Homeಕರ್ನಾಟಕವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಸರ್ಕಾರದ ತಪ್ಪಿನಿಂದ ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕೊರೊನಾ 3ನೇ ಹಂತಕ್ಕೆ ಇನ್ನೂ ತಲುಪಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ, ಆತನಿಗೆ ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರಲಿಲ್ಲ. ಆದರೂ ಆತನಿಗೆ ಕರೋನ ಬಂದಿದ್ದು ಹೇಗೆ ಎಂಬುದನ್ನು ಶೀಘ್ರ ಪತ್ತೆ ಮಾಡಬೇಕು. ಶಿರಾದಲ್ಲಿಯೂ ಒಬ್ಬರು ಕೊರೊನಾ ಇಂದ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುದನ್ನು ಪತ್ತೆಹಚ್ಚಬೇಕಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಹಳ್ಳಿಗಳಿಗೆ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕು ಎಂದಿದ್ದಾರೆ.

ಈಗ ದಾಸ್ತಾನಾಗಿರುವ ಮಾಸ್ಕ್, ಸ್ಯಾನಿಟೈಸರ್ ಯಾವುದಕ್ಕೂ ಸಾಲದು. ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಭರದಿಂದ ಸಾಗಬೇಕಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಆ ಕೆಲಸ ವಹಿಸಿ. ಸೋಂಕು 3ನೇ ಹಂತಕ್ಕೆ ಹೋಗುವುದನ್ನು ತಡೆಯುವ ಕೆಲಸ ಸಮರೋಪಾದಿಯಲ್ಲಿ ಆಗಬೇಕು. ಕರ್ನಾಟಕದಲ್ಲಿ 6020 ಪಂಚಾಯಿತಿಗಳಿವೆ. ಒಂದೊಂದು ಪಂಚಾಯಿತಿಗೆ ಒಬ್ಬ ಮೆಡಿಕಲ್ ಅಧಿಕಾರಿ ನೇಮಕ ಮಾಡಬೇಕು. ಆಹಾರ, ಕೃಷಿ ಮಾರುಕಟ್ಟೆಗೆ ಸಂಬಂಧಿಸಿದಂತೆ ಕೃಷಿ ಅಧಿಕಾರಿಯನ್ನೂ ಪಂಚಾಯಿತಿಗೆ ಒಬ್ಬರಂತೆ ಈ ಕೂಡಲೇ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಹೊರ ರಾಜ್ಯದ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರನ್ನು ಸ್ವಂತ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು, ಜೊತೆಗೆ ಹೊರ ರಾಜ್ಯಗಳಲ್ಲಿರುವ ಕನ್ನಡಿಗರನ್ನು ಕರೆ ತರಬೇಕು. ಈಗಾಗಲೇ ಸಾಕಷ್ಟು ಮಂದಿ ರಾಜ್ಯದ ಗಡಿ ತಲುಪಿದ್ದಾರೆ. ಅವರ ಆರೋಗ್ಯ ತಪಾಸಣೆ ಮಾಡಿ ಊರುಗಳಿಗೆ ಕಳುಹಿಸುವುದು ಸೂಕ್ತ. ಮುಂದಿನ ಎರಡು ವಾರ ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ. ಹೀಗಾಗಿ ಸೋಂಕು ಹರಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಈಗಾಗಲೇ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಅದನ್ನು‌ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಹಾಗಂತ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡುವುದು ಬೇಡ, ಜನರ ಮನವೊಲಿಸಲು ಹಲವು ಮಾರ್ಗಗಳಿವೆ ಎಂದರು.

ಸರ್ಕಾರವೇ ಮನೆ ಮನೆಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಿದರೆ ಒಳ್ಳೆಯದು. ಆಗ ಜನರು ಹೊರಬರುವುದು ತಪ್ಪುತ್ತದೆ. ಪೊಲೀಸರಿಗೂ ವಿಮೆ ಮಾಡಿಸುವುದು ಸೂಕ್ತ. ಈ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಯವರ ಬಳಿ ಮಾತನಾಡಲಿ. ಪೊಲೀಸರ ಜೀವಕ್ಕೂ ಭದ್ರತೆ ಬೇಕು. ಇದರ ಜೊತೆಗೆ ಪೌರ ಕಾರ್ಮಿಕರಿಗೂ ವಿಮೆ ಸೌಲಭ್ಯ ಸಿಗಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...