Homeಕರ್ನಾಟಕಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ರಾಜ್ಯದ ಬಹುಪಾಲು ಜನ ದುಡಿಮೆಯಿಲ್ಲದೆ ಅಗತ್ಯ ವಸ್ತುಗಳ ಖರೀದಿಗೂ ಪರದಾಡುವಂತಾಗಿದೆ. ಇಂತಹ ಸ್ಥಿತಿಯಲ್ಲಿ ಹಿಂದಿನ ಸರ್ಕಾರ ಸಾಲ ಮಾಡಿಟ್ಟು ಹೋಗಿದೆ ಎಂಬ ಹುಸಿ ಸಬೂಬು ನೀಡದೆ ರಾಜ್ಯ ಸರ್ಕಾರ ಕೂಡಲೇ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಟ್ವಿಟರ್‌ ಖಾತೆಯಲ್ಲಿ ಸಾಲದ ವಿಚಾರವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಹಲವು ಟ್ವಿಟ್‌ಗಳನ್ನು ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕೊರೊನಾ ಹಿನ್ನೆಲೆ ಲಾಕ್‌ಡೌನ್ ವಿಧಿಸಲಾಗಿದ್ದು, ಈ ಸಮಯದಲ್ಲಿ ರಾಜ್ಯದ ಜನರಿಗೆ ಸೂಕ್ತ ಪ್ಯಾಕೇಜು ನೀಡಿ ಎಂದರೆ, ಬಿಜೆಪಿಯಲ್ಲಿ ಕೆಲವರು ಸಿದ್ದರಾಮಯ್ಯನವರು ಸಾಲ ಮಾಡಿದ್ದರು. ಅದರಿಂದಾಗಿ ರಾಜ್ಯದಲ್ಲಿ ಹಣಕಾಸಿನ ಸಮಸ್ಯೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ ಎಂಬುದರ ಕುರಿತು ನಾಡಿನ ಜನರಿಗೆ ಈಗ ಯಾವ ಸಂಶಯವೂ ಉಳಿದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

2008-2013 ರ ವರೆಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ  ಶೇ. 94.18 ರಷ್ಟು ಏರಿಕೆಯಾಗಿತ್ತು. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಶೇ.78 ರಷ್ಟು ಮಾತ್ರ ಏರಿಕೆಯಾಗಿತ್ತು.  ಹಿಂದಿನಿಂದಲೂ ಪ್ರತಿ ವರ್ಷ 20 ರಿಂದ 30 ಸಾವಿರ ಕೋಟಿ ರೂ ಗಳಷ್ಟು ಸಾಲ ಮಾಡುವುದು  ಮತ್ತು ತೀರಿಸುವುದು ವಾಡಿಕೆ. 2012-13 ರಲ್ಲೂ 21609 ಕೋಟಿ ಸಾಲ ಮಾಡಲಾಗಿತ್ತು. 2017-18 ರವರೆಗೆ ರಾಜ್ಯದ ಒಟ್ಟಾರೆ ಸಾಲ 242420 ಕೋಟಿ ಮಾತ್ರ ಇತ್ತು. ಈಗ ರಾಜ್ಯ ಸರ್ಕಾರವೇ ಅಧಿಕೃತವಾಗಿ ಹೇಳುವ ಮಾಹಿತಿಯಂತೆ ಈ ವರ್ಷದ ಕಡೆಗೆ 457899 ಕೋಟಿ ಗಳಷ್ಟು ಸಾಲವಾಗುತ್ತಿದೆ. ಬಹುಶಃ ಅದು ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ. 2020-21 ರಲ್ಲಿ  69000 ಕೋಟಿ ಸಾಲ ಮಾಡಲಾಗಿದೆ. ಅಂದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 214479 ಕೋಟಿಗಳಷ್ಟು ಹೆಚ್ಚು ಸಾಲವನ್ನು ಮಾಡಲಾಗುತ್ತಿದೆ. ಯಡಿಯೂರಪ್ಪನವರು ಎರಡನೇ ಬಾರಿಗೆ ಮುಖ್ಯ ಮಂತ್ರಿಯಾದ ಮೇಲೆ  ಕೇವಲ ಮೂರು ವರ್ಷಗಳಲ್ಲಿ ಸುಮಾರು 190000 ಕೋಟಿ ರೂಗಳಷ್ಟು ಸಾಲ ಮಾಡಿದ್ದಾರೆ. ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ 72000 ಕೋಟಿಗೆ ತಲುಪಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ಕಳೆದ ವರ್ಷ 69 ಸಾವಿರ ಕೋಟಿ ಸಾಲ ಮಾಡಿದರೂ ಕೊರೋನ ನಿರ್ವಹಣೆಗೆ ಖರ್ಚು ಮಾಡಿದ್ದು 5400 ಕೋಟಿ ರೂಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು..?” ಎಂದು ಸುದೀರ್ಘ ಪತ್ರದಲ್ಲಿ ವಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

2018-19 ರಿಂದ 2021-22 ರವರೆಗೆ ಕಳೆದ 4 ವರ್ಷಗಳಲ್ಲಿ  ಹೆಚ್ಚಾದ ಜಿಎಸ್‍ಡಿಪಿಯ ಪ್ರಮಾಣ ಕೇವಲ 2,93,642 ಕೋಟಿ ರೂ ಮೌಲ್ಯ ಮಾತ್ರ ಹೆಚ್ಚಾಗಿದೆ. ಒಂದು ಕಡೆ ವೇಗವಾಗಿ ರಾಜ್ಯದ ಆರ್ಥಿಕತೆ ಕುಸಿದು ಹೋಗುತ್ತಿದೆ. ಆದರೆ ಸಾಲದ ಪ್ರಮಾಣ ರಾಕೆಟ್ಟಿನ ವೇಗದಲ್ಲಿ ಬೆಳೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಈಗ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಯಾವುದೇ ಆರ್ಥಿಕ ಪ್ಯಾಕೇಜು ನೀಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜ್ಯದ ಜನ ಏನು ಮಾಡಬೇಕು…? ಏನು ತಿನ್ನಬೇಕು..? ಎಂದು ಪ್ರಶ್ನಿಸಿದ್ದಾರೆ.

“ನಾವು ಪದೇ ಪದೇ ಹೇಳುತ್ತಿದ್ದೇವೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ಜನರೂ ನೆಮ್ಮದಿಯಾಗಿರುತ್ತಾರೆ. ಆರ್ಥಿಕತೆಯೂ ಉತ್ತಮ ಸ್ಥಿತಿಗೆ ಬರುತ್ತದೆ ಎಂದು.  ಜಗತ್ತಿನ ಅನೇಕ ದೇಶಗಳು ತಮ್ಮ ಆರ್ಥಿಕತೆಯನ್ನು ಕಾಪಾಡಿಕೊಂಡಿರುವುದೇ ಹೀಗೆ. ಆದರಿಂದ ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಸಿದ್ದರಾಮಯ್ಯ  ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...