Homeಕರ್ನಾಟಕಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ...

ಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ…

- Advertisement -
- Advertisement -

ಕರ್ನಾಟಕದ ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು. ಈ ಹಿಂದೆಯೂ ಕರ್ನಾಟಕದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿ, ಆಡಳಿತ ನಡೆಸಿವೆ. ಇದೇನು ಮೊದಲ ಬಾರಿ ರಚನೆಯಾಗುತ್ತಿರುವುದಲ್ಲ.

2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಅವರಿಗೆ ಕೇವಕ ಶೇ.36.34% ರಷ್ಟು ಮತಪ್ರಮಾಣ ಸಿಕ್ಕಿದೆ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು. ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ.

ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ?

ಜನಸೇವೆಯ ಉದ್ದೇಶದಿಂದ ರಾಜಕಾರಣಕ್ಕೆ ಬಂದಿದ್ದೇವೆ. ಇದು ನಮಗೆ ವೃತ್ತಿಯಲ್ಲ, ಪ್ರವೃತ್ತಿ. ಇಲ್ಲಿಗೆ ಬಂದ ನಂತರ ಒಂದು ಸಿದ್ದಾಂತವಿಲ್ಲದೇ ಹೋದರೆ ಬಂದದ್ದು ವ್ಯರ್ಥವಾಗುತ್ತದೆ. ನಾನು ಸಂವಿಧಾನದಲ್ಲಿ ನಂಬಿಕೆಯಿಟ್ಟವನು. ದೇಶದ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಉದ್ದೇಶ. ಸಾಮಾಜಿಕ ನ್ಯಾಯ, ಸಮಾನ ಅವಕಾಶ ಇವು ನನ್ನ ಆಶಯಗಳು ಕೂಡ. ಅಧಿಕಾರ ಯಾರೂ ಬೇಕಾದರೂ ಮಾಡಬಹುದು, ಸರ್ಕಾರ ಯಾವುದು ಬೇಕಾದರೂ ಬರಬಹುದು. ಯಾರೂ ಇಲ್ಲಿ ಶಾಶ್ವತರಲ್ಲ. ಆದರೆ ಪಕ್ಷಾಂತರ ಎಂಬ ಪ್ರಜಾಪ್ರಭುತ್ವಕ್ಕಂಟಿದ ರೋಗದ ಬಗ್ಗೆ ಇಂದು ಚರ್ಚೆಯಾಗಬೇಕಿದೆ. ಇದರ ಬಗ್ಗೆ ಜನರನ್ನು ಎಚ್ಚರಿಸಬೇಕು. ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಬಿಜೆಪಿಯ ಈ ನಡೆ ನಾಚಿಕೆಗೇಡಿನ ಸಂಗತಿಯಲ್ಲವೇ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆದಿದ್ದ ಕಾರಣದಿಂದ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು, ಜೊತೆಗೆ ಹದಿನೈದು ದಿನಗಳ ಕಾಲಾವಕಾಶ ಸಹ ನೀಡಿದ್ದರು. ಬಹುಮತ ಸಾಬೀತುಪಡಿಸುವಲ್ಲಿ ಅವರು ವಿಫಲರಾದ ನಂತರವೇ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು. ಹಾಗಾಗಿ ಇದೇನು ಜನಾಭಿಪ್ರಾಯದ ವಿರುದ್ಧವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚು ಸ್ಥಾನ ಪಡೆಯದಿದ್ದರೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿಲ್ಲವೇ? ಕರ್ನಾಟಕದಲ್ಲಿ ನಮ್ಮದು ಅಪವಿತ್ರ ಮೈತ್ರಿಯಾದರೇ, ಗೋವಾದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿರುವುದು ಅಪವಿತ್ರ ಮೈತ್ರಿಯಲ್ಲವೇ?

ತಮಿಳುನಾಡಲ್ಲಿ ಪಳನಿಸ್ವಾಮಿಯವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸ್ಸು ಪಡೆಯುತ್ತೇವೆ ಎಂದು ಕೆಲವು ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಿದ್ದರು. ಅಲ್ಲಿ ವಿಪ್ ಸಹ ನೀಡದೆ ಆ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಯಾವುದೇ ಶಾಸಕ ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದರೆ ತಕ್ಷಣ ಅವರನ್ನು ವಜಾ ಮಾಡುವ ಅಧಿಕಾರವಿದೆ. ಇಂದು ಚರ್ಚೆಯಾಗಬೇಕಿರುವ ಮುಖ್ಯ ವಿಚಾರ ಶಾಸಕರ ಪಕ್ಷಾಂತರದ್ದು. ಇದೇ ರೀತಿಯ ಕೀಳು ಮನೋಭಾವ ಮುಂದುವರೆದರೆ ಯಾವ ಸರ್ಕಾರ ಕೂಡ ಸ್ಥಿರವಾಗಿ ನಿಲ್ಲಲಾರದು. ಬಿಜೆಪಿಯವರು ನಮ್ಮ ಶಾಸಕರನ್ನು ಸಾರಾಸಗಟಾಗಿ ಖರೀದಿ ಮಾಡಿದ್ದಾರೆ.‌ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಇದನ್ನು ರಾಜ್ಯದ ಜನ ಒಪ್ಪುತ್ತಾರೆಯೇ?

ಇಷ್ಟೆಲ್ಲಾ ನಾಟಕ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರೂ ಯಡಿಯೂರಪ್ಪನವರು ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲು ಆಗುವುದಿಲ್ಲ. 2008ರಲ್ಲೂ ಇದೇ ಪರಿಸ್ಥಿತಿಯನ್ನು ಅವರು ಎದುರಿಸಿದ್ದಾರೆ. ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಇವರೆಲ್ಲ ಅಂದು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದವರಲ್ಲವೇ? ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ?

ಕರ್ನಾಟಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಲವು ಜನಪರ ಹೋರಾಟಗಳನ್ನು ಕಂಡ ನೆಲವಿದು. ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿ ರಾಜ್ಯ ನಮ್ಮದು. ಇಂತಹ ಪುಣ್ಯಭೂಮಿಯಲ್ಲಿ ಇಂದು ಎದುರಾಗಿರುವ ಸನ್ನಿವೇಶ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಿದ್ದಾಂತ ಗೊತ್ತಿಲ್ಲದವರೆಲ್ಲ ರಾಜಕಾರಣಕ್ಕೆ ಬಂದಿರುವುದೇ ಈ ಪರಿಸ್ಥಿತಿಗೆ ಕಾರಣ. ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?

ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...