Homeಕರ್ನಾಟಕಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ರಾಜ್ಯದ ಬಹುಪಾಲು ಜನ ದುಡಿಮೆಯಿಲ್ಲದೆ ಅಗತ್ಯ ವಸ್ತುಗಳ ಖರೀದಿಗೂ ಪರದಾಡುವಂತಾಗಿದೆ. ಇಂತಹ ಸ್ಥಿತಿಯಲ್ಲಿ ಹಿಂದಿನ ಸರ್ಕಾರ ಸಾಲ ಮಾಡಿಟ್ಟು ಹೋಗಿದೆ ಎಂಬ ಹುಸಿ ಸಬೂಬು ನೀಡದೆ ರಾಜ್ಯ ಸರ್ಕಾರ ಕೂಡಲೇ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಟ್ವಿಟರ್‌ ಖಾತೆಯಲ್ಲಿ ಸಾಲದ ವಿಚಾರವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಹಲವು ಟ್ವಿಟ್‌ಗಳನ್ನು ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕೊರೊನಾ ಹಿನ್ನೆಲೆ ಲಾಕ್‌ಡೌನ್ ವಿಧಿಸಲಾಗಿದ್ದು, ಈ ಸಮಯದಲ್ಲಿ ರಾಜ್ಯದ ಜನರಿಗೆ ಸೂಕ್ತ ಪ್ಯಾಕೇಜು ನೀಡಿ ಎಂದರೆ, ಬಿಜೆಪಿಯಲ್ಲಿ ಕೆಲವರು ಸಿದ್ದರಾಮಯ್ಯನವರು ಸಾಲ ಮಾಡಿದ್ದರು. ಅದರಿಂದಾಗಿ ರಾಜ್ಯದಲ್ಲಿ ಹಣಕಾಸಿನ ಸಮಸ್ಯೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ ಎಂಬುದರ ಕುರಿತು ನಾಡಿನ ಜನರಿಗೆ ಈಗ ಯಾವ ಸಂಶಯವೂ ಉಳಿದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

2008-2013 ರ ವರೆಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ  ಶೇ. 94.18 ರಷ್ಟು ಏರಿಕೆಯಾಗಿತ್ತು. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಶೇ.78 ರಷ್ಟು ಮಾತ್ರ ಏರಿಕೆಯಾಗಿತ್ತು.  ಹಿಂದಿನಿಂದಲೂ ಪ್ರತಿ ವರ್ಷ 20 ರಿಂದ 30 ಸಾವಿರ ಕೋಟಿ ರೂ ಗಳಷ್ಟು ಸಾಲ ಮಾಡುವುದು  ಮತ್ತು ತೀರಿಸುವುದು ವಾಡಿಕೆ. 2012-13 ರಲ್ಲೂ 21609 ಕೋಟಿ ಸಾಲ ಮಾಡಲಾಗಿತ್ತು. 2017-18 ರವರೆಗೆ ರಾಜ್ಯದ ಒಟ್ಟಾರೆ ಸಾಲ 242420 ಕೋಟಿ ಮಾತ್ರ ಇತ್ತು. ಈಗ ರಾಜ್ಯ ಸರ್ಕಾರವೇ ಅಧಿಕೃತವಾಗಿ ಹೇಳುವ ಮಾಹಿತಿಯಂತೆ ಈ ವರ್ಷದ ಕಡೆಗೆ 457899 ಕೋಟಿ ಗಳಷ್ಟು ಸಾಲವಾಗುತ್ತಿದೆ. ಬಹುಶಃ ಅದು ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ. 2020-21 ರಲ್ಲಿ  69000 ಕೋಟಿ ಸಾಲ ಮಾಡಲಾಗಿದೆ. ಅಂದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 214479 ಕೋಟಿಗಳಷ್ಟು ಹೆಚ್ಚು ಸಾಲವನ್ನು ಮಾಡಲಾಗುತ್ತಿದೆ. ಯಡಿಯೂರಪ್ಪನವರು ಎರಡನೇ ಬಾರಿಗೆ ಮುಖ್ಯ ಮಂತ್ರಿಯಾದ ಮೇಲೆ  ಕೇವಲ ಮೂರು ವರ್ಷಗಳಲ್ಲಿ ಸುಮಾರು 190000 ಕೋಟಿ ರೂಗಳಷ್ಟು ಸಾಲ ಮಾಡಿದ್ದಾರೆ. ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ 72000 ಕೋಟಿಗೆ ತಲುಪಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ಕಳೆದ ವರ್ಷ 69 ಸಾವಿರ ಕೋಟಿ ಸಾಲ ಮಾಡಿದರೂ ಕೊರೋನ ನಿರ್ವಹಣೆಗೆ ಖರ್ಚು ಮಾಡಿದ್ದು 5400 ಕೋಟಿ ರೂಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು..?” ಎಂದು ಸುದೀರ್ಘ ಪತ್ರದಲ್ಲಿ ವಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

2018-19 ರಿಂದ 2021-22 ರವರೆಗೆ ಕಳೆದ 4 ವರ್ಷಗಳಲ್ಲಿ  ಹೆಚ್ಚಾದ ಜಿಎಸ್‍ಡಿಪಿಯ ಪ್ರಮಾಣ ಕೇವಲ 2,93,642 ಕೋಟಿ ರೂ ಮೌಲ್ಯ ಮಾತ್ರ ಹೆಚ್ಚಾಗಿದೆ. ಒಂದು ಕಡೆ ವೇಗವಾಗಿ ರಾಜ್ಯದ ಆರ್ಥಿಕತೆ ಕುಸಿದು ಹೋಗುತ್ತಿದೆ. ಆದರೆ ಸಾಲದ ಪ್ರಮಾಣ ರಾಕೆಟ್ಟಿನ ವೇಗದಲ್ಲಿ ಬೆಳೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಈಗ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಯಾವುದೇ ಆರ್ಥಿಕ ಪ್ಯಾಕೇಜು ನೀಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜ್ಯದ ಜನ ಏನು ಮಾಡಬೇಕು…? ಏನು ತಿನ್ನಬೇಕು..? ಎಂದು ಪ್ರಶ್ನಿಸಿದ್ದಾರೆ.

“ನಾವು ಪದೇ ಪದೇ ಹೇಳುತ್ತಿದ್ದೇವೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ಜನರೂ ನೆಮ್ಮದಿಯಾಗಿರುತ್ತಾರೆ. ಆರ್ಥಿಕತೆಯೂ ಉತ್ತಮ ಸ್ಥಿತಿಗೆ ಬರುತ್ತದೆ ಎಂದು.  ಜಗತ್ತಿನ ಅನೇಕ ದೇಶಗಳು ತಮ್ಮ ಆರ್ಥಿಕತೆಯನ್ನು ಕಾಪಾಡಿಕೊಂಡಿರುವುದೇ ಹೀಗೆ. ಆದರಿಂದ ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಸಿದ್ದರಾಮಯ್ಯ  ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....