Homeಕರ್ನಾಟಕಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ರಾಜ್ಯದ ಬಹುಪಾಲು ಜನ ದುಡಿಮೆಯಿಲ್ಲದೆ ಅಗತ್ಯ ವಸ್ತುಗಳ ಖರೀದಿಗೂ ಪರದಾಡುವಂತಾಗಿದೆ. ಇಂತಹ ಸ್ಥಿತಿಯಲ್ಲಿ ಹಿಂದಿನ ಸರ್ಕಾರ ಸಾಲ ಮಾಡಿಟ್ಟು ಹೋಗಿದೆ ಎಂಬ ಹುಸಿ ಸಬೂಬು ನೀಡದೆ ರಾಜ್ಯ ಸರ್ಕಾರ ಕೂಡಲೇ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಟ್ವಿಟರ್‌ ಖಾತೆಯಲ್ಲಿ ಸಾಲದ ವಿಚಾರವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಹಲವು ಟ್ವಿಟ್‌ಗಳನ್ನು ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕೊರೊನಾ ಹಿನ್ನೆಲೆ ಲಾಕ್‌ಡೌನ್ ವಿಧಿಸಲಾಗಿದ್ದು, ಈ ಸಮಯದಲ್ಲಿ ರಾಜ್ಯದ ಜನರಿಗೆ ಸೂಕ್ತ ಪ್ಯಾಕೇಜು ನೀಡಿ ಎಂದರೆ, ಬಿಜೆಪಿಯಲ್ಲಿ ಕೆಲವರು ಸಿದ್ದರಾಮಯ್ಯನವರು ಸಾಲ ಮಾಡಿದ್ದರು. ಅದರಿಂದಾಗಿ ರಾಜ್ಯದಲ್ಲಿ ಹಣಕಾಸಿನ ಸಮಸ್ಯೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ ಎಂಬುದರ ಕುರಿತು ನಾಡಿನ ಜನರಿಗೆ ಈಗ ಯಾವ ಸಂಶಯವೂ ಉಳಿದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

2008-2013 ರ ವರೆಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ  ಶೇ. 94.18 ರಷ್ಟು ಏರಿಕೆಯಾಗಿತ್ತು. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಶೇ.78 ರಷ್ಟು ಮಾತ್ರ ಏರಿಕೆಯಾಗಿತ್ತು.  ಹಿಂದಿನಿಂದಲೂ ಪ್ರತಿ ವರ್ಷ 20 ರಿಂದ 30 ಸಾವಿರ ಕೋಟಿ ರೂ ಗಳಷ್ಟು ಸಾಲ ಮಾಡುವುದು  ಮತ್ತು ತೀರಿಸುವುದು ವಾಡಿಕೆ. 2012-13 ರಲ್ಲೂ 21609 ಕೋಟಿ ಸಾಲ ಮಾಡಲಾಗಿತ್ತು. 2017-18 ರವರೆಗೆ ರಾಜ್ಯದ ಒಟ್ಟಾರೆ ಸಾಲ 242420 ಕೋಟಿ ಮಾತ್ರ ಇತ್ತು. ಈಗ ರಾಜ್ಯ ಸರ್ಕಾರವೇ ಅಧಿಕೃತವಾಗಿ ಹೇಳುವ ಮಾಹಿತಿಯಂತೆ ಈ ವರ್ಷದ ಕಡೆಗೆ 457899 ಕೋಟಿ ಗಳಷ್ಟು ಸಾಲವಾಗುತ್ತಿದೆ. ಬಹುಶಃ ಅದು ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ. 2020-21 ರಲ್ಲಿ  69000 ಕೋಟಿ ಸಾಲ ಮಾಡಲಾಗಿದೆ. ಅಂದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ 214479 ಕೋಟಿಗಳಷ್ಟು ಹೆಚ್ಚು ಸಾಲವನ್ನು ಮಾಡಲಾಗುತ್ತಿದೆ. ಯಡಿಯೂರಪ್ಪನವರು ಎರಡನೇ ಬಾರಿಗೆ ಮುಖ್ಯ ಮಂತ್ರಿಯಾದ ಮೇಲೆ  ಕೇವಲ ಮೂರು ವರ್ಷಗಳಲ್ಲಿ ಸುಮಾರು 190000 ಕೋಟಿ ರೂಗಳಷ್ಟು ಸಾಲ ಮಾಡಿದ್ದಾರೆ. ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ 72000 ಕೋಟಿಗೆ ತಲುಪಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ಕಳೆದ ವರ್ಷ 69 ಸಾವಿರ ಕೋಟಿ ಸಾಲ ಮಾಡಿದರೂ ಕೊರೋನ ನಿರ್ವಹಣೆಗೆ ಖರ್ಚು ಮಾಡಿದ್ದು 5400 ಕೋಟಿ ರೂಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು..?” ಎಂದು ಸುದೀರ್ಘ ಪತ್ರದಲ್ಲಿ ವಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ

2018-19 ರಿಂದ 2021-22 ರವರೆಗೆ ಕಳೆದ 4 ವರ್ಷಗಳಲ್ಲಿ  ಹೆಚ್ಚಾದ ಜಿಎಸ್‍ಡಿಪಿಯ ಪ್ರಮಾಣ ಕೇವಲ 2,93,642 ಕೋಟಿ ರೂ ಮೌಲ್ಯ ಮಾತ್ರ ಹೆಚ್ಚಾಗಿದೆ. ಒಂದು ಕಡೆ ವೇಗವಾಗಿ ರಾಜ್ಯದ ಆರ್ಥಿಕತೆ ಕುಸಿದು ಹೋಗುತ್ತಿದೆ. ಆದರೆ ಸಾಲದ ಪ್ರಮಾಣ ರಾಕೆಟ್ಟಿನ ವೇಗದಲ್ಲಿ ಬೆಳೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಈಗ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಯಾವುದೇ ಆರ್ಥಿಕ ಪ್ಯಾಕೇಜು ನೀಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜ್ಯದ ಜನ ಏನು ಮಾಡಬೇಕು…? ಏನು ತಿನ್ನಬೇಕು..? ಎಂದು ಪ್ರಶ್ನಿಸಿದ್ದಾರೆ.

“ನಾವು ಪದೇ ಪದೇ ಹೇಳುತ್ತಿದ್ದೇವೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ಜನರೂ ನೆಮ್ಮದಿಯಾಗಿರುತ್ತಾರೆ. ಆರ್ಥಿಕತೆಯೂ ಉತ್ತಮ ಸ್ಥಿತಿಗೆ ಬರುತ್ತದೆ ಎಂದು.  ಜಗತ್ತಿನ ಅನೇಕ ದೇಶಗಳು ತಮ್ಮ ಆರ್ಥಿಕತೆಯನ್ನು ಕಾಪಾಡಿಕೊಂಡಿರುವುದೇ ಹೀಗೆ. ಆದರಿಂದ ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಸಿದ್ದರಾಮಯ್ಯ  ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...