Homeಕರ್ನಾಟಕಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

- Advertisement -
- Advertisement -

ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ನಡೆಯುತ್ತಿದ್ದ ಆಂತರಿಕ ಕಚ್ಚಾಟಗಳು ಇದೀಗ ತಣ್ಣಗಾಗುತ್ತಿದೆ ಎನ್ನುವಾಗಲೆ, ಪಕ್ಷದೊಳಗೆ ಮತ್ತೊಂದು ಸುತ್ತಿನ ಕಚ್ಚಾಟ ಭುಗಿಲೇಳುತ್ತಿದೆ. ಈ ಹಿಂದೆ ‘ಮುಂದಿನ ಮುಖ್ಯಮಂತ್ರಿ’ ಎಂಬ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ ಬೆಂಬಲಿಗ ಶಾಸಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿತ್ತು. ಆದರೆ ಇದೀಗ ಈ ಇಬ್ಬರು ನಾಯಕರೆ ತಮ್ಮ ನಡುವೆ ಎಲ್ಲವೂ ಸರಿಯಿಲ್ಲ ಎಂಬುವುದನ್ನು ಬಟಾ ಬಯಲು ಮಾಡಿದ್ದಾರೆ.

ಈ ಹಿಂದಿನ ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಸೇರಿದ್ದ ಶಾಸಕರನ್ನು ವಾಪಾಸು ಪಕ್ಷಕ್ಕೆ ಸೇರಿಸುವುದರ ಬಗ್ಗೆ ಇಬ್ಬರು ನಾಯಕರು ಶನಿವಾರ ನೀಡಿರುವ ಹೇಳಿಕೆಯು ದ್ವಂದ್ವಗಳಿಂದ ಕೂಡಿದ್ದು, ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದೆ.

ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್‌‌, “ಕಾಂಗ್ರೆಸ್‌ ಪಕ್ಷದ ಸಿದ್ಮಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಚಿಸುವ ಯಾರೆ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಾಸಕರನ್ನು ಉದ್ದೇಶಿಸಿ ಈ ಮಾತು ಹೇಳುತ್ತಿಲ್ಲ. ಯಾರೇ ಅರ್ಜಿ ಹಾಕಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಆದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರು, “ಪ್ರಳಯವಾದರೂ ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎ೦ದು ನಾನು ವಿಧಾನಸಭೆಯಲ್ಲಿ ಹೇಳಿದ್ದೇನೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಪಕ್ಷ ತೊರೆದ ಶಾಸಕರನ್ನು ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಜೊತೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ಒಂದೇ ಪಕ್ಷಗಳ ನಾಯಕರ ನಡುವೆ ಸಮನ್ವಯತೆಯಿಲ್ಲದ ನಡೆಯ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿದೆ.

“ರಾಜಕೀಯದಲ್ಲಿ ಬೆನ್ನಿಗೆ ಚೂರಿ ಹಾಕುವ ಕೆಲಸ ನಿತ್ಯ ನಡೆಯುತ್ತಿರುತ್ತದೆ. ಇದು ಕೇವಲ ಡಿ.ಕೆ.ಶಿವಕುಮಾರ್‌ ಅಥವಾ ಕಾಂಗ್ರೆಸ್‌ ಪಕ್ಷ ಅ೦ತ ಅಲ್ಲ, ಎಲ್ಲ ಪಕ್ಷದಲ್ಲೂ ಇ೦ತಹ ಉದಾಹರಣೆಗಳನ್ನು ನೋಡಿದ್ದೇವೆ” ಎಂದು ಡಿಕೆ ಶಿವಕುಮಾರ್‌ ಅವರು ಯಾರೂನ್ನೂ ಸೂಚಿಸದೆ ಹೇಳಿದ್ದಾರೆ. ಪ್ರತಾಪಗೌಡ ಪಾಟೀಲ್‌ ಅವರನ್ನು ನಾವು ಬಿಜೆಪಿಯಿಂದಲೇ ಕರೆ ತಂದಿದ್ದವು. ಹೀಗೆ ಒ೦ದು ಪಕ್ಷದಿ೦ದ ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2024ರಲ್ಲಿ ಮೋದಿ ಸೋಲಿಸಲು AAP, TMC ಜೊತೆ ಮೈತ್ರಿ: ಸಂದರ್ಶನದಲ್ಲಿ ಅಖಿಲ್‌ ಗೊಗೊಯ್

ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತ್ರ ಬಿಜೆಪಿಗೆ ತೆರಳಿದ ಶಾಸಕರನ್ನು ವಾಪಾಸು ಕಾಂಗ್ರೆಸ್‌ಗೆ ತರುವುದಿಲ್ಲ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಗೆ ತೆರಳಿದ ಶಾಸಕರು ಸಿದ್ದರಾಮಯ್ಯ ಅವರ ಆಪ್ತ ಶಾಸಕರೇ ಆಗಿರುವುದರಿಂದ ಅವರು ಕಾಂಗ್ರೆಸ್‌ಗೆ ಮರಳಿದರೂ ಡಿಕೆ ಶಿವಕುಮಾರ್‌ ಅವರಿಗೆ ಲಾಭವಿಲ್ಲ ಎಂದು ಹೇಳಲಾಗುತ್ತಿದೆ.

ಇದಕ್ಕಿಂತಲೂ ಮುಂಚೆ “ಮುಂದಿನ ಮುಖ್ಯಮಂತ್ರಿ” ಚರ್ಚೆಯನ್ನು ಸಿದ್ದರಾಮಯ್ಯ ಅವರ ಆಪ್ತ ಶಾಸಕರೆ ಮುನ್ನಲೆಗೆ ತಂದಿದ್ದರು. ಈ ಬಿಕ್ಕಟ್ಟು ಈಗ ಶಮನವಾದರೂ ಈ ಎಲ್ಲಾ ಬೆಳವಣಿಗೆಗಳೂ ಸಿದ್ದರಾಮಯ್ಯ ಅವರ ಕೃಪಕಟಾಕ್ಷದಲ್ಲೇ ಆಗಿದ್ದು ಎನ್ನಲಾಗುತ್ತಿದೆ.

ಕೊರೊನಾ ಬಿಕ್ಕಟ್ಟನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನಲೆಯಲ್ಲಿ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆಯಾಗಲಿದೆ ಎಂದು ಗ್ರಹಿಸಲಾಗಿದೆ. ಈ ಲಾಭವನ್ನು ಕಾಂಗ್ರೆಸ್ ಪಡೆಯಲಿದ್ದು, ಇದಕ್ಕಾಗಿಯೆ ಪಕ್ಷದೊಳಗೆ ವೇದಿಕೆ ಸಜ್ಜು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾಯಿ ಹೊಲಿಸಲು ಕಾಂಗ್ರೆಸ್ ಹೊರಟಂತಿದೆ.

ಇದನ್ನೂ ಓದಿ: ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....