Homeಕರ್ನಾಟಕಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ...

ಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ…

- Advertisement -
- Advertisement -

ಕರ್ನಾಟಕದ ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು. ಈ ಹಿಂದೆಯೂ ಕರ್ನಾಟಕದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿ, ಆಡಳಿತ ನಡೆಸಿವೆ. ಇದೇನು ಮೊದಲ ಬಾರಿ ರಚನೆಯಾಗುತ್ತಿರುವುದಲ್ಲ.

2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಅವರಿಗೆ ಕೇವಕ ಶೇ.36.34% ರಷ್ಟು ಮತಪ್ರಮಾಣ ಸಿಕ್ಕಿದೆ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು. ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ.

ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ?

ಜನಸೇವೆಯ ಉದ್ದೇಶದಿಂದ ರಾಜಕಾರಣಕ್ಕೆ ಬಂದಿದ್ದೇವೆ. ಇದು ನಮಗೆ ವೃತ್ತಿಯಲ್ಲ, ಪ್ರವೃತ್ತಿ. ಇಲ್ಲಿಗೆ ಬಂದ ನಂತರ ಒಂದು ಸಿದ್ದಾಂತವಿಲ್ಲದೇ ಹೋದರೆ ಬಂದದ್ದು ವ್ಯರ್ಥವಾಗುತ್ತದೆ. ನಾನು ಸಂವಿಧಾನದಲ್ಲಿ ನಂಬಿಕೆಯಿಟ್ಟವನು. ದೇಶದ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಉದ್ದೇಶ. ಸಾಮಾಜಿಕ ನ್ಯಾಯ, ಸಮಾನ ಅವಕಾಶ ಇವು ನನ್ನ ಆಶಯಗಳು ಕೂಡ. ಅಧಿಕಾರ ಯಾರೂ ಬೇಕಾದರೂ ಮಾಡಬಹುದು, ಸರ್ಕಾರ ಯಾವುದು ಬೇಕಾದರೂ ಬರಬಹುದು. ಯಾರೂ ಇಲ್ಲಿ ಶಾಶ್ವತರಲ್ಲ. ಆದರೆ ಪಕ್ಷಾಂತರ ಎಂಬ ಪ್ರಜಾಪ್ರಭುತ್ವಕ್ಕಂಟಿದ ರೋಗದ ಬಗ್ಗೆ ಇಂದು ಚರ್ಚೆಯಾಗಬೇಕಿದೆ. ಇದರ ಬಗ್ಗೆ ಜನರನ್ನು ಎಚ್ಚರಿಸಬೇಕು. ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಬಿಜೆಪಿಯ ಈ ನಡೆ ನಾಚಿಕೆಗೇಡಿನ ಸಂಗತಿಯಲ್ಲವೇ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆದಿದ್ದ ಕಾರಣದಿಂದ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು, ಜೊತೆಗೆ ಹದಿನೈದು ದಿನಗಳ ಕಾಲಾವಕಾಶ ಸಹ ನೀಡಿದ್ದರು. ಬಹುಮತ ಸಾಬೀತುಪಡಿಸುವಲ್ಲಿ ಅವರು ವಿಫಲರಾದ ನಂತರವೇ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು. ಹಾಗಾಗಿ ಇದೇನು ಜನಾಭಿಪ್ರಾಯದ ವಿರುದ್ಧವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚು ಸ್ಥಾನ ಪಡೆಯದಿದ್ದರೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿಲ್ಲವೇ? ಕರ್ನಾಟಕದಲ್ಲಿ ನಮ್ಮದು ಅಪವಿತ್ರ ಮೈತ್ರಿಯಾದರೇ, ಗೋವಾದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿರುವುದು ಅಪವಿತ್ರ ಮೈತ್ರಿಯಲ್ಲವೇ?

ತಮಿಳುನಾಡಲ್ಲಿ ಪಳನಿಸ್ವಾಮಿಯವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸ್ಸು ಪಡೆಯುತ್ತೇವೆ ಎಂದು ಕೆಲವು ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಿದ್ದರು. ಅಲ್ಲಿ ವಿಪ್ ಸಹ ನೀಡದೆ ಆ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಯಾವುದೇ ಶಾಸಕ ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದರೆ ತಕ್ಷಣ ಅವರನ್ನು ವಜಾ ಮಾಡುವ ಅಧಿಕಾರವಿದೆ. ಇಂದು ಚರ್ಚೆಯಾಗಬೇಕಿರುವ ಮುಖ್ಯ ವಿಚಾರ ಶಾಸಕರ ಪಕ್ಷಾಂತರದ್ದು. ಇದೇ ರೀತಿಯ ಕೀಳು ಮನೋಭಾವ ಮುಂದುವರೆದರೆ ಯಾವ ಸರ್ಕಾರ ಕೂಡ ಸ್ಥಿರವಾಗಿ ನಿಲ್ಲಲಾರದು. ಬಿಜೆಪಿಯವರು ನಮ್ಮ ಶಾಸಕರನ್ನು ಸಾರಾಸಗಟಾಗಿ ಖರೀದಿ ಮಾಡಿದ್ದಾರೆ.‌ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಇದನ್ನು ರಾಜ್ಯದ ಜನ ಒಪ್ಪುತ್ತಾರೆಯೇ?

ಇಷ್ಟೆಲ್ಲಾ ನಾಟಕ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರೂ ಯಡಿಯೂರಪ್ಪನವರು ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲು ಆಗುವುದಿಲ್ಲ. 2008ರಲ್ಲೂ ಇದೇ ಪರಿಸ್ಥಿತಿಯನ್ನು ಅವರು ಎದುರಿಸಿದ್ದಾರೆ. ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಇವರೆಲ್ಲ ಅಂದು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದವರಲ್ಲವೇ? ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ?

ಕರ್ನಾಟಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಲವು ಜನಪರ ಹೋರಾಟಗಳನ್ನು ಕಂಡ ನೆಲವಿದು. ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿ ರಾಜ್ಯ ನಮ್ಮದು. ಇಂತಹ ಪುಣ್ಯಭೂಮಿಯಲ್ಲಿ ಇಂದು ಎದುರಾಗಿರುವ ಸನ್ನಿವೇಶ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಿದ್ದಾಂತ ಗೊತ್ತಿಲ್ಲದವರೆಲ್ಲ ರಾಜಕಾರಣಕ್ಕೆ ಬಂದಿರುವುದೇ ಈ ಪರಿಸ್ಥಿತಿಗೆ ಕಾರಣ. ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?

ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...