Homeಕರ್ನಾಟಕರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು- ಸಿದ್ದರಾಮಯ್ಯ

'ತೇಜಸ್ವಿಯವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ’

- Advertisement -
- Advertisement -

“ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ತೇಜಸ್ವಿಯವರೊಂದಿಗಿನ ಒಡನಾಟದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

“ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು” ಎಂದಿದ್ದಾರೆ.

“ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್‌ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿಯೇ ಮಾತನಾಡುತ್ತಾ ಕಳೆದಿದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ” ಎಂದು ಅವರ ಜೊತೆಗೆ ಕಳೆದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

“ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಯಲ್ಲಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. ನನಗೆ ಪ್ರೋ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು” ಎಂದಿದ್ದಾರೆ.

’ತೇಜಸ್ವಿಯವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಅವರ ವಿಭಿನ್ನ ಯೋಚನಾ ಶೈಲಿಯೇ ಅವರ ಹೆಗ್ಗುರುತಾಗಿತ್ತು. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿಯವರು ಸ್ಪೂರ್ತಿಯ ಸೆಲೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

’ರಾಜಕಾರಣದ ಬಗ್ಗೆ ತೇಜಸ್ವಿಯವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯವೂ ಇರಲಿಲ್ಲ. ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು.
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ” ಎಂದಿದ್ದಾರೆ.

’ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

’ಎಲ್ಲರೂ ತೇಜಸ್ವಿಯವರಾಗಲು ಸಾಧ್ಯವಿಲ್ಲದಿದ್ದರೂ ಕನಿಷ್ಟ ಪರಿಸರವನ್ನಾದರೂ ಪ್ರೀತಿಸಬಹುದು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಪರಿಸರ ರಕ್ಷಣೆಗೆ ತೇಜಸ್ವಿಯವರ ಬದುಕು, ಬರಹ, ಜೀವನ ನಮಗೆ ಪ್ರೇರಣೆಯಾಗಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...