Homeಕರ್ನಾಟಕವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಸರ್ಕಾರದ ತಪ್ಪಿನಿಂದ ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕೊರೊನಾ 3ನೇ ಹಂತಕ್ಕೆ ಇನ್ನೂ ತಲುಪಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ, ಆತನಿಗೆ ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರಲಿಲ್ಲ. ಆದರೂ ಆತನಿಗೆ ಕರೋನ ಬಂದಿದ್ದು ಹೇಗೆ ಎಂಬುದನ್ನು ಶೀಘ್ರ ಪತ್ತೆ ಮಾಡಬೇಕು. ಶಿರಾದಲ್ಲಿಯೂ ಒಬ್ಬರು ಕೊರೊನಾ ಇಂದ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುದನ್ನು ಪತ್ತೆಹಚ್ಚಬೇಕಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಹಳ್ಳಿಗಳಿಗೆ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕು ಎಂದಿದ್ದಾರೆ.

ಈಗ ದಾಸ್ತಾನಾಗಿರುವ ಮಾಸ್ಕ್, ಸ್ಯಾನಿಟೈಸರ್ ಯಾವುದಕ್ಕೂ ಸಾಲದು. ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಭರದಿಂದ ಸಾಗಬೇಕಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಆ ಕೆಲಸ ವಹಿಸಿ. ಸೋಂಕು 3ನೇ ಹಂತಕ್ಕೆ ಹೋಗುವುದನ್ನು ತಡೆಯುವ ಕೆಲಸ ಸಮರೋಪಾದಿಯಲ್ಲಿ ಆಗಬೇಕು. ಕರ್ನಾಟಕದಲ್ಲಿ 6020 ಪಂಚಾಯಿತಿಗಳಿವೆ. ಒಂದೊಂದು ಪಂಚಾಯಿತಿಗೆ ಒಬ್ಬ ಮೆಡಿಕಲ್ ಅಧಿಕಾರಿ ನೇಮಕ ಮಾಡಬೇಕು. ಆಹಾರ, ಕೃಷಿ ಮಾರುಕಟ್ಟೆಗೆ ಸಂಬಂಧಿಸಿದಂತೆ ಕೃಷಿ ಅಧಿಕಾರಿಯನ್ನೂ ಪಂಚಾಯಿತಿಗೆ ಒಬ್ಬರಂತೆ ಈ ಕೂಡಲೇ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಹೊರ ರಾಜ್ಯದ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರನ್ನು ಸ್ವಂತ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು, ಜೊತೆಗೆ ಹೊರ ರಾಜ್ಯಗಳಲ್ಲಿರುವ ಕನ್ನಡಿಗರನ್ನು ಕರೆ ತರಬೇಕು. ಈಗಾಗಲೇ ಸಾಕಷ್ಟು ಮಂದಿ ರಾಜ್ಯದ ಗಡಿ ತಲುಪಿದ್ದಾರೆ. ಅವರ ಆರೋಗ್ಯ ತಪಾಸಣೆ ಮಾಡಿ ಊರುಗಳಿಗೆ ಕಳುಹಿಸುವುದು ಸೂಕ್ತ. ಮುಂದಿನ ಎರಡು ವಾರ ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ. ಹೀಗಾಗಿ ಸೋಂಕು ಹರಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಈಗಾಗಲೇ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಅದನ್ನು‌ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಹಾಗಂತ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡುವುದು ಬೇಡ, ಜನರ ಮನವೊಲಿಸಲು ಹಲವು ಮಾರ್ಗಗಳಿವೆ ಎಂದರು.

ಸರ್ಕಾರವೇ ಮನೆ ಮನೆಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಿದರೆ ಒಳ್ಳೆಯದು. ಆಗ ಜನರು ಹೊರಬರುವುದು ತಪ್ಪುತ್ತದೆ. ಪೊಲೀಸರಿಗೂ ವಿಮೆ ಮಾಡಿಸುವುದು ಸೂಕ್ತ. ಈ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಯವರ ಬಳಿ ಮಾತನಾಡಲಿ. ಪೊಲೀಸರ ಜೀವಕ್ಕೂ ಭದ್ರತೆ ಬೇಕು. ಇದರ ಜೊತೆಗೆ ಪೌರ ಕಾರ್ಮಿಕರಿಗೂ ವಿಮೆ ಸೌಲಭ್ಯ ಸಿಗಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...