Homeಕರ್ನಾಟಕಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ...

ಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ…

- Advertisement -
- Advertisement -

ಕರ್ನಾಟಕದ ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು. ಈ ಹಿಂದೆಯೂ ಕರ್ನಾಟಕದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿ, ಆಡಳಿತ ನಡೆಸಿವೆ. ಇದೇನು ಮೊದಲ ಬಾರಿ ರಚನೆಯಾಗುತ್ತಿರುವುದಲ್ಲ.

2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಅವರಿಗೆ ಕೇವಕ ಶೇ.36.34% ರಷ್ಟು ಮತಪ್ರಮಾಣ ಸಿಕ್ಕಿದೆ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು. ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ.

ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ?

ಜನಸೇವೆಯ ಉದ್ದೇಶದಿಂದ ರಾಜಕಾರಣಕ್ಕೆ ಬಂದಿದ್ದೇವೆ. ಇದು ನಮಗೆ ವೃತ್ತಿಯಲ್ಲ, ಪ್ರವೃತ್ತಿ. ಇಲ್ಲಿಗೆ ಬಂದ ನಂತರ ಒಂದು ಸಿದ್ದಾಂತವಿಲ್ಲದೇ ಹೋದರೆ ಬಂದದ್ದು ವ್ಯರ್ಥವಾಗುತ್ತದೆ. ನಾನು ಸಂವಿಧಾನದಲ್ಲಿ ನಂಬಿಕೆಯಿಟ್ಟವನು. ದೇಶದ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಉದ್ದೇಶ. ಸಾಮಾಜಿಕ ನ್ಯಾಯ, ಸಮಾನ ಅವಕಾಶ ಇವು ನನ್ನ ಆಶಯಗಳು ಕೂಡ. ಅಧಿಕಾರ ಯಾರೂ ಬೇಕಾದರೂ ಮಾಡಬಹುದು, ಸರ್ಕಾರ ಯಾವುದು ಬೇಕಾದರೂ ಬರಬಹುದು. ಯಾರೂ ಇಲ್ಲಿ ಶಾಶ್ವತರಲ್ಲ. ಆದರೆ ಪಕ್ಷಾಂತರ ಎಂಬ ಪ್ರಜಾಪ್ರಭುತ್ವಕ್ಕಂಟಿದ ರೋಗದ ಬಗ್ಗೆ ಇಂದು ಚರ್ಚೆಯಾಗಬೇಕಿದೆ. ಇದರ ಬಗ್ಗೆ ಜನರನ್ನು ಎಚ್ಚರಿಸಬೇಕು. ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಬಿಜೆಪಿಯ ಈ ನಡೆ ನಾಚಿಕೆಗೇಡಿನ ಸಂಗತಿಯಲ್ಲವೇ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆದಿದ್ದ ಕಾರಣದಿಂದ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು, ಜೊತೆಗೆ ಹದಿನೈದು ದಿನಗಳ ಕಾಲಾವಕಾಶ ಸಹ ನೀಡಿದ್ದರು. ಬಹುಮತ ಸಾಬೀತುಪಡಿಸುವಲ್ಲಿ ಅವರು ವಿಫಲರಾದ ನಂತರವೇ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು. ಹಾಗಾಗಿ ಇದೇನು ಜನಾಭಿಪ್ರಾಯದ ವಿರುದ್ಧವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚು ಸ್ಥಾನ ಪಡೆಯದಿದ್ದರೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿಲ್ಲವೇ? ಕರ್ನಾಟಕದಲ್ಲಿ ನಮ್ಮದು ಅಪವಿತ್ರ ಮೈತ್ರಿಯಾದರೇ, ಗೋವಾದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿರುವುದು ಅಪವಿತ್ರ ಮೈತ್ರಿಯಲ್ಲವೇ?

ತಮಿಳುನಾಡಲ್ಲಿ ಪಳನಿಸ್ವಾಮಿಯವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸ್ಸು ಪಡೆಯುತ್ತೇವೆ ಎಂದು ಕೆಲವು ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಿದ್ದರು. ಅಲ್ಲಿ ವಿಪ್ ಸಹ ನೀಡದೆ ಆ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಯಾವುದೇ ಶಾಸಕ ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದರೆ ತಕ್ಷಣ ಅವರನ್ನು ವಜಾ ಮಾಡುವ ಅಧಿಕಾರವಿದೆ. ಇಂದು ಚರ್ಚೆಯಾಗಬೇಕಿರುವ ಮುಖ್ಯ ವಿಚಾರ ಶಾಸಕರ ಪಕ್ಷಾಂತರದ್ದು. ಇದೇ ರೀತಿಯ ಕೀಳು ಮನೋಭಾವ ಮುಂದುವರೆದರೆ ಯಾವ ಸರ್ಕಾರ ಕೂಡ ಸ್ಥಿರವಾಗಿ ನಿಲ್ಲಲಾರದು. ಬಿಜೆಪಿಯವರು ನಮ್ಮ ಶಾಸಕರನ್ನು ಸಾರಾಸಗಟಾಗಿ ಖರೀದಿ ಮಾಡಿದ್ದಾರೆ.‌ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಇದನ್ನು ರಾಜ್ಯದ ಜನ ಒಪ್ಪುತ್ತಾರೆಯೇ?

ಇಷ್ಟೆಲ್ಲಾ ನಾಟಕ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರೂ ಯಡಿಯೂರಪ್ಪನವರು ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲು ಆಗುವುದಿಲ್ಲ. 2008ರಲ್ಲೂ ಇದೇ ಪರಿಸ್ಥಿತಿಯನ್ನು ಅವರು ಎದುರಿಸಿದ್ದಾರೆ. ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಇವರೆಲ್ಲ ಅಂದು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದವರಲ್ಲವೇ? ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ?

ಕರ್ನಾಟಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಲವು ಜನಪರ ಹೋರಾಟಗಳನ್ನು ಕಂಡ ನೆಲವಿದು. ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿ ರಾಜ್ಯ ನಮ್ಮದು. ಇಂತಹ ಪುಣ್ಯಭೂಮಿಯಲ್ಲಿ ಇಂದು ಎದುರಾಗಿರುವ ಸನ್ನಿವೇಶ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಿದ್ದಾಂತ ಗೊತ್ತಿಲ್ಲದವರೆಲ್ಲ ರಾಜಕಾರಣಕ್ಕೆ ಬಂದಿರುವುದೇ ಈ ಪರಿಸ್ಥಿತಿಗೆ ಕಾರಣ. ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?

ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...