Homeಕರ್ನಾಟಕಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

- Advertisement -
- Advertisement -

ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ನಡೆಯುತ್ತಿದ್ದ ಆಂತರಿಕ ಕಚ್ಚಾಟಗಳು ಇದೀಗ ತಣ್ಣಗಾಗುತ್ತಿದೆ ಎನ್ನುವಾಗಲೆ, ಪಕ್ಷದೊಳಗೆ ಮತ್ತೊಂದು ಸುತ್ತಿನ ಕಚ್ಚಾಟ ಭುಗಿಲೇಳುತ್ತಿದೆ. ಈ ಹಿಂದೆ ‘ಮುಂದಿನ ಮುಖ್ಯಮಂತ್ರಿ’ ಎಂಬ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ ಬೆಂಬಲಿಗ ಶಾಸಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿತ್ತು. ಆದರೆ ಇದೀಗ ಈ ಇಬ್ಬರು ನಾಯಕರೆ ತಮ್ಮ ನಡುವೆ ಎಲ್ಲವೂ ಸರಿಯಿಲ್ಲ ಎಂಬುವುದನ್ನು ಬಟಾ ಬಯಲು ಮಾಡಿದ್ದಾರೆ.

ಈ ಹಿಂದಿನ ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಸೇರಿದ್ದ ಶಾಸಕರನ್ನು ವಾಪಾಸು ಪಕ್ಷಕ್ಕೆ ಸೇರಿಸುವುದರ ಬಗ್ಗೆ ಇಬ್ಬರು ನಾಯಕರು ಶನಿವಾರ ನೀಡಿರುವ ಹೇಳಿಕೆಯು ದ್ವಂದ್ವಗಳಿಂದ ಕೂಡಿದ್ದು, ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದೆ.

ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್‌‌, “ಕಾಂಗ್ರೆಸ್‌ ಪಕ್ಷದ ಸಿದ್ಮಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಚಿಸುವ ಯಾರೆ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಾಸಕರನ್ನು ಉದ್ದೇಶಿಸಿ ಈ ಮಾತು ಹೇಳುತ್ತಿಲ್ಲ. ಯಾರೇ ಅರ್ಜಿ ಹಾಕಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಆದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರು, “ಪ್ರಳಯವಾದರೂ ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎ೦ದು ನಾನು ವಿಧಾನಸಭೆಯಲ್ಲಿ ಹೇಳಿದ್ದೇನೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಪಕ್ಷ ತೊರೆದ ಶಾಸಕರನ್ನು ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಜೊತೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ಒಂದೇ ಪಕ್ಷಗಳ ನಾಯಕರ ನಡುವೆ ಸಮನ್ವಯತೆಯಿಲ್ಲದ ನಡೆಯ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿದೆ.

“ರಾಜಕೀಯದಲ್ಲಿ ಬೆನ್ನಿಗೆ ಚೂರಿ ಹಾಕುವ ಕೆಲಸ ನಿತ್ಯ ನಡೆಯುತ್ತಿರುತ್ತದೆ. ಇದು ಕೇವಲ ಡಿ.ಕೆ.ಶಿವಕುಮಾರ್‌ ಅಥವಾ ಕಾಂಗ್ರೆಸ್‌ ಪಕ್ಷ ಅ೦ತ ಅಲ್ಲ, ಎಲ್ಲ ಪಕ್ಷದಲ್ಲೂ ಇ೦ತಹ ಉದಾಹರಣೆಗಳನ್ನು ನೋಡಿದ್ದೇವೆ” ಎಂದು ಡಿಕೆ ಶಿವಕುಮಾರ್‌ ಅವರು ಯಾರೂನ್ನೂ ಸೂಚಿಸದೆ ಹೇಳಿದ್ದಾರೆ. ಪ್ರತಾಪಗೌಡ ಪಾಟೀಲ್‌ ಅವರನ್ನು ನಾವು ಬಿಜೆಪಿಯಿಂದಲೇ ಕರೆ ತಂದಿದ್ದವು. ಹೀಗೆ ಒ೦ದು ಪಕ್ಷದಿ೦ದ ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2024ರಲ್ಲಿ ಮೋದಿ ಸೋಲಿಸಲು AAP, TMC ಜೊತೆ ಮೈತ್ರಿ: ಸಂದರ್ಶನದಲ್ಲಿ ಅಖಿಲ್‌ ಗೊಗೊಯ್

ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತ್ರ ಬಿಜೆಪಿಗೆ ತೆರಳಿದ ಶಾಸಕರನ್ನು ವಾಪಾಸು ಕಾಂಗ್ರೆಸ್‌ಗೆ ತರುವುದಿಲ್ಲ ಎಂದು ಹೇಳಿದ್ದಾರೆ. ಈ ಮಧ್ಯೆ ಬಿಜೆಪಿಗೆ ತೆರಳಿದ ಶಾಸಕರು ಸಿದ್ದರಾಮಯ್ಯ ಅವರ ಆಪ್ತ ಶಾಸಕರೇ ಆಗಿರುವುದರಿಂದ ಅವರು ಕಾಂಗ್ರೆಸ್‌ಗೆ ಮರಳಿದರೂ ಡಿಕೆ ಶಿವಕುಮಾರ್‌ ಅವರಿಗೆ ಲಾಭವಿಲ್ಲ ಎಂದು ಹೇಳಲಾಗುತ್ತಿದೆ.

ಇದಕ್ಕಿಂತಲೂ ಮುಂಚೆ “ಮುಂದಿನ ಮುಖ್ಯಮಂತ್ರಿ” ಚರ್ಚೆಯನ್ನು ಸಿದ್ದರಾಮಯ್ಯ ಅವರ ಆಪ್ತ ಶಾಸಕರೆ ಮುನ್ನಲೆಗೆ ತಂದಿದ್ದರು. ಈ ಬಿಕ್ಕಟ್ಟು ಈಗ ಶಮನವಾದರೂ ಈ ಎಲ್ಲಾ ಬೆಳವಣಿಗೆಗಳೂ ಸಿದ್ದರಾಮಯ್ಯ ಅವರ ಕೃಪಕಟಾಕ್ಷದಲ್ಲೇ ಆಗಿದ್ದು ಎನ್ನಲಾಗುತ್ತಿದೆ.

ಕೊರೊನಾ ಬಿಕ್ಕಟ್ಟನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನಲೆಯಲ್ಲಿ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಹಿನ್ನಡೆಯಾಗಲಿದೆ ಎಂದು ಗ್ರಹಿಸಲಾಗಿದೆ. ಈ ಲಾಭವನ್ನು ಕಾಂಗ್ರೆಸ್ ಪಡೆಯಲಿದ್ದು, ಇದಕ್ಕಾಗಿಯೆ ಪಕ್ಷದೊಳಗೆ ವೇದಿಕೆ ಸಜ್ಜು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾಯಿ ಹೊಲಿಸಲು ಕಾಂಗ್ರೆಸ್ ಹೊರಟಂತಿದೆ.

ಇದನ್ನೂ ಓದಿ: ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...