Homeಕರ್ನಾಟಕರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

'ತೇಜಸ್ವಿಯವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ’

- Advertisement -
- Advertisement -

“ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ತೇಜಸ್ವಿಯವರೊಂದಿಗಿನ ಒಡನಾಟದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು” ಎಂದಿದ್ದಾರೆ.

“ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್‌ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿಯೇ ಮಾತನಾಡುತ್ತಾ ಕಳೆದಿದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ” ಎಂದು ಅವರ ಜೊತೆಗೆ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

“ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಯಲ್ಲಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. ನನಗೆ ಪ್ರೋ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು” ಎಂದಿದ್ದಾರೆ.

’ತೇಜಸ್ವಿಯವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಅವರ ವಿಭಿನ್ನ ಯೋಚನಾ ಶೈಲಿಯೇ ಅವರ ಹೆಗ್ಗುರುತಾಗಿತ್ತು. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

’ರಾಜಕಾರಣದ ಬಗ್ಗೆ ತೇಜಸ್ವಿಯವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು.
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ” ಎಂದಿದ್ದಾರೆ.

’ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

’ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲದಿದ್ದರೂ ಕನಿಷ್ಟ ಪರಿಸರವನ್ನಾದರೂ ಪ್ರೀತಿಸಬಹುದು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....