Homeಕರ್ನಾಟಕಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ...

ಸದನದಲ್ಲಿಂದು ಗುಡುಗಿದ ಸಿದ್ದರಾಮಯ್ಯನವರ ಸಂಪೂರ್ಣ ಭಾಷಣ ಇಲ್ಲಿದೆ…

- Advertisement -
- Advertisement -

ಕರ್ನಾಟಕದ ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು. ಈ ಹಿಂದೆಯೂ ಕರ್ನಾಟಕದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿ, ಆಡಳಿತ ನಡೆಸಿವೆ. ಇದೇನು ಮೊದಲ ಬಾರಿ ರಚನೆಯಾಗುತ್ತಿರುವುದಲ್ಲ.

2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಅವರಿಗೆ ಕೇವಕ ಶೇ.36.34% ರಷ್ಟು ಮತಪ್ರಮಾಣ ಸಿಕ್ಕಿದೆ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು. ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ.

ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ?

ಜನಸೇವೆಯ ಉದ್ದೇಶದಿಂದ ರಾಜಕಾರಣಕ್ಕೆ ಬಂದಿದ್ದೇವೆ. ಇದು ನಮಗೆ ವೃತ್ತಿಯಲ್ಲ, ಪ್ರವೃತ್ತಿ. ಇಲ್ಲಿಗೆ ಬಂದ ನಂತರ ಒಂದು ಸಿದ್ದಾಂತವಿಲ್ಲದೇ ಹೋದರೆ ಬಂದದ್ದು ವ್ಯರ್ಥವಾಗುತ್ತದೆ. ನಾನು ಸಂವಿಧಾನದಲ್ಲಿ ನಂಬಿಕೆಯಿಟ್ಟವನು. ದೇಶದ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಉದ್ದೇಶ. ಸಾಮಾಜಿಕ ನ್ಯಾಯ, ಸಮಾನ ಅವಕಾಶ ಇವು ನನ್ನ ಆಶಯಗಳು ಕೂಡ. ಅಧಿಕಾರ ಯಾರೂ ಬೇಕಾದರೂ ಮಾಡಬಹುದು, ಸರ್ಕಾರ ಯಾವುದು ಬೇಕಾದರೂ ಬರಬಹುದು. ಯಾರೂ ಇಲ್ಲಿ ಶಾಶ್ವತರಲ್ಲ. ಆದರೆ ಪಕ್ಷಾಂತರ ಎಂಬ ಪ್ರಜಾಪ್ರಭುತ್ವಕ್ಕಂಟಿದ ರೋಗದ ಬಗ್ಗೆ ಇಂದು ಚರ್ಚೆಯಾಗಬೇಕಿದೆ. ಇದರ ಬಗ್ಗೆ ಜನರನ್ನು ಎಚ್ಚರಿಸಬೇಕು. ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಬಿಜೆಪಿಯ ಈ ನಡೆ ನಾಚಿಕೆಗೇಡಿನ ಸಂಗತಿಯಲ್ಲವೇ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆದಿದ್ದ ಕಾರಣದಿಂದ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು, ಜೊತೆಗೆ ಹದಿನೈದು ದಿನಗಳ ಕಾಲಾವಕಾಶ ಸಹ ನೀಡಿದ್ದರು. ಬಹುಮತ ಸಾಬೀತುಪಡಿಸುವಲ್ಲಿ ಅವರು ವಿಫಲರಾದ ನಂತರವೇ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು. ಹಾಗಾಗಿ ಇದೇನು ಜನಾಭಿಪ್ರಾಯದ ವಿರುದ್ಧವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚು ಸ್ಥಾನ ಪಡೆಯದಿದ್ದರೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿಲ್ಲವೇ? ಕರ್ನಾಟಕದಲ್ಲಿ ನಮ್ಮದು ಅಪವಿತ್ರ ಮೈತ್ರಿಯಾದರೇ, ಗೋವಾದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿರುವುದು ಅಪವಿತ್ರ ಮೈತ್ರಿಯಲ್ಲವೇ?

ತಮಿಳುನಾಡಲ್ಲಿ ಪಳನಿಸ್ವಾಮಿಯವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸ್ಸು ಪಡೆಯುತ್ತೇವೆ ಎಂದು ಕೆಲವು ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಿದ್ದರು. ಅಲ್ಲಿ ವಿಪ್ ಸಹ ನೀಡದೆ ಆ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಯಾವುದೇ ಶಾಸಕ ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದರೆ ತಕ್ಷಣ ಅವರನ್ನು ವಜಾ ಮಾಡುವ ಅಧಿಕಾರವಿದೆ. ಇಂದು ಚರ್ಚೆಯಾಗಬೇಕಿರುವ ಮುಖ್ಯ ವಿಚಾರ ಶಾಸಕರ ಪಕ್ಷಾಂತರದ್ದು. ಇದೇ ರೀತಿಯ ಕೀಳು ಮನೋಭಾವ ಮುಂದುವರೆದರೆ ಯಾವ ಸರ್ಕಾರ ಕೂಡ ಸ್ಥಿರವಾಗಿ ನಿಲ್ಲಲಾರದು. ಬಿಜೆಪಿಯವರು ನಮ್ಮ ಶಾಸಕರನ್ನು ಸಾರಾಸಗಟಾಗಿ ಖರೀದಿ ಮಾಡಿದ್ದಾರೆ.‌ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಇದನ್ನು ರಾಜ್ಯದ ಜನ ಒಪ್ಪುತ್ತಾರೆಯೇ?

ಇಷ್ಟೆಲ್ಲಾ ನಾಟಕ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರೂ ಯಡಿಯೂರಪ್ಪನವರು ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲು ಆಗುವುದಿಲ್ಲ. 2008ರಲ್ಲೂ ಇದೇ ಪರಿಸ್ಥಿತಿಯನ್ನು ಅವರು ಎದುರಿಸಿದ್ದಾರೆ. ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಇವರೆಲ್ಲ ಅಂದು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದವರಲ್ಲವೇ? ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ?

ಕರ್ನಾಟಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಲವು ಜನಪರ ಹೋರಾಟಗಳನ್ನು ಕಂಡ ನೆಲವಿದು. ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿ ರಾಜ್ಯ ನಮ್ಮದು. ಇಂತಹ ಪುಣ್ಯಭೂಮಿಯಲ್ಲಿ ಇಂದು ಎದುರಾಗಿರುವ ಸನ್ನಿವೇಶ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಿದ್ದಾಂತ ಗೊತ್ತಿಲ್ಲದವರೆಲ್ಲ ರಾಜಕಾರಣಕ್ಕೆ ಬಂದಿರುವುದೇ ಈ ಪರಿಸ್ಥಿತಿಗೆ ಕಾರಣ. ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್‌ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?

ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...