Homeಕರ್ನಾಟಕRCEP ಗೆ ಸಹಿ ಬಿದ್ದರೆ ಅದರ ವಿರುದ್ಧ ಬೀದಿಗಿಳಿದು ಹೋರಾಡುತ್ತೇನೆ - ಸಿದ್ದರಾಮಯ್ಯ

RCEP ಗೆ ಸಹಿ ಬಿದ್ದರೆ ಅದರ ವಿರುದ್ಧ ಬೀದಿಗಿಳಿದು ಹೋರಾಡುತ್ತೇನೆ – ಸಿದ್ದರಾಮಯ್ಯ

- Advertisement -
- Advertisement -

ಇದೀಗ RCEP ಒಪ್ಪಂದಕ್ಕೆ ಸಹಿ ಹಾಕಬಹುದೆಂಬ ಆತಂಕದಿಂದ ರೈತರು ಬೀದಿಗಿಳಿದಿದ್ದಾರೆ. ನಮ್ಮ ಪಕ್ಷದ ಕೇಂದ್ರದ ವಕ್ತಾರಾಧಿಯಾಗಿ ನಾವೆಲ್ಲಾ ಅದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಒಂದು ವೇಳೆ ಸಹಿ ಬಿದ್ದಲ್ಲಿ ಬೀದಿಗಿಳಿಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯನವರು ಪ್ರಸ್ತಾವಿತ ಆರ್.ಸಿ.ಇ.ಪಿ ಒಪ್ಪಂದದ ಬಗ್ಗೆ ಮಾತನಾಡುತ್ತಾ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಲ್ಲಿ ಹಾಲು ಉತ್ಪಾದನೆ ಒಂದು ಉಧ್ಯಮ. ಆದರೆ ನಮಗೆ ಅದು ಉಪಕಸುಬಾಗಿದೆ ಇದನ್ನು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.

ಪ್ರವಾಹ ಬಂದು 90 ದಿನಗಳಾಗುತ್ತಿದೆ. ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಇದನ್ನು ಹೇಳಿದರೆ ನಾನು ಸುಳ್ಳು ಹೇಳ್ತೇನೆ ಎಂದು ಯಡಿಯೂರಪ್ಪ ಹೇಳುತ್ತಾರೆ. 4 ದಶಕಗಳ ಕಾಲ ರಾಜಕೀಯದಲ್ಲಿದ್ದು, ಶಾಸಕನಿಂದ ಮುಖ್ಯಮಂತ್ರಿವರೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ. 13 ಬಾರಿ ಬಜೆಟ್ ಮಂಡಿಸಿದ್ದೇನೆ. ಎಲ್ಲಿಂದ ಮಾಹಿತಿ ಪಡೆಯಬೇಕೆಂದು ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನೆರೆಯಿಂದ 2,47,628 ಮನೆಗಳು ಬಿದ್ದಿವೆ ಎಂದು ಕೇಂದ್ರಕ್ಕೆ ಕೊಟ್ಟಿರುವ ಲೆಕ್ಕ. 92,920 ಸಾವಿರ ಮನೆಗಳಿಗೆ ಹಾನಿಯಾಗಿದೆ ಎಂದು ಜಾಹಿರಾತಿನಲ್ಲಿ ಕೊಟ್ಟಿರುವ ಲೆಕ್ಕ. ಈ ಎರಡರಲ್ಲಿ ಯಾವುದು ಸತ್ಯ? ಯಾವುದು ಸುಳ್ಳು ಮಿಸ್ಟರ್‌ ಯಡಿಯೂರಪ್ಪನವರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ವರ್ಗಾವಣೆಯ ದಂಧೆ, ಆಪರೇಷನ್ ಕಮಲ, ನೆರೆ ಪರಿಹಾರದಲ್ಲಿ ವೈಫಲ್ಯ- ಇವಿಷ್ಟೇ ಯಡಿಯೂರಪ್ಪನವರ ನೂರು ದಿನಗಳ ಸಾಧನೆ – ಒಂದು ದೊಡ್ಡ ಸೊನ್ನೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಸುಮಾರು 80 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. 14,500 ಹಾಲಿನ ಸೊಸೈಟಿಗಳಿವೆ. ಸುಮಾರು 25 ಲಕ್ಷ ಸದಸ್ಯರಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಒಂದೂವರೆ ಕೋಟಿ ಜನರಿಗೆ ಹಾಲು ಉತ್ಪಾದನೆ ಜೀವನೋಪಾಯಕ್ಕೆ ಆಧಾರ. ದೇಶದಲ್ಲಿ ಸುಮಾರು ಹತ್ತು ಕೋಟಿ ಜನ ಈ ಕಸುಬಿನಲ್ಲ್ಲಿದ್ದಾರೆ. ಈ ಕರಾಳ ಒಪ್ಪಂದ ಜಾರಿಯಾದಲ್ಲಿ ಅಷ್ಟು ಜನ ಬೀದಿಗೆ ಬೀಳಬೇಕಾದ ಅಪಾಯವಿದೆ ಎಂದಿದ್ದಾರೆ.

ಮೊದಲನೆಯದಾಗಿ ಈ ಸರ್ಕಾರ ಏನಾದ್ರು ರೈತರ ಪರ ಇದೆ ಅನ್ನೋದಾದ್ರೆ ಅದಕ್ಕೆ ಸೈನ್ ಹಾಕಬಾರದು. ಆಕಸ್ಮಾತ್ ಸೈನ್ ಹಾಕಿದ್ರೆ ನಾವು ಬೀದಿಗಿಳಿದು ಹೋರಾಟ ಮಾಡಲು ಸಿದ್ಧ ಎಂದು ತಮ್ಮ ಗಟ್ಟಿ ನಿಲುವನ್ನು ಸಿದ್ದರಾಮಯ್ಯವರು ಸ್ಪಷ್ಟವಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...