Homeಕರ್ನಾಟಕಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ರಾಜ್ಯದ ಬಹುಪಾಲು ಜನ ದುಡಿಮೆಯಿಲ್ಲದೆ ಅಗತ್ಯ ವಸ್ತುಗಳ ಖರೀದಿಗೂ ಪರದಾಡುವಂತಾಗಿದೆ. ಇಂತಹ ಸ್ಥಿತಿಯಲ್ಲಿ ಹಿಂದಿನ ಸರ್ಕಾರ ಸಾಲ ಮಾಡಿಟ್ಟು ಹೋಗಿದೆ ಎಂಬ ಹುಸಿ ಸಬೂಬು ನೀಡದೆ ರಾಜ್ಯ ಸರ್ಕಾರ ಕೂಡಲೇ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಟ್ವಿಟರ್‌ ಖಾತೆಯಲ್ಲಿ ಸಾಲದ ವಿಚಾರವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಹಲವು ಟ್ವಿಟ್‌ಗಳನ್ನು ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕೊರೊನಾ ಹಿನ್ನೆಲೆ ಲಾಕ್‌ಡೌನ್ ವಿಧಿಸಲಾಗಿದ್ದು, ಈ ಸಮಯದಲ್ಲಿ ರಾಜ್ಯದ ಜನರಿಗೆ ಸೂಕ್ತ ಪ್ಯಾಕೇಜು ನೀಡಿ ಎಂದರೆ, ಬಿಜೆಪಿಯಲ್ಲಿ ಕೆಲವರು ಸಿದ್ದರಾಮಯ್ಯನವರು ಸಾಲ ಮಾಡಿದ್ದರು. ಅದರಿಂದಾಗಿ ರಾಜ್ಯದಲ್ಲಿ ಹಣಕಾಸಿನ ಸಮಸ್ಯೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ ಎಂಬುದರ ಕುರಿತು ನಾಡಿನ ಜನರಿಗೆ ಈಗ ಯಾವ ಸಂಶಯವೂ ಉಳಿದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

2008-2013 ರ ವರೆಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ  ಶೇ. 94.18 ರಷ್ಟು ಏರಿಕೆಯಾಗಿತ್ತು. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಶೇ.78 ರಷ್ಟು ಮಾತ್ರ ಏರಿಕೆಯಾಗಿತ್ತು.  ಹಿಂದಿನಿಂದಲೂ ಪ್ರತಿ ವರ್ಷ 20 ರಿಂದ 30 ಸಾವಿರ ಕೋಟಿ ರೂ ಗಳಷ್ಟು ಸಾಲ ಮಾಡುವುದು  ಮತ್ತು ತೀರಿಸುವುದು ವಾಡಿಕೆ. 2012-13 ರಲ್ಲೂ 21609 ಕೋಟಿ ಸಾಲ ಮಾಡಲಾಗಿತ್ತು. 2017-18 ರವರೆಗೆ ರಾಜ್ಯದ ಒಟ್ಟಾರೆ ಸಾಲ 242420 ಕೋಟಿ ಮಾತ್ರ ಇತ್ತು. ಈಗ ರಾಜ್ಯ ಸರ್ಕಾರವೇ ಅಧಿಕೃತವಾಗಿ ಹೇಳುವ ಮಾಹಿತಿಯಂತೆ ಈ ವರ್ಷದ ಕಡೆಗೆ 457899 ಕೋಟಿ ಗಳಷ್ಟು ಸಾಲವಾಗುತ್ತಿದೆ. ಬಹುಶಃ ಅದು ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ. 2020-21 ರಲ್ಲಿ  69000 ಕೋಟಿ ಸಾಲ ಮಾಡಲಾಗಿದೆ. ಅಂದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 214479 ಕೋಟಿಗಳಷ್ಟು ಹೆಚ್ಚು ಸಾಲವನ್ನು ಮಾಡಲಾಗುತ್ತಿದೆ. ಯಡಿಯೂರಪ್ಪನವರು ಎರಡನೇ ಬಾರಿಗೆ ಮುಖ್ಯ ಮಂತ್ರಿಯಾದ ಮೇಲೆ  ಕೇವಲ ಮೂರು ವರ್ಷಗಳಲ್ಲಿ ಸುಮಾರು 190000 ಕೋಟಿ ರೂಗಳಷ್ಟು ಸಾಲ ಮಾಡಿದ್ದಾರೆ. ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ 72000 ಕೋಟಿಗೆ ತಲುಪಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ಕಳೆದ ವರ್ಷ 69 ಸಾವಿರ ಕೋಟಿ ಸಾಲ ಮಾಡಿದರೂ ಕೊರೋನ ನಿರ್ವಹಣೆಗೆ ಖರ್ಚು ಮಾಡಿದ್ದು 5400 ಕೋಟಿ ರೂಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು..?” ಎಂದು ಸುದೀರ್ಘ ಪತ್ರದಲ್ಲಿ ವಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

2018-19 ರಿಂದ 2021-22 ರವರೆಗೆ ಕಳೆದ 4 ವರ್ಷಗಳಲ್ಲಿ  ಹೆಚ್ಚಾದ ಜಿಎಸ್‍ಡಿಪಿಯ ಪ್ರಮಾಣ ಕೇವಲ 2,93,642 ಕೋಟಿ ರೂ ಮೌಲ್ಯ ಮಾತ್ರ ಹೆಚ್ಚಾಗಿದೆ. ಒಂದು ಕಡೆ ವೇಗವಾಗಿ ರಾಜ್ಯದ ಆರ್ಥಿಕತೆ ಕುಸಿದು ಹೋಗುತ್ತಿದೆ. ಆದರೆ ಸಾಲದ ಪ್ರಮಾಣ ರಾಕೆಟ್ಟಿನ ವೇಗದಲ್ಲಿ ಬೆಳೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಈಗ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಯಾವುದೇ ಆರ್ಥಿಕ ಪ್ಯಾಕೇಜು ನೀಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜ್ಯದ ಜನ ಏನು ಮಾಡಬೇಕು…? ಏನು ತಿನ್ನಬೇಕು..? ಎಂದು ಪ್ರಶ್ನಿಸಿದ್ದಾರೆ.

“ನಾವು ಪದೇ ಪದೇ ಹೇಳುತ್ತಿದ್ದೇವೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ಜನರೂ ನೆಮ್ಮದಿಯಾಗಿರುತ್ತಾರೆ. ಆರ್ಥಿಕತೆಯೂ ಉತ್ತಮ ಸ್ಥಿತಿಗೆ ಬರುತ್ತದೆ ಎಂದು.  ಜಗತ್ತಿನ ಅನೇಕ ದೇಶಗಳು ತಮ್ಮ ಆರ್ಥಿಕತೆಯನ್ನು ಕಾಪಾಡಿಕೊಂಡಿರುವುದೇ ಹೀಗೆ. ಆದರಿಂದ ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಸಿದ್ದರಾಮಯ್ಯ  ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...