Homeಕರ್ನಾಟಕವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಸರ್ಕಾರದ ತಪ್ಪಿನಿಂದ ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕೊರೊನಾ 3ನೇ ಹಂತಕ್ಕೆ ಇನ್ನೂ ತಲುಪಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ, ಆತನಿಗೆ ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರಲಿಲ್ಲ. ಆದರೂ ಆತನಿಗೆ ಕರೋನ ಬಂದಿದ್ದು ಹೇಗೆ ಎಂಬುದನ್ನು ಶೀಘ್ರ ಪತ್ತೆ ಮಾಡಬೇಕು. ಶಿರಾದಲ್ಲಿಯೂ ಒಬ್ಬರು ಕೊರೊನಾ ಇಂದ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುದನ್ನು ಪತ್ತೆಹಚ್ಚಬೇಕಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಹಳ್ಳಿಗಳಿಗೆ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕು ಎಂದಿದ್ದಾರೆ.

ಈಗ ದಾಸ್ತಾನಾಗಿರುವ ಮಾಸ್ಕ್, ಸ್ಯಾನಿಟೈಸರ್ ಯಾವುದಕ್ಕೂ ಸಾಲದು. ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಭರದಿಂದ ಸಾಗಬೇಕಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಆ ಕೆಲಸ ವಹಿಸಿ. ಸೋಂಕು 3ನೇ ಹಂತಕ್ಕೆ ಹೋಗುವುದನ್ನು ತಡೆಯುವ ಕೆಲಸ ಸಮರೋಪಾದಿಯಲ್ಲಿ ಆಗಬೇಕು. ಕರ್ನಾಟಕದಲ್ಲಿ 6020 ಪಂಚಾಯಿತಿಗಳಿವೆ. ಒಂದೊಂದು ಪಂಚಾಯಿತಿಗೆ ಒಬ್ಬ ಮೆಡಿಕಲ್ ಅಧಿಕಾರಿ ನೇಮಕ ಮಾಡಬೇಕು. ಆಹಾರ, ಕೃಷಿ ಮಾರುಕಟ್ಟೆಗೆ ಸಂಬಂಧಿಸಿದಂತೆ ಕೃಷಿ ಅಧಿಕಾರಿಯನ್ನೂ ಪಂಚಾಯಿತಿಗೆ ಒಬ್ಬರಂತೆ ಈ ಕೂಡಲೇ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಹೊರ ರಾಜ್ಯದ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರನ್ನು ಸ್ವಂತ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು, ಜೊತೆಗೆ ಹೊರ ರಾಜ್ಯಗಳಲ್ಲಿರುವ ಕನ್ನಡಿಗರನ್ನು ಕರೆ ತರಬೇಕು. ಈಗಾಗಲೇ ಸಾಕಷ್ಟು ಮಂದಿ ರಾಜ್ಯದ ಗಡಿ ತಲುಪಿದ್ದಾರೆ. ಅವರ ಆರೋಗ್ಯ ತಪಾಸಣೆ ಮಾಡಿ ಊರುಗಳಿಗೆ ಕಳುಹಿಸುವುದು ಸೂಕ್ತ. ಮುಂದಿನ ಎರಡು ವಾರ ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ. ಹೀಗಾಗಿ ಸೋಂಕು ಹರಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಈಗಾಗಲೇ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಅದನ್ನು‌ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಹಾಗಂತ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡುವುದು ಬೇಡ, ಜನರ ಮನವೊಲಿಸಲು ಹಲವು ಮಾರ್ಗಗಳಿವೆ ಎಂದರು.

ಸರ್ಕಾರವೇ ಮನೆ ಮನೆಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಿದರೆ ಒಳ್ಳೆಯದು. ಆಗ ಜನರು ಹೊರಬರುವುದು ತಪ್ಪುತ್ತದೆ. ಪೊಲೀಸರಿಗೂ ವಿಮೆ ಮಾಡಿಸುವುದು ಸೂಕ್ತ. ಈ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಯವರ ಬಳಿ ಮಾತನಾಡಲಿ. ಪೊಲೀಸರ ಜೀವಕ್ಕೂ ಭದ್ರತೆ ಬೇಕು. ಇದರ ಜೊತೆಗೆ ಪೌರ ಕಾರ್ಮಿಕರಿಗೂ ವಿಮೆ ಸೌಲಭ್ಯ ಸಿಗಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...