Homeಕರ್ನಾಟಕಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ...

ಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ…

- Advertisement -
- Advertisement -

ಕರ್ನಾಟಕದ ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು. ಈ ಹಿಂದೆಯೂ ಕರ್ನಾಟಕದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿ, ಆಡಳಿತ ನಡೆಸಿವೆ. ಇದೇನು ಮೊದಲ ಬಾರಿ ರಚನೆಯಾಗುತ್ತಿರುವುದಲ್ಲ.

2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಅವರಿಗೆ ಕೇವಕ ಶೇ.36.34% ರಷ್ಟು ಮತಪ್ರಮಾಣ ಸಿಕ್ಕಿದೆ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು. ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ.

ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ?

ಜನಸೇವೆಯ ಉದ್ದೇಶದಿಂದ ರಾಜಕಾರಣಕ್ಕೆ ಬಂದಿದ್ದೇವೆ. ಇದು ನಮಗೆ ವೃತ್ತಿಯಲ್ಲ, ಪ್ರವೃತ್ತಿ. ಇಲ್ಲಿಗೆ ಬಂದ ನಂತರ ಒಂದು ಸಿದ್ದಾಂತವಿಲ್ಲದೇ ಹೋದರೆ ಬಂದದ್ದು ವ್ಯರ್ಥವಾಗುತ್ತದೆ. ನಾನು ಸಂವಿಧಾನದಲ್ಲಿ ನಂಬಿಕೆಯಿಟ್ಟವನು. ದೇಶದ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಉದ್ದೇಶ. ಸಾಮಾಜಿಕ ನ್ಯಾಯ, ಸಮಾನ ಅವಕಾಶ ಇವು ನನ್ನ ಆಶಯಗಳು ಕೂಡ. ಅಧಿಕಾರ ಯಾರೂ ಬೇಕಾದರೂ ಮಾಡಬಹುದು, ಸರ್ಕಾರ ಯಾವುದು ಬೇಕಾದರೂ ಬರಬಹುದು. ಯಾರೂ ಇಲ್ಲಿ ಶಾಶ್ವತರಲ್ಲ. ಆದರೆ ಪಕ್ಷಾಂತರ ಎಂಬ ಪ್ರಜಾಪ್ರಭುತ್ವಕ್ಕಂಟಿದ ರೋಗದ ಬಗ್ಗೆ ಇಂದು ಚರ್ಚೆಯಾಗಬೇಕಿದೆ. ಇದರ ಬಗ್ಗೆ ಜನರನ್ನು ಎಚ್ಚರಿಸಬೇಕು. ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಬಿಜೆಪಿಯ ಈ ನಡೆ ನಾಚಿಕೆಗೇಡಿನ ಸಂಗತಿಯಲ್ಲವೇ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆದಿದ್ದ ಕಾರಣದಿಂದ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು, ಜೊತೆಗೆ ಹದಿನೈದು ದಿನಗಳ ಕಾಲಾವಕಾಶ ಸಹ ನೀಡಿದ್ದರು. ಬಹುಮತ ಸಾಬೀತುಪಡಿಸುವಲ್ಲಿ ಅವರು ವಿಫಲರಾದ ನಂತರವೇ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು. ಹಾಗಾಗಿ ಇದೇನು ಜನಾಭಿಪ್ರಾಯದ ವಿರುದ್ಧವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚು ಸ್ಥಾನ ಪಡೆಯದಿದ್ದರೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿಲ್ಲವೇ? ಕರ್ನಾಟಕದಲ್ಲಿ ನಮ್ಮದು ಅಪವಿತ್ರ ಮೈತ್ರಿಯಾದರೇ, ಗೋವಾದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿರುವುದು ಅಪವಿತ್ರ ಮೈತ್ರಿಯಲ್ಲವೇ?

ತಮಿಳುನಾಡಲ್ಲಿ ಪಳನಿಸ್ವಾಮಿಯವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸ್ಸು ಪಡೆಯುತ್ತೇವೆ ಎಂದು ಕೆಲವು ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಿದ್ದರು. ಅಲ್ಲಿ ವಿಪ್ ಸಹ ನೀಡದೆ ಆ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಯಾವುದೇ ಶಾಸಕ ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದರೆ ತಕ್ಷಣ ಅವರನ್ನು ವಜಾ ಮಾಡುವ ಅಧಿಕಾರವಿದೆ. ಇಂದು ಚರ್ಚೆಯಾಗಬೇಕಿರುವ ಮುಖ್ಯ ವಿಚಾರ ಶಾಸಕರ ಪಕ್ಷಾಂತರದ್ದು. ಇದೇ ರೀತಿಯ ಕೀಳು ಮನೋಭಾವ ಮುಂದುವರೆದರೆ ಯಾವ ಸರ್ಕಾರ ಕೂಡ ಸ್ಥಿರವಾಗಿ ನಿಲ್ಲಲಾರದು. ಬಿಜೆಪಿಯವರು ನಮ್ಮ ಶಾಸಕರನ್ನು ಸಾರಾಸಗಟಾಗಿ ಖರೀದಿ ಮಾಡಿದ್ದಾರೆ.‌ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಇದನ್ನು ರಾಜ್ಯದ ಜನ ಒಪ್ಪುತ್ತಾರೆಯೇ?

ಇಷ್ಟೆಲ್ಲಾ ನಾಟಕ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರೂ ಯಡಿಯೂರಪ್ಪನವರು ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲು ಆಗುವುದಿಲ್ಲ. 2008ರಲ್ಲೂ ಇದೇ ಪರಿಸ್ಥಿತಿಯನ್ನು ಅವರು ಎದುರಿಸಿದ್ದಾರೆ. ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಇವರೆಲ್ಲ ಅಂದು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದವರಲ್ಲವೇ? ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ?

ಕರ್ನಾಟಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಲವು ಜನಪರ ಹೋರಾಟಗಳನ್ನು ಕಂಡ ನೆಲವಿದು. ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿ ರಾಜ್ಯ ನಮ್ಮದು. ಇಂತಹ ಪುಣ್ಯಭೂಮಿಯಲ್ಲಿ ಇಂದು ಎದುರಾಗಿರುವ ಸನ್ನಿವೇಶ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಿದ್ದಾಂತ ಗೊತ್ತಿಲ್ಲದವರೆಲ್ಲ ರಾಜಕಾರಣಕ್ಕೆ ಬಂದಿರುವುದೇ ಈ ಪರಿಸ್ಥಿತಿಗೆ ಕಾರಣ. ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?

ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...