Homeಕರ್ನಾಟಕರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

'ತೇಜಸ್ವಿಯವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ’

- Advertisement -
- Advertisement -

“ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ತೇಜಸ್ವಿಯವರೊಂದಿಗಿನ ಒಡನಾಟದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು” ಎಂದಿದ್ದಾರೆ.

“ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್‌ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿಯೇ ಮಾತನಾಡುತ್ತಾ ಕಳೆದಿದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ” ಎಂದು ಅವರ ಜೊತೆಗೆ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

“ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಯಲ್ಲಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. ನನಗೆ ಪ್ರೋ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು” ಎಂದಿದ್ದಾರೆ.

’ತೇಜಸ್ವಿಯವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಅವರ ವಿಭಿನ್ನ ಯೋಚನಾ ಶೈಲಿಯೇ ಅವರ ಹೆಗ್ಗುರುತಾಗಿತ್ತು. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

’ರಾಜಕಾರಣದ ಬಗ್ಗೆ ತೇಜಸ್ವಿಯವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು.
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ” ಎಂದಿದ್ದಾರೆ.

’ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

’ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲದಿದ್ದರೂ ಕನಿಷ್ಟ ಪರಿಸರವನ್ನಾದರೂ ಪ್ರೀತಿಸಬಹುದು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...