ದೇಶದ ಯುವ ಜನತೆಗೆ ಉದ್ಯೋಗವಿಲ್ಲ, ಬಡತನ, ಅಪೌಷ್ಟಿಕತೆ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿದೆ. ಸಮಾಜದ ಎರಡು ಕೋಮುಗಳ ನಡುವೆ ಬೆಂಕಿಹಚ್ಚಿ, ತನ್ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಪಕ್ಷಕ್ಕೆ ಎಂಟಿಬಿ ನಾಗರಾಜ್ ಸೇರಿದ್ದಾರಲ್ಲ, ಅವರಿಗೆ ಜನಪರ ಕಾಳಜಿ ಮತ್ತು ತಾವು ನಂಬಿದ ಸಿದ್ದಾಂತದ ಬಗ್ಗೆ ಗೌರವವೇನಾದರೂ ಇದೆಯೇ? ಎಂಟಿಬಿ ನಾಗರಾಜ್ ಸ್ಪರ್ಧೆ ಇನ್ನೂ ಖಚಿತಗೊಂಡಿಲ್ಲ. ಅವರ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಅವರೇ ಸ್ಪರ್ಧಿಸಲಿ ಅಥವಾ ಅವರ ಪರವಾಗಿ ಯಾರಾದರೂ ಸ್ಪರ್ಧಿಸಲಿ, ಹೊಸಕೋಟೆ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕ್ಷೇತ್ರದ ಜನರ ಸ್ವಾಭಿಮಾನ ಎತ್ತಿಹಿಡಿಯಿರಿ ಎಂದು ಮನವಿ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...