Homeಕರ್ನಾಟಕರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

'ತೇಜಸ್ವಿಯವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ’

- Advertisement -
- Advertisement -

“ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ತೇಜಸ್ವಿಯವರೊಂದಿಗಿನ ಒಡನಾಟದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು” ಎಂದಿದ್ದಾರೆ.

“ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್‌ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿಯೇ ಮಾತನಾಡುತ್ತಾ ಕಳೆದಿದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ” ಎಂದು ಅವರ ಜೊತೆಗೆ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

“ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಯಲ್ಲಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. ನನಗೆ ಪ್ರೋ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು” ಎಂದಿದ್ದಾರೆ.

’ತೇಜಸ್ವಿಯವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಅವರ ವಿಭಿನ್ನ ಯೋಚನಾ ಶೈಲಿಯೇ ಅವರ ಹೆಗ್ಗುರುತಾಗಿತ್ತು. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

’ರಾಜಕಾರಣದ ಬಗ್ಗೆ ತೇಜಸ್ವಿಯವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು.
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ” ಎಂದಿದ್ದಾರೆ.

’ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

’ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲದಿದ್ದರೂ ಕನಿಷ್ಟ ಪರಿಸರವನ್ನಾದರೂ ಪ್ರೀತಿಸಬಹುದು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...