Homeಕರ್ನಾಟಕರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

'ತೇಜಸ್ವಿಯವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ’

- Advertisement -
- Advertisement -

“ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ತೇಜಸ್ವಿಯವರೊಂದಿಗಿನ ಒಡನಾಟದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು” ಎಂದಿದ್ದಾರೆ.

“ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್‌ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿಯೇ ಮಾತನಾಡುತ್ತಾ ಕಳೆದಿದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ” ಎಂದು ಅವರ ಜೊತೆಗೆ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

“ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಯಲ್ಲಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. ನನಗೆ ಪ್ರೋ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು” ಎಂದಿದ್ದಾರೆ.

’ತೇಜಸ್ವಿಯವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಅವರ ವಿಭಿನ್ನ ಯೋಚನಾ ಶೈಲಿಯೇ ಅವರ ಹೆಗ್ಗುರುತಾಗಿತ್ತು. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

’ರಾಜಕಾರಣದ ಬಗ್ಗೆ ತೇಜಸ್ವಿಯವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು.
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ” ಎಂದಿದ್ದಾರೆ.

’ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

’ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲದಿದ್ದರೂ ಕನಿಷ್ಟ ಪರಿಸರವನ್ನಾದರೂ ಪ್ರೀತಿಸಬಹುದು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...