Homeಕರ್ನಾಟಕಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

"ಬಿಜೆಪಿಯವರಿಗೆ ಜಾತಿ ಭೇದ,‌ ಧರ್ಮಭೇದದಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ"

- Advertisement -
- Advertisement -

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ಹಿಂದೆ ಜನರ ಹಿತ ಇಲ್ಲ. ದೇಶದ ಕೋಮುಸೌಹಾರ್ದತೆ ಹಾಳುಗೆಡವುವುದೇ ಇದರ ದುರುದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

’ಬಲಾತ್ಕಾರದ ಮತಾಂತರ‌ ಈಗಲೂ ಶಿಕ್ಷಾರ್ಹ ಅಪರಾಧವಾಗಿರುವಾಗ ಹೊಸ ಕಾಯ್ದೆಯನ್ನು ರಚಿಸುವುದು ಯಾವ ಉದ್ದೇಶಕ್ಕೆ ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರ ವಿರುದ್ಧ ಇತರರನ್ನು ಎತ್ತಿಕಟ್ಟುವ ದುರುದ್ದೇಶದಿಂದಲೇ ಬಿಜೆಪಿ ಈ ಕಾಯ್ದೆ ತರಲು ಹೊರಟಿದೆ’ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಜಾತಿ-ಧರ್ಮದ ಭೇದವಿಲ್ಲದೆ ಕ್ರಿಶ್ಚಿಯನರು ಸೇರಿದಂತೆ ಎಲ್ಲ ಸಮುದಾಯಗಳ ಜೊತೆಗಿರುತ್ತದೆ. ಯಾವ ಸಮುದಾಯದವರಿಗೂ ತೊಂದರೆಯಾಗಲು ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

’ಸಂವಿಧಾನದ ಪ್ರಕಾರ ದೇಶದ ಪ್ರಜೆ ತನ್ನ ಆಸಕ್ತಿ ಹಾಗೂ ಇಚ್ಚೆಗೆ ಸೂಕ್ತವಾದ ಧರ್ಮವನ್ನು ಆರಿಸಿಕೊಳ್ಳುವ, ಪಾಲಿಸುವ ಮತ್ತು ಆಚರಿಸುವ ಹಕ್ಕು ಇದೆ. ಇದಕ್ಕೆ ವಿರುದ್ಧವಾಗಿ ಕಾಯಿದೆ ತರುವುದು ಸಂವಿಧಾನಬಾಹಿರ. ಬಹುಮತ ಇದೆ ಎನ್ನುವ ಕಾರಣಕ್ಕೆ ಸಂವಿಧಾನದ ಮೇಲೆ ಸವಾರಿ ಮಾಡುವ ಹಾಗೂ ತನಗೆ ಬೇಕಾದ ಕಾಯಿದೆಗಳನ್ನು ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು. ಅಂತಹ ನಡೆಯನ್ನು ನಾವು ಸದನದ ಒಳಗೆ ಮತ್ತು ಹೊರಗೆ ವಿರೋಧಿಸುತ್ತೇವೆ’ ಎಂದಿದ್ದಾರೆ.

’ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಅವರು ನಡೆಸುವ ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ಒಂದು ಸಮುದಾಯದವರು ಮಾತ್ರ ಹೋಗುವುದಿಲ್ಲ. ಹೋಗುವ ಎಲ್ಲರೂ ಮತಾಂತರ ಆಗಿಲ್ಲ. ಅದಕ್ಕಾಗಿ ಬಲವಂತವೂ ನಡೆಯುತ್ತಿಲ್ಲ’ ಎಂದು ತಿಳಿಸಿದ್ದಾರೆ.

’ಯಾವುದೋ ಒಂದು ಧರ್ಮವನ್ನು ಆಧಾರವಾಗಿಟ್ಟುಕೊಂಡು ಸಂವಿಧಾನ ರಚನೆ ಮಾಡಿಲ್ಲ. ಸಂವಿಧಾನದಿಂದ ಒಳ್ಳೆಯದಾಗಬೇಕಾದರೆ ಆಡಳಿತ ಒಳ್ಳೆಯವರ ಕೈಯ್ಯಲ್ಲೇ ಇರಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು’ ಎಂದು ಉಲ್ಲೇಖಿಸಿದ್ದಾರೆ.

“ಬಿಜೆಪಿಯವರಿಗೆ ಜಾತಿ ಭೇದ,‌ ಧರ್ಮಭೇದದಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ. ಇದರಲ್ಲಿ ಆರ್‌ಎಸ್‌ಎಸ್‌ನ ಹುನ್ನಾರವೂ ಅಡಗಿದೆ. “ದಯೆಯೇ ಧರ್ಮದ ಮೂಲ” ಎಂದು ಬಸವಣ್ಣ ಅವರು ಹೇಳಿದ್ದರು. ಆದರೆ, ಅದಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಚರ್ಚ್‌ಗಳ ಮೇಲೆ ದಾಳಿಯಾಗುತ್ತಿದೆ. ನಮ್ಮ ಸರ್ಕಾರ ಇದ್ದಾಗ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ” ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ರಾಜೇಗೌಡ, ವಿಜಯಸಿಂಗ್, ಪ್ರಕಾಶ್ ರಾಥೋಡ್, ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಡಾ. ಸಜ್ಜನ್ ಜಾರ್ಜ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಲು ಒತ್ತಾಯಿಸಬೇಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...