Homeಕರ್ನಾಟಕರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

'ತೇಜಸ್ವಿಯವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ’

- Advertisement -
- Advertisement -

“ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ತೇಜಸ್ವಿಯವರೊಂದಿಗಿನ ಒಡನಾಟದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು” ಎಂದಿದ್ದಾರೆ.

“ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್‌ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿಯೇ ಮಾತನಾಡುತ್ತಾ ಕಳೆದಿದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ” ಎಂದು ಅವರ ಜೊತೆಗೆ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

“ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಯಲ್ಲಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. ನನಗೆ ಪ್ರೋ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು” ಎಂದಿದ್ದಾರೆ.

’ತೇಜಸ್ವಿಯವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಅವರ ವಿಭಿನ್ನ ಯೋಚನಾ ಶೈಲಿಯೇ ಅವರ ಹೆಗ್ಗುರುತಾಗಿತ್ತು. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

’ರಾಜಕಾರಣದ ಬಗ್ಗೆ ತೇಜಸ್ವಿಯವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು.
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ” ಎಂದಿದ್ದಾರೆ.

’ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

’ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲದಿದ್ದರೂ ಕನಿಷ್ಟ ಪರಿಸರವನ್ನಾದರೂ ಪ್ರೀತಿಸಬಹುದು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...