Homeಕರ್ನಾಟಕಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅಂಬರೀಶ್ ರನ್ನು ಗೆಲ್ಲಿಸಿದ್ದಾರೆ: ಸಿದ್ದು

- Advertisement -
- Advertisement -

ಜನ ಹಣಕ್ಕಿಂತ ಸ್ವಾಭಿಮಾನಕ್ಕೆ ಬೆಲೆ ಕೊಡುತ್ತಾರೆಂಬ ಸತ್ಯ ಅನರ್ಹರಿಗೆ ತಿಳಿದಿಲ್ಲ. ಮಂಡ್ಯದ ಜನ ಸ್ವಾಭಿಮಾನಕ್ಕೆ ಬೆಲೆಕೊಟ್ಟು ಸುಮಲತಾ ಅವರಿಗೆ ಮತ ನೀಡಲಿಲ್ಲವೇ? ಹಾಗೆ ಇಲ್ಲಿನ ಮತದಾರರೂ ಹಣಕ್ಕೆ ಸ್ವಾಭಿಮಾನವನ್ನು ಮಾರಿಕೊಳ್ಳುವುದಿಲ್ಲ ಎಂದು ನಂಬಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಉಪ ಚುನಾವಣೆಗೆ ಕಹಳೆ ಊದಿದ್ದಾರೆ.

ಹೊಸಕೋಟೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ‘ಸ್ವಾಭಿಮಾನಿ ಸಮಾವೇಶದಲ್ಲಿ’ ಭಾಗವಹಿಸಿ ಮಾತನಾಡಿದ ಅವರು, ಎಂಬಿಟಿ ನಾಗರಾಜ್ ಅವರು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ತಮ್ಮನ್ನು ತಾವು ಮಾರಿಕೊಂಡು ಬಿಜೆಪಿ ಪಕ್ಷ ಸೇರಿರುವುದರ ಫಲ ಇಂದು ಹೊಸಕೋಟೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವಂತಾಗಿದೆ. ಜನರ ತೀರ್ಪನ್ನು ಧಿಕ್ಕರಿಸಿದವರಿಗೆ ಈ ಚುನಾವಣೆ ತಕ್ಕ ಪಾಠವಾಗಬೇಕು ಎಂದಿದ್ದಾರೆ.

ಕ್ಷೇತ್ರದ ಮತದಾರರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ. ಬೆಳಿಗ್ಗೆಯಿಂದ ರಾತ್ರಿ ಹನ್ನೆರಡು ಗಂಟೆಯವರೆಗೂ ನಮ್ಮ ಮನೆಯಲ್ಲಿ ಕೂತು ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ವಾಪಸು ಪಡೆಯುತ್ತೇನೆ ಎಂದು ಮಾತು ಕೊಟ್ಟು, ನಮ್ಮ ಮನೆ ಗೇಟಿನ ಬಳಿ ಹೋದಕೂಡಲೇ ಸುಧಾಕರ್ ಅವರ ಜೊತೆ ಮಾತನಾಡಿ ರಾಜೀನಾಮೆ ಹಿಂಪಡೆಯುವ ಬಗ್ಗೆ ನಿರ್ಧರಿಸುತ್ತೇನೆ ಎಂದು ಮಾತು ಬದಲಿಸಿದವರು ನಾಗರಾಜ್, ಇಂಥವರು ನಂಬಿಕೆಗೆ ಅರ್ಹರೇ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಹಣ ಹೆಚ್ಚಿದ್ದಲ್ಲಿ ಭಯವಿರುತ್ತದೆ. ಕಾಂಗ್ರೆಸ್ ಪಕ್ಷ ಎಲ್ಲ‌ ರೀತಿಯ ಅಧಿಕಾಗಳನ್ನು ನೀಡಿದ್ದರೂ ನಾಗರಾಜ್ ಅವರು ಪಕ್ಷ ತೊರೆಯಲು ಕಾರಣ ಕೇಂದ್ರ ಸರ್ಕಾರದ ಭಯವಿರಬಹುದು. ಅವರು ಪಕ್ಷ ತೊರೆದದ್ದು ನನಗೆ ಬೇಸರವಿಲ್ಲ, ಆದರೆ ಕ್ಷೇತ್ರದ ಮತದಾರರ ಬೆನ್ನಿಗೆ ಚೂರಿ ಹಾಕಿ ರಾತ್ರೋರಾತ್ರಿ ಬಿಜೆಪಿ ಸೇರಿರುವುದು ಸರಿಯಲ್ಲ ಅಷ್ಟೆ. ಎಂಟಿಬಿ ನಾಗರಾಜ್ ಅವರ ಬಳಿ ಹಣವಿದೆ, ಜನರನ್ನು ಹಣ ಕೊಟ್ಟು ಕೊಂಡುಕೊಳ್ಳಬಹುದು ಎಂದು ತಪ್ಪು ತಿಳಿದಿದ್ದಾರೆ ಎಂದರು.

ದೇಶದ ಯುವ ಜನತೆಗೆ ಉದ್ಯೋಗವಿಲ್ಲ, ಬಡತನ, ಅಪೌಷ್ಟಿಕತೆ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿದೆ. ಸಮಾಜದ ಎರಡು ಕೋಮುಗಳ ನಡುವೆ ಬೆಂಕಿಹಚ್ಚಿ, ತನ್ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಪಕ್ಷಕ್ಕೆ ಎಂಟಿಬಿ ನಾಗರಾಜ್ ಸೇರಿದ್ದಾರಲ್ಲ, ಅವರಿಗೆ ಜನಪರ ಕಾಳಜಿ ಮತ್ತು ತಾವು ನಂಬಿದ ಸಿದ್ದಾಂತದ ಬಗ್ಗೆ ಗೌರವವೇನಾದರೂ ಇದೆಯೇ? ಎಂಟಿಬಿ ನಾಗರಾಜ್ ಸ್ಪರ್ಧೆ ಇನ್ನೂ ಖಚಿತಗೊಂಡಿಲ್ಲ. ಅವರ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಅವರೇ ಸ್ಪರ್ಧಿಸಲಿ ಅಥವಾ ಅವರ ಪರವಾಗಿ ಯಾರಾದರೂ ಸ್ಪರ್ಧಿಸಲಿ, ಹೊಸಕೋಟೆ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕ್ಷೇತ್ರದ ಜನರ ಸ್ವಾಭಿಮಾನ ಎತ್ತಿಹಿಡಿಯಿರಿ ಎಂದು ಮನವಿ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...