Homeಕರ್ನಾಟಕಕರ್ನಾಟಕದಲ್ಲಿ ಕಾಂಗ್ರೆಸ್ ಗೆ ವಿಲನ್ ಆದರೆ ಸಿದ್ದರಾಮಯ್ಯ?

ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ವಿಲನ್ ಆದರೆ ಸಿದ್ದರಾಮಯ್ಯ?

ಮೋದಿ ಎದುರು ಸಮರ್ಥವಾದ ಸೈದ್ಧಾಂತಿಕ ನಾಯಕತ್ವ ನೀಡುವರೆಂಬ ನಿರೀಕ್ಷೆ ಹುಟ್ಟಿಸಿದ್ದ ಸಿದ್ದರಾಮಯ್ಯನವರು ಹೀಗೆ ಮಾಡಿದ್ದು ಹೌದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

- Advertisement -
- Advertisement -

| ಸುನೀಲ್ ಶಿರಸಿಂಗಿ |

ಕರ್ನಾಟಕ ಕಾಂಗ್ರೆಸ್‍ನ ದಂಡನಾಯಕನಾಗಿ, ಯಶಸ್ವಿ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸಿ, ಬಡ ಮಧ್ಯಮ ವರ್ಗದ ಆಶಾಕಿರಣವಾಗಿದ್ದ ಸಿದ್ಧರಾಮಯ್ಯ ಇಂದು ಅದೇ ಕಾಂಗ್ರೆಸ್ ಪಕ್ಷದ ವಿಲನ್ ಆಗಿ ಕಾಣುತ್ತಿದ್ದಾರೆ. ಎಕ್ಸಿಟ್ ಪೋಲ್ ಬಂದತಕ್ಷಣ ಭಿನ್ನಮತದ ಮಾತುಗಳನ್ನು ಆಡಲು ಶುರು ಮಾಡಿದ ರೋಷನ್‍ಬೇಗ್‍ರ ಪ್ರಧಾನ ಟಾರ್ಗೆಟ್ ಸಿದ್ದರಾಮಯ್ಯನವರೇ ಆಗಿದ್ದರು. ಬಹುಶಃ ಈ ವರಸೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ, ಕಾಂಗ್ರೆಸ್ ವಲಯದಿಂದ ಹೊರಬಿದ್ದ ಅಸಮಾಧಾನದ ದನಿಗಳು ಹೀಗಿವೆ. ‘ನಾವು ಹೀಗೆ ಹೇಳಿದರೆ ಬೇರೆಯವರು ನಂಬದಿರಬಹುದು. ಆದರೆ, ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ನಾಯಕನಾಗಿ ಮಿಂಚುತ್ತಿರುವ ಸಿದ್ಧರಾಮಯ್ಯನವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನು ನೀಡಿದೆ. ಅವರ ಕನಸಾಗಿದ್ದ ಮುಖ್ಯಮಂತ್ರಿ ಪಟ್ಟವನ್ನು ಕಟ್ಟಿದೆ.. ಆದರೆ ಇದು ನಿಜ. ಕಳೆದೆರಡು ವರ್ಷಗಳಲ್ಲಿ ಅವರ ನಡೆಗಳನ್ನು ನೋಡುತ್ತಾ ಬಂದರೆ, ಅವರ ರಾಜಕೀಯ ಲೆಕ್ಕಾಚಾರದ ಒಳಸುಳಿಗಳನ್ನು ಬಿಡಿಸುತ್ತಾ ಬಂದರೆ ಕಾಣುವುದು ಅವರ ಸ್ವಾರ್ಥ ರಾಜಕೀಯ ಮತ್ತು ದುರಹಂಕಾರದ ನಡೆ ಬಿಟ್ಟು ಮತ್ತೇನು ಇಲ್ಲ.’

‘ಮುಖ್ಯಮಂತ್ರಿಯ ಪಟ್ಟ ತಪ್ಪಿದ್ದರಿಂದ ಹತಾಶಗೊಂಡಿದ್ದ ಅಹಿಂದ ನಾಯಕ ಸಿದ್ಧರಾಮಯ್ಯರನ್ನು, ಕಾಂಗ್ರೆಸ್ ಪಕ್ಷ ರತ್ನಗಂಬಳಿ ಹಾಸಿ ಸ್ವಾಗತಿಸಿತು. ನಂತರ ಪಕ್ಷದ ನಿಷ್ಠಾವಂತ ಮಲ್ಲಿಕಾರ್ಜುನ ಖರ್ಗೆಯವರ ಹಿರಿತನವನ್ನು ಕಡೆಗಣಿಸಿ ಮುಖ್ಯಮಂತ್ರಿಯನ್ನಾಗಿ ಮಾಡಿತು. ಅಧಿಕಾರ ಸಿಕ್ಕ ಕೆಲದಿನಗಳ ಮಟ್ಟಿಗೆ ಶಾಂತವಾಗಿದ್ದ ಸಿದ್ದು, ನಂತರ ತಮ್ಮ ಬತ್ತಳಿಕೆಯಿಂದ ಒಂದೊಂದೆ ಬಾಣಗಳನ್ನು ಬಿಡತೊಡಗಿದರು. ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಸ್ಥಾಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದ ಎಚ್.ವಿಶ್ವನಾಥ್‍ರನ್ನು ನಿರ್ಲಕ್ಷಿಸಿ ದೂರ ಮಾಡಿಕೊಂಡರು.’

ಈ ಅವಧಿಯಲ್ಲಿ ಕಾಂಗ್ರೆಸ್‍ನ ಜನಪ್ರಿಯತೆಯನ್ನು ಹೆಚ್ಚಿಸಿದ್ದು ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಮತಪ್ರಮಾಣ ಹೆಚ್ಚಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೇ? ‘ಹೌದು ಇದೆ. ಅದರಲ್ಲಿ ಸಂಶಯವಿಲ್ಲ. ಜೊತೆಗೆ ಈ ಅವಧಿಯಲ್ಲಿ ಅವರು ಯಡಿಯೂರಪ್ಪನವರಿಗಿಂತ ದೊಡ್ಡ ಮಾಸ್ ಲೀಡರ್ ಆಗಿ ಬೆಳೆದರು. ಅವರನ್ನು ಯಾರೂ ನಿರ್ಲಕ್ಷಿಸಲಾಗದ ಪ್ರಮಾಣಕ್ಕೆ ಸಿದ್ದರಾಮಯ್ಯನವರ ಶಕ್ತಿ ಹೆಚ್ಚಿತು. ಅದೇ ಮುಳುವಾದದ್ದು. ಏಕೆಂದರೆ, ಒಂದು ಸಮತೋಲನ ಕಾಪಾಡಬೇಕಿದ್ದ ಕಾಂಗ್ರೆಸ್ ಪಕ್ಷ ಸಿದ್ದುರ ಅಲೆಯಲ್ಲಿ ತೇಲಿ ಹೋಯಿತು. ನಂತರ ಮಲ್ಲಿಕಾರ್ಜುನ ಖರ್ಗೆ ಹೆಗಲ ಮೇಲೆ ಬಂದೂಕ ಇಟ್ಟು ಮುಸ್ಲಿಂ ನಾಯಕ ಖಮರುಲ್ ಇಸ್ಲಾಂ ಮತ್ತು ಹಳೆ ಮೈಸೂರು ಭಾಗದ ಹಿರಿಯ ದಲಿತ ನಾಯಕ ಶ್ರೀನಿವಾಸ ಪ್ರಸಾದ್ ಮೇಲೆ ಗುಂಡು ಹಾರಿಸಿದರು. ಅಂದರೆ ಒಂದು ಹಂತದಲ್ಲಿ ರಾಜಕೀಯವಾಗಿ ಗೆದ್ದರು. ಆದರೆ ನಾಯಕನಾಗಿ, ಮುತ್ಸದ್ದಿಯಾಗಿ ಸೋಲುತ್ತಾ ಸಾಗಿದ್ದರು.’

‘2018ರ ವಿಧಾನ ಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸ್ಪಷ್ಟ ಸಾಧ್ಯತೆಗಳಿದ್ದವು. ಆದರೆ ಅವರ ಕೆಲವು ತಪ್ಪು ನಡೆ ಮತ್ತು ಅತೀ ಆತ್ಮವಿಶ್ವಾಸದಿಂದ ಆ ಅವಕಾಶವನ್ನು ಹಾಳುಮಾಡಿದರು. ಮೊದಲಿಗೆ ತಮ್ಮ ಸ್ವಂತ ಕ್ಷೇತ್ರವಾದ ವರುಣಾದಲ್ಲಿ ರಾಜಕೀಯದ ಆಸಕ್ತಿಯೇ ಇಲ್ಲದಿದ್ದ ತಮ್ಮ ಮಗನನ್ನು ಸ್ಥಾಪಿಸಲು ಹೊರಟಿದ್ದರು. ತಾವು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹಾರಿದ್ದು ಒಂದೆಡೆಯಾದರೆ, ಬಾದಾಮಿಯಲ್ಲಿ ಸ್ಪರ್ಧಿಸಿದ್ದು ಪಕ್ಷಕ್ಕೆ ದೊಡ್ಡ ಹೊಡೆತ ಕೊಟ್ಟಿತು. ಜೊತೆಗೆ ರಾಜ್ಯದಲ್ಲಿ ಪ್ರಬಲ ಕೋಮುಗಳ ಧೃವೀಕರಣದ ಸ್ಪಷ್ಟ ಸೂಚನೆಗಳಿದ್ದರು, ಅದಕ್ಕೆ ಪ್ರತಿ ತಂತ್ರ ಹೆಣೆಯುವುದನ್ನು ಬಿಟ್ಟು ದೊಡ್ಡಗೌಡರನ್ನು ಏಕವಚನದಲ್ಲಿ ನಿಂದಿಸುತ್ತಾ ಸಾಗಿದ್ದು ಪಕ್ಷಕ್ಕೆ ಇನ್ನಷ್ಡು ಹೊಡೆತ ಕೊಟ್ಟಿತು’.

‘ಪಕ್ಷ ಬಹುಮತ ಪಡೆಯದೆ JDS ಜೊತೆ ಅಧಿಕಾರ ಹಂಚಿಕೊಳ್ಳಬೇಕಾಗಿ ಬಂದಿದ್ದರಿಂದ ಇನ್ನಾದರು ಸಿದ್ದು ನಡೆಗಳಿಗೆ ಬ್ರೇಕ್ ಬೀಳುತ್ತೆ ಅಂತ ಅಂದುಕೊಂಡಿದ್ದ ಅವರ ಅಭಿಮಾನಿಗಳಿಗೆ ಭಾರಿ ನಿರಾಶೆ ಕಾದಿತ್ತು. ದೋಸ್ತಿ ಸರಕಾರದಲ್ಲಿ ಬಂಡಾಯವೆದ್ದ ಕಾಂಗ್ರೆಸ್ ಪಕ್ಷದ ಶಾಸಕರ ಬೆನ್ನಿಗೆ ಸಿದ್ದು ಕೈ ಇದ್ದದ್ದು ಹೈಕಮಾಂಡ್ ಗಮನಿಸಲೇ ಇಲ್ಲ.’ ಇಲ್ಲಿಂದಾಚೆಗೆ ಹೇಳುವ ಮಾತುಗಳು ಆಶ್ಚರ್ಯಕರವಾಗಿದೆ. ‘ಇಷ್ಟಾದರು ಸುಮ್ಮನಾಗದ ಸಿದ್ಧರಾಮಯ್ಯ ರಾಜ್ಯ ಕಾಂಗ್ರೆಸ್ ಪಕ್ಷದ ಪಕ್ಷಾತೀತ ನಾಯಕನಾಗಲು ಹೊರಟರು. ಅದರ ಭಾಗವಾಗಿ ಅವರ ಮುಂದಿನ ಗುರಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ.

ಅದಕ್ಕಾಗಿ ಬತ್ತಳಿಕೆಯಿಂದ ಹೊರಬಿದ್ದ ಬಾಣವೇ ಉಮೇಶ್ ಜಾಧವ್. ಧರ್ಮಸಿಂಗ್ ಸಾವಿನ ನಂತರ ಅನಾಥವಾಗಿದ್ದ ಜಾಧವರನ್ನು ಬಳಸಿ ಮಲ್ಲಿಕಾರ್ಜುನ ಖರ್ಗೆ ಬಗ್ಗುಬಡೆಯುವ ಪ್ಲಾನ್ ಮಾಡಿದರು. ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ಧರಾಮಯ್ಯ ದ್ರೋಹ ಬಗೆದರು. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಖರ್ಗೆ ಅವರು ಸಿದ್ಧರಾಮಯ್ಯರ ಜೊತೆಗೆ ನಿಂತಿದ್ದರು. ಖರ್ಗೆ ಅವರ ವಿರುದ್ಧ ಉಮೇಶ್ ಜಾಧವ ಅವರನ್ನು ಕಳಿಸುವ ಆಟ ಆಡಲು ಪ್ರಯತ್ನಿಸಿದರು. ಅದು ಕೈಮೀರಿ ಹೋದ ನಂತರ ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದರೂ ಫಲಕಾರಿಯಾಗಲಿಲ್ಲ. ಬಿಜೆಪಿ ಸೇರಲಿಕ್ಕೆ ಜಾರಕಿಹೊಳಿ ಜೊತೆ ಮುಂಬೈಗೆ ಹೋದ ಜಾಧವ್ ನಂತರ ಕಾಂಗ್ರೆಸ್ಸಿಗರ ಕೈಗೆ ಸಿಗಲಿಲ್ಲ.’

‘ಮಂಡ್ಯದಲ್ಲಿ ಗೌಡರ ಕುಟುಂಬವನ್ನು ಹತೋಟಿಯಲ್ಲಿ ಇಡುವುದಕ್ಕಾಗಿ ಚಿತ್ರನಟ ಅಂಬರೀಶ ಅವರ ಪತ್ನಿ ಸುಮಲತಾ ಅವರನ್ನು ಕಣಕ್ಕೆ ಇಳಿಯುವಂತೆ ನೋಡಿಕೊಂಡರು. ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಸಿದ್ಧರಾಮಯ್ಯ ಅವರ ಬಣದ ಕಾಂಗ್ರೆಸ್ಸಿಗರು ಅವರ ಜೊತೆಗಿದ್ದರು ಎಂಬುದು ಗುಟ್ಟಿನ ಸಂಗತಿಯೇನಲ್ಲ. ಸುಮಲತಾ ಅವರಿಗೆ ದೊರೆತ ಕಾಂಗ್ರೆಸ್ ಬೆಂಬಲದ ಕಾರಣದಿಂದ ಮೈಸೂರು ಮತ್ತಿತರ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‍ಗೆ ಜೆಡಿಎಸ್ ತನ್ನ ಸಂಪೂರ್ಣ ಸಹಕಾರ ನೀಡಲು ಸಾಧ್ಯವಾಗಲಿಲ್ಲ. ಕಲಬುರ್ಗಿಯ ಖರ್ಗೆಯವರ ಹಿನ್ನಡೆ ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ ಕ್ಷೇತ್ರಗಳ ಮೇಲೆಯೂ ಪರಿಣಾಮ ಬೀರಿತು. ಜೆಡಿಎಸ್ ತನ್ನ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಹೆಣಗಾಡುವಂತೆ ಮಾಡಿದ ಕಾಂಗ್ರೆಸ್ ಮತ್ತು ಸಿದ್ಧರಾಮಯ್ಯ ಅದಕ್ಕಾಗಿ ಬೆಲೆ ತೆರಬೇಕಾಯಿತು.’

ಮೇಲಿನ ಮಾತುಗಳೆಲ್ಲವೂ ಸತ್ಯ ಎಂದು ಹೇಳಲಾಗದೇ ಇದ್ದರೂ, ಸಂಪೂರ್ಣ ಅಲ್ಲಗಳೆಯುವುದೂ ಸಾಧ್ಯವಿಲ್ಲ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯನವರ ನಡೆಗಳಿವೆ. ಮೋದಿ ಎದುರು ಸಮರ್ಥವಾದ ಸೈದ್ಧಾಂತಿಕ ನಾಯಕತ್ವ ನೀಡುವರೆಂಬ ನಿರೀಕ್ಷೆ ಹುಟ್ಟಿಸಿದ್ದ ಸಿದ್ದರಾಮಯ್ಯನವರು ಹೀಗೆ ಮಾಡಿದ್ದು ಹೌದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...