Homeಕರ್ನಾಟಕವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಸರ್ಕಾರದ ತಪ್ಪಿನಿಂದ ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕೊರೊನಾ 3ನೇ ಹಂತಕ್ಕೆ ಇನ್ನೂ ತಲುಪಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ, ಆತನಿಗೆ ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರಲಿಲ್ಲ. ಆದರೂ ಆತನಿಗೆ ಕರೋನ ಬಂದಿದ್ದು ಹೇಗೆ ಎಂಬುದನ್ನು ಶೀಘ್ರ ಪತ್ತೆ ಮಾಡಬೇಕು. ಶಿರಾದಲ್ಲಿಯೂ ಒಬ್ಬರು ಕೊರೊನಾ ಇಂದ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುದನ್ನು ಪತ್ತೆಹಚ್ಚಬೇಕಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಹಳ್ಳಿಗಳಿಗೆ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕು ಎಂದಿದ್ದಾರೆ.

ಈಗ ದಾಸ್ತಾನಾಗಿರುವ ಮಾಸ್ಕ್, ಸ್ಯಾನಿಟೈಸರ್ ಯಾವುದಕ್ಕೂ ಸಾಲದು. ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಭರದಿಂದ ಸಾಗಬೇಕಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಆ ಕೆಲಸ ವಹಿಸಿ. ಸೋಂಕು 3ನೇ ಹಂತಕ್ಕೆ ಹೋಗುವುದನ್ನು ತಡೆಯುವ ಕೆಲಸ ಸಮರೋಪಾದಿಯಲ್ಲಿ ಆಗಬೇಕು. ಕರ್ನಾಟಕದಲ್ಲಿ 6020 ಪಂಚಾಯಿತಿಗಳಿವೆ. ಒಂದೊಂದು ಪಂಚಾಯಿತಿಗೆ ಒಬ್ಬ ಮೆಡಿಕಲ್ ಅಧಿಕಾರಿ ನೇಮಕ ಮಾಡಬೇಕು. ಆಹಾರ, ಕೃಷಿ ಮಾರುಕಟ್ಟೆಗೆ ಸಂಬಂಧಿಸಿದಂತೆ ಕೃಷಿ ಅಧಿಕಾರಿಯನ್ನೂ ಪಂಚಾಯಿತಿಗೆ ಒಬ್ಬರಂತೆ ಈ ಕೂಡಲೇ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಹೊರ ರಾಜ್ಯದ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರನ್ನು ಸ್ವಂತ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು, ಜೊತೆಗೆ ಹೊರ ರಾಜ್ಯಗಳಲ್ಲಿರುವ ಕನ್ನಡಿಗರನ್ನು ಕರೆ ತರಬೇಕು. ಈಗಾಗಲೇ ಸಾಕಷ್ಟು ಮಂದಿ ರಾಜ್ಯದ ಗಡಿ ತಲುಪಿದ್ದಾರೆ. ಅವರ ಆರೋಗ್ಯ ತಪಾಸಣೆ ಮಾಡಿ ಊರುಗಳಿಗೆ ಕಳುಹಿಸುವುದು ಸೂಕ್ತ. ಮುಂದಿನ ಎರಡು ವಾರ ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ. ಹೀಗಾಗಿ ಸೋಂಕು ಹರಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಈಗಾಗಲೇ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಅದನ್ನು‌ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಹಾಗಂತ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡುವುದು ಬೇಡ, ಜನರ ಮನವೊಲಿಸಲು ಹಲವು ಮಾರ್ಗಗಳಿವೆ ಎಂದರು.

ಸರ್ಕಾರವೇ ಮನೆ ಮನೆಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಿದರೆ ಒಳ್ಳೆಯದು. ಆಗ ಜನರು ಹೊರಬರುವುದು ತಪ್ಪುತ್ತದೆ. ಪೊಲೀಸರಿಗೂ ವಿಮೆ ಮಾಡಿಸುವುದು ಸೂಕ್ತ. ಈ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಯವರ ಬಳಿ ಮಾತನಾಡಲಿ. ಪೊಲೀಸರ ಜೀವಕ್ಕೂ ಭದ್ರತೆ ಬೇಕು. ಇದರ ಜೊತೆಗೆ ಪೌರ ಕಾರ್ಮಿಕರಿಗೂ ವಿಮೆ ಸೌಲಭ್ಯ ಸಿಗಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...