Homeಕರ್ನಾಟಕಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ - ಡಿ.ಕೆ. ಶಿವಕುಮಾರ್ ಯೂಟರ್ನ್?

ಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ – ಡಿ.ಕೆ. ಶಿವಕುಮಾರ್ ಯೂಟರ್ನ್?

- Advertisement -
- Advertisement -

ರಾಜ್ಯ ಆಡಳಿತಾರೂಢ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರ ನಡುವಿನ ಆಂತರಿಕ ತಿಕ್ಕಾಟ ಭಾನುವಾರ ಕುತೂಹಲಕಾರಿ ತಿರುವು ಪಡೆದುಕೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ನಮ್ಮ ಪ್ರಶ್ನಾತೀತ ನಾಯಕ” ಎಂದು ಹಾಡಿ ಹೊಗಳಿದ್ದಾರೆ. ಅದಾಗ್ಯೂ, ಮುಖ್ಯಮಂತ್ರಿಯ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಕ್ಕಾಗಿ ಅವರ ಆಪ್ತರನ್ನು ಶಿವಕುಮಾರ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ನಮ್ಮ

ತಮ್ಮ ಸರ್ಕಾರದಲ್ಲಿ “ಕಾರ್ಯನಿರ್ವಹಿಸದ” ಸಚಿವರನ್ನು ಕೈಬಿಟ್ಟು ರಾಜ್ಯ ಸಂಪುಟದ ಪುನರ್ರಚನೆಗೆ ಕಾಂಗ್ರೆಸ್ ಹೈಕಮಾಂಡ್‌ ಮುಂದೆ ಪ್ರಸ್ತಾಪಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ,  ಡಿ.ಕೆ. ಶಿವಕುಮಾರ್‌ ಅವರು ತನ್ನ ರಾಜಕೀಯ ಚದುರಂಗದಾಟದ ನಡೆಯನ್ನು ಬದಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ, ನಿಸ್ಸಂದೇಹವಾಗಿ. ಪಂಚಾಯತ್, ತಾಲ್ಲೂಕು ಮಟ್ಟದ ಚುನಾವಣೆಗಳು, ಶಾಸಕ ಮತ್ತು ಎಂಎಲ್‌ಸಿ ಚುನಾವಣೆಗಳು ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ನಮಗೆ ಅವರ ಅಗತ್ಯವಿದೆ. ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ನಮ್ಮ

“ಪ್ರತಿದಿನ ಅವರ ಹೆಸರನ್ನು ತೆಗೆದುಕೊಂಡು ಅದನ್ನು ದುರುಪಯೋಗಪಡಿಸಿಕೊಳ್ಳುವ ಅಗತ್ಯವಿಲ್ಲ, ಅದು ಅನಗತ್ಯ. ಇವು ಮಾಧ್ಯಮಗಳಿಗೆ ಆಹಾರವಾಗಬಾರದು” ಎಂದು ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲು ಬಯಸುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷಕ್ಕೆ “ಅನಿವಾರ್ಯ” ಎಂದು ಅವರಿಗೆ ನಿಷ್ಠರಾಗಿರುವ ಸಚಿವರು ಮತ್ತು ನಾಯಕರ ಹೇಳುತ್ತಿರುವ ಬೆನ್ನಲ್ಲೆ ಡಿ.ಕೆ. ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದಾರೆ.

“ಕಾರ್ಯನಿರ್ವಹಿಸದ” ಸಚಿವರನ್ನು ಕೈಬಿಡಲು ಶಿವಕುಮಾರ್ ಸಂಪುಟ ಪುನರ್ರಚನೆಗೆ ಪ್ರಯತ್ನಿಸಿದ್ದಾರೆ ಎಂಬ ವರದಿಗಳ ನಂತರ ಸಚಿವ ಸತೀಶ್ ಜಾರಕಿಹೊಳಿ ಮತ್ತು ಕೆ.ಎನ್. ರಾಜಣ್ಣ ಅವರಂತಹ ಸಚಿವರು ಈ ಹೇಳಿಕೆ ನೀಡಿದ್ದರು.

ಸಂಪುಟ ಪುರ್ರಚನೆ ಆದರೆ ಕೈಬಿಡಲ್ಪಡುವ ಸಚಿವರ ಪಟ್ಟಿಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ವಸತಿ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಮತ್ತು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ (ಬೈರತಿ) ಮುಂತಾದ ಸಿದ್ದರಾಮಯ್ಯ ಅವರ ಕೆಲವು ಆಪ್ತರು ಸೇರಿದ್ದಾರೆ ಎಂದು ಫೆಬ್ರವರಿ 14 ರಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಈ ನಾಯಕರಲ್ಲಿ ಕೆಲವರು ಶಿವಕುಮಾರ್ ಅವರು ಹೊಂದಿರುವ ‘ದ್ವಿ ಹುದ್ದೆಗಳನ್ನು’ ವಿಷಯವನ್ನು ಉಲ್ಲೇಖಿಸಿ, ಅವರ ಬದಲಿಗೆ ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಈ ರೀತಿಯ “ಗೊಂದಲಮಯ” ಹೇಳಿಕೆಗಳನ್ನು ಏಕೆ ನೀಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಅವರು, “ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್ ಪ್ರತಿದಿನ ಎಲ್ಲವನ್ನೂ ಗಮನಿಸುತ್ತದೆ.” ಎಂದು ಹೇಳಿದ್ದರು.

ಇದನ್ನೂಓದಿ:  ಗಾಜಾ ಸ್ವಾಧೀನಪಡಿಸಿಕೊಳ್ಳುವ ಟ್ರಂಪ್ ಯೋಜನೆ ಕೈಬಿಡಲು 70 ಅಮೆರಿಕದ ನಾಗರಿಕ ಹಕ್ಕುಗಳ ಒತ್ತಾಯ

ಗಾಜಾ ಸ್ವಾಧೀನಪಡಿಸಿಕೊಳ್ಳುವ ಟ್ರಂಪ್ ಯೋಜನೆ ಕೈಬಿಡಲು 70 ಅಮೆರಿಕದ ನಾಗರಿಕ ಹಕ್ಕು ಸಂಘಟನೆಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...