Homeಮುಖಪುಟಅಕ್ಕಿ ಕೊಡಲು ಒಪ್ಪಿದ್ದ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಸಿ.ಟಿ ರವಿಗೆ ತಿರುಗೇಟು

ಅಕ್ಕಿ ಕೊಡಲು ಒಪ್ಪಿದ್ದ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಸಿ.ಟಿ ರವಿಗೆ ತಿರುಗೇಟು

- Advertisement -
- Advertisement -

ಸುಳ್ಳುರಾಮಯ್ಯ ಅಲ್ಲದಿದ್ದರೆ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಸವಾಲು ಹಾಕಿದ್ದ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಿ.ಟಿ ರವಿಗೆ ಸಿದ್ದರಾಮಯ್ಯ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ ಸಿ.ಟಿ ರವಿ ಸವಾಲು ಹಾಕಿದ್ದರು. ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ನಾವು ಅನ್ನಭಾಗ್ಯದ ಅಕ್ಕಿಯನ್ನು 10 ಕೆಜಿಗೆ ಏರಿಸುವುದು ನಿಶ್ಚಿತ. ಬಸವಣ್ಣನ ಅನುಭವ ಮಂಟಪದ ದಾಸೋಹಕ್ಕೂ ವಿರೋಧಿಗಳು ಇಂತಹದ್ದೇ ಅಡೆತಡೆಗಳನ್ನು ಸೃಷ್ಟಿಸಿದ್ದರು. ನಮ್ಮ ಅನ್ನಭಾಗ್ಯದ ದಾಸೋಹವನ್ನು ಬಿಜೆಪಿಗರ ಯಾವ ಕುತಂತ್ರವೂ ತಡೆಯಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಕೇಂದ್ರ ಸರ್ಕಾರ ಸ್ಪಷ್ಟವಾಗಿ ಆಹಾರ ಹಕ್ಕು ಕಾಯ್ದೆಯನ್ನು ಉಲ್ಲಂಘಿಸುತ್ತಿದೆ. 7 ಲಕ್ಷ ಟನ್ ಅಕ್ಕಿ ಸಂಗ್ರಹವಿದ್ದರೂ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡುವುದನ್ನು ನಿರಾಕರಿಸುವ ಮೂಲಕ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಮೋದಿ. ಖಾಸಗಿಯವರಿಗೆ ಮಾರಾಟ ಮಾಡುವ ಅವಕಾಶವಿರುವಾಗ ರಾಜ್ಯ ಸರ್ಕಾರಕ್ಕೆ ಏಕೆ ಈ ನಿರಾಕರಣೆ. ಇದು ದುರುದ್ದೇಶವಲ್ಲದೆ ಇನ್ನೇನು? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಇದನ್ನೂ ಓದಿ; ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...