Homeಕರ್ನಾಟಕRCEP ಗೆ ಸಹಿ ಬಿದ್ದರೆ ಅದರ ವಿರುದ್ಧ ಬೀದಿಗಿಳಿದು ಹೋರಾಡುತ್ತೇನೆ - ಸಿದ್ದರಾಮಯ್ಯ

RCEP ಗೆ ಸಹಿ ಬಿದ್ದರೆ ಅದರ ವಿರುದ್ಧ ಬೀದಿಗಿಳಿದು ಹೋರಾಡುತ್ತೇನೆ – ಸಿದ್ದರಾಮಯ್ಯ

- Advertisement -
- Advertisement -

ಇದೀಗ RCEP ಒಪ್ಪಂದಕ್ಕೆ ಸಹಿ ಹಾಕಬಹುದೆಂಬ ಆತಂಕದಿಂದ ರೈತರು ಬೀದಿಗಿಳಿದಿದ್ದಾರೆ. ನಮ್ಮ ಪಕ್ಷದ ಕೇಂದ್ರದ ವಕ್ತಾರಾಧಿಯಾಗಿ ನಾವೆಲ್ಲಾ ಅದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಒಂದು ವೇಳೆ ಸಹಿ ಬಿದ್ದಲ್ಲಿ ಬೀದಿಗಿಳಿಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯನವರು ಪ್ರಸ್ತಾವಿತ ಆರ್.ಸಿ.ಇ.ಪಿ ಒಪ್ಪಂದದ ಬಗ್ಗೆ ಮಾತನಾಡುತ್ತಾ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಲ್ಲಿ ಹಾಲು ಉತ್ಪಾದನೆ ಒಂದು ಉಧ್ಯಮ. ಆದರೆ ನಮಗೆ ಅದು ಉಪಕಸುಬಾಗಿದೆ ಇದನ್ನು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.

ಪ್ರವಾಹ ಬಂದು 90 ದಿನಗಳಾಗುತ್ತಿದೆ. ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಇದನ್ನು ಹೇಳಿದರೆ ನಾನು ಸುಳ್ಳು ಹೇಳ್ತೇನೆ ಎಂದು ಯಡಿಯೂರಪ್ಪ ಹೇಳುತ್ತಾರೆ. 4 ದಶಕಗಳ ಕಾಲ ರಾಜಕೀಯದಲ್ಲಿದ್ದು, ಶಾಸಕನಿಂದ ಮುಖ್ಯಮಂತ್ರಿವರೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ. 13 ಬಾರಿ ಬಜೆಟ್ ಮಂಡಿಸಿದ್ದೇನೆ. ಎಲ್ಲಿಂದ ಮಾಹಿತಿ ಪಡೆಯಬೇಕೆಂದು ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನೆರೆಯಿಂದ 2,47,628 ಮನೆಗಳು ಬಿದ್ದಿವೆ ಎಂದು ಕೇಂದ್ರಕ್ಕೆ ಕೊಟ್ಟಿರುವ ಲೆಕ್ಕ. 92,920 ಸಾವಿರ ಮನೆಗಳಿಗೆ ಹಾನಿಯಾಗಿದೆ ಎಂದು ಜಾಹಿರಾತಿನಲ್ಲಿ ಕೊಟ್ಟಿರುವ ಲೆಕ್ಕ. ಈ ಎರಡರಲ್ಲಿ ಯಾವುದು ಸತ್ಯ? ಯಾವುದು ಸುಳ್ಳು ಮಿಸ್ಟರ್‌ ಯಡಿಯೂರಪ್ಪನವರೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ವರ್ಗಾವಣೆಯ ದಂಧೆ, ಆಪರೇಷನ್ ಕಮಲ, ನೆರೆ ಪರಿಹಾರದಲ್ಲಿ ವೈಫಲ್ಯ- ಇವಿಷ್ಟೇ ಯಡಿಯೂರಪ್ಪನವರ ನೂರು ದಿನಗಳ ಸಾಧನೆ – ಒಂದು ದೊಡ್ಡ ಸೊನ್ನೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಸುಮಾರು 80 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. 14,500 ಹಾಲಿನ ಸೊಸೈಟಿಗಳಿವೆ. ಸುಮಾರು 25 ಲಕ್ಷ ಸದಸ್ಯರಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಒಂದೂವರೆ ಕೋಟಿ ಜನರಿಗೆ ಹಾಲು ಉತ್ಪಾದನೆ ಜೀವನೋಪಾಯಕ್ಕೆ ಆಧಾರ. ದೇಶದಲ್ಲಿ ಸುಮಾರು ಹತ್ತು ಕೋಟಿ ಜನ ಈ ಕಸುಬಿನಲ್ಲ್ಲಿದ್ದಾರೆ. ಈ ಕರಾಳ ಒಪ್ಪಂದ ಜಾರಿಯಾದಲ್ಲಿ ಅಷ್ಟು ಜನ ಬೀದಿಗೆ ಬೀಳಬೇಕಾದ ಅಪಾಯವಿದೆ ಎಂದಿದ್ದಾರೆ.

ಮೊದಲನೆಯದಾಗಿ ಈ ಸರ್ಕಾರ ಏನಾದ್ರು ರೈತರ ಪರ ಇದೆ ಅನ್ನೋದಾದ್ರೆ ಅದಕ್ಕೆ ಸೈನ್ ಹಾಕಬಾರದು. ಆಕಸ್ಮಾತ್ ಸೈನ್ ಹಾಕಿದ್ರೆ ನಾವು ಬೀದಿಗಿಳಿದು ಹೋರಾಟ ಮಾಡಲು ಸಿದ್ಧ ಎಂದು ತಮ್ಮ ಗಟ್ಟಿ ನಿಲುವನ್ನು ಸಿದ್ದರಾಮಯ್ಯವರು ಸ್ಪಷ್ಟವಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...