Homeಕರ್ನಾಟಕಕರ್ನಾಟಕದಲ್ಲಿ ಕಾಂಗ್ರೆಸ್ ಗೆ ವಿಲನ್ ಆದರೆ ಸಿದ್ದರಾಮಯ್ಯ?

ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ವಿಲನ್ ಆದರೆ ಸಿದ್ದರಾಮಯ್ಯ?

ಮೋದಿ ಎದುರು ಸಮರ್ಥವಾದ ಸೈದ್ಧಾಂತಿಕ ನಾಯಕತ್ವ ನೀಡುವರೆಂಬ ನಿರೀಕ್ಷೆ ಹುಟ್ಟಿಸಿದ್ದ ಸಿದ್ದರಾಮಯ್ಯನವರು ಹೀಗೆ ಮಾಡಿದ್ದು ಹೌದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

- Advertisement -
- Advertisement -

| ಸುನೀಲ್ ಶಿರಸಿಂಗಿ |

ಕರ್ನಾಟಕ ಕಾಂಗ್ರೆಸ್‍ನ ದಂಡನಾಯಕನಾಗಿ, ಯಶಸ್ವಿ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸಿ, ಬಡ ಮಧ್ಯಮ ವರ್ಗದ ಆಶಾಕಿರಣವಾಗಿದ್ದ ಸಿದ್ಧರಾಮಯ್ಯ ಇಂದು ಅದೇ ಕಾಂಗ್ರೆಸ್ ಪಕ್ಷದ ವಿಲನ್ ಆಗಿ ಕಾಣುತ್ತಿದ್ದಾರೆ. ಎಕ್ಸಿಟ್ ಪೋಲ್ ಬಂದತಕ್ಷಣ ಭಿನ್ನಮತದ ಮಾತುಗಳನ್ನು ಆಡಲು ಶುರು ಮಾಡಿದ ರೋಷನ್‍ಬೇಗ್‍ರ ಪ್ರಧಾನ ಟಾರ್ಗೆಟ್ ಸಿದ್ದರಾಮಯ್ಯನವರೇ ಆಗಿದ್ದರು. ಬಹುಶಃ ಈ ವರಸೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ, ಕಾಂಗ್ರೆಸ್ ವಲಯದಿಂದ ಹೊರಬಿದ್ದ ಅಸಮಾಧಾನದ ದನಿಗಳು ಹೀಗಿವೆ. ‘ನಾವು ಹೀಗೆ ಹೇಳಿದರೆ ಬೇರೆಯವರು ನಂಬದಿರಬಹುದು. ಆದರೆ, ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ನಾಯಕನಾಗಿ ಮಿಂಚುತ್ತಿರುವ ಸಿದ್ಧರಾಮಯ್ಯನವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನು ನೀಡಿದೆ. ಅವರ ಕನಸಾಗಿದ್ದ ಮುಖ್ಯಮಂತ್ರಿ ಪಟ್ಟವನ್ನು ಕಟ್ಟಿದೆ.. ಆದರೆ ಇದು ನಿಜ. ಕಳೆದೆರಡು ವರ್ಷಗಳಲ್ಲಿ ಅವರ ನಡೆಗಳನ್ನು ನೋಡುತ್ತಾ ಬಂದರೆ, ಅವರ ರಾಜಕೀಯ ಲೆಕ್ಕಾಚಾರದ ಒಳಸುಳಿಗಳನ್ನು ಬಿಡಿಸುತ್ತಾ ಬಂದರೆ ಕಾಣುವುದು ಅವರ ಸ್ವಾರ್ಥ ರಾಜಕೀಯ ಮತ್ತು ದುರಹಂಕಾರದ ನಡೆ ಬಿಟ್ಟು ಮತ್ತೇನು ಇಲ್ಲ.’

‘ಮುಖ್ಯಮಂತ್ರಿಯ ಪಟ್ಟ ತಪ್ಪಿದ್ದರಿಂದ ಹತಾಶಗೊಂಡಿದ್ದ ಅಹಿಂದ ನಾಯಕ ಸಿದ್ಧರಾಮಯ್ಯರನ್ನು, ಕಾಂಗ್ರೆಸ್ ಪಕ್ಷ ರತ್ನಗಂಬಳಿ ಹಾಸಿ ಸ್ವಾಗತಿಸಿತು. ನಂತರ ಪಕ್ಷದ ನಿಷ್ಠಾವಂತ ಮಲ್ಲಿಕಾರ್ಜುನ ಖರ್ಗೆಯವರ ಹಿರಿತನವನ್ನು ಕಡೆಗಣಿಸಿ ಮುಖ್ಯಮಂತ್ರಿಯನ್ನಾಗಿ ಮಾಡಿತು. ಅಧಿಕಾರ ಸಿಕ್ಕ ಕೆಲದಿನಗಳ ಮಟ್ಟಿಗೆ ಶಾಂತವಾಗಿದ್ದ ಸಿದ್ದು, ನಂತರ ತಮ್ಮ ಬತ್ತಳಿಕೆಯಿಂದ ಒಂದೊಂದೆ ಬಾಣಗಳನ್ನು ಬಿಡತೊಡಗಿದರು. ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಸ್ಥಾಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದ ಎಚ್.ವಿಶ್ವನಾಥ್‍ರನ್ನು ನಿರ್ಲಕ್ಷಿಸಿ ದೂರ ಮಾಡಿಕೊಂಡರು.’

ಈ ಅವಧಿಯಲ್ಲಿ ಕಾಂಗ್ರೆಸ್‍ನ ಜನಪ್ರಿಯತೆಯನ್ನು ಹೆಚ್ಚಿಸಿದ್ದು ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಮತಪ್ರಮಾಣ ಹೆಚ್ಚಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೇ? ‘ಹೌದು ಇದೆ. ಅದರಲ್ಲಿ ಸಂಶಯವಿಲ್ಲ. ಜೊತೆಗೆ ಈ ಅವಧಿಯಲ್ಲಿ ಅವರು ಯಡಿಯೂರಪ್ಪನವರಿಗಿಂತ ದೊಡ್ಡ ಮಾಸ್ ಲೀಡರ್ ಆಗಿ ಬೆಳೆದರು. ಅವರನ್ನು ಯಾರೂ ನಿರ್ಲಕ್ಷಿಸಲಾಗದ ಪ್ರಮಾಣಕ್ಕೆ ಸಿದ್ದರಾಮಯ್ಯನವರ ಶಕ್ತಿ ಹೆಚ್ಚಿತು. ಅದೇ ಮುಳುವಾದದ್ದು. ಏಕೆಂದರೆ, ಒಂದು ಸಮತೋಲನ ಕಾಪಾಡಬೇಕಿದ್ದ ಕಾಂಗ್ರೆಸ್ ಪಕ್ಷ ಸಿದ್ದುರ ಅಲೆಯಲ್ಲಿ ತೇಲಿ ಹೋಯಿತು. ನಂತರ ಮಲ್ಲಿಕಾರ್ಜುನ ಖರ್ಗೆ ಹೆಗಲ ಮೇಲೆ ಬಂದೂಕ ಇಟ್ಟು ಮುಸ್ಲಿಂ ನಾಯಕ ಖಮರುಲ್ ಇಸ್ಲಾಂ ಮತ್ತು ಹಳೆ ಮೈಸೂರು ಭಾಗದ ಹಿರಿಯ ದಲಿತ ನಾಯಕ ಶ್ರೀನಿವಾಸ ಪ್ರಸಾದ್ ಮೇಲೆ ಗುಂಡು ಹಾರಿಸಿದರು. ಅಂದರೆ ಒಂದು ಹಂತದಲ್ಲಿ ರಾಜಕೀಯವಾಗಿ ಗೆದ್ದರು. ಆದರೆ ನಾಯಕನಾಗಿ, ಮುತ್ಸದ್ದಿಯಾಗಿ ಸೋಲುತ್ತಾ ಸಾಗಿದ್ದರು.’

‘2018ರ ವಿಧಾನ ಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸ್ಪಷ್ಟ ಸಾಧ್ಯತೆಗಳಿದ್ದವು. ಆದರೆ ಅವರ ಕೆಲವು ತಪ್ಪು ನಡೆ ಮತ್ತು ಅತೀ ಆತ್ಮವಿಶ್ವಾಸದಿಂದ ಆ ಅವಕಾಶವನ್ನು ಹಾಳುಮಾಡಿದರು. ಮೊದಲಿಗೆ ತಮ್ಮ ಸ್ವಂತ ಕ್ಷೇತ್ರವಾದ ವರುಣಾದಲ್ಲಿ ರಾಜಕೀಯದ ಆಸಕ್ತಿಯೇ ಇಲ್ಲದಿದ್ದ ತಮ್ಮ ಮಗನನ್ನು ಸ್ಥಾಪಿಸಲು ಹೊರಟಿದ್ದರು. ತಾವು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹಾರಿದ್ದು ಒಂದೆಡೆಯಾದರೆ, ಬಾದಾಮಿಯಲ್ಲಿ ಸ್ಪರ್ಧಿಸಿದ್ದು ಪಕ್ಷಕ್ಕೆ ದೊಡ್ಡ ಹೊಡೆತ ಕೊಟ್ಟಿತು. ಜೊತೆಗೆ ರಾಜ್ಯದಲ್ಲಿ ಪ್ರಬಲ ಕೋಮುಗಳ ಧೃವೀಕರಣದ ಸ್ಪಷ್ಟ ಸೂಚನೆಗಳಿದ್ದರು, ಅದಕ್ಕೆ ಪ್ರತಿ ತಂತ್ರ ಹೆಣೆಯುವುದನ್ನು ಬಿಟ್ಟು ದೊಡ್ಡಗೌಡರನ್ನು ಏಕವಚನದಲ್ಲಿ ನಿಂದಿಸುತ್ತಾ ಸಾಗಿದ್ದು ಪಕ್ಷಕ್ಕೆ ಇನ್ನಷ್ಡು ಹೊಡೆತ ಕೊಟ್ಟಿತು’.

‘ಪಕ್ಷ ಬಹುಮತ ಪಡೆಯದೆ JDS ಜೊತೆ ಅಧಿಕಾರ ಹಂಚಿಕೊಳ್ಳಬೇಕಾಗಿ ಬಂದಿದ್ದರಿಂದ ಇನ್ನಾದರು ಸಿದ್ದು ನಡೆಗಳಿಗೆ ಬ್ರೇಕ್ ಬೀಳುತ್ತೆ ಅಂತ ಅಂದುಕೊಂಡಿದ್ದ ಅವರ ಅಭಿಮಾನಿಗಳಿಗೆ ಭಾರಿ ನಿರಾಶೆ ಕಾದಿತ್ತು. ದೋಸ್ತಿ ಸರಕಾರದಲ್ಲಿ ಬಂಡಾಯವೆದ್ದ ಕಾಂಗ್ರೆಸ್ ಪಕ್ಷದ ಶಾಸಕರ ಬೆನ್ನಿಗೆ ಸಿದ್ದು ಕೈ ಇದ್ದದ್ದು ಹೈಕಮಾಂಡ್ ಗಮನಿಸಲೇ ಇಲ್ಲ.’ ಇಲ್ಲಿಂದಾಚೆಗೆ ಹೇಳುವ ಮಾತುಗಳು ಆಶ್ಚರ್ಯಕರವಾಗಿದೆ. ‘ಇಷ್ಟಾದರು ಸುಮ್ಮನಾಗದ ಸಿದ್ಧರಾಮಯ್ಯ ರಾಜ್ಯ ಕಾಂಗ್ರೆಸ್ ಪಕ್ಷದ ಪಕ್ಷಾತೀತ ನಾಯಕನಾಗಲು ಹೊರಟರು. ಅದರ ಭಾಗವಾಗಿ ಅವರ ಮುಂದಿನ ಗುರಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ.

ಅದಕ್ಕಾಗಿ ಬತ್ತಳಿಕೆಯಿಂದ ಹೊರಬಿದ್ದ ಬಾಣವೇ ಉಮೇಶ್ ಜಾಧವ್. ಧರ್ಮಸಿಂಗ್ ಸಾವಿನ ನಂತರ ಅನಾಥವಾಗಿದ್ದ ಜಾಧವರನ್ನು ಬಳಸಿ ಮಲ್ಲಿಕಾರ್ಜುನ ಖರ್ಗೆ ಬಗ್ಗುಬಡೆಯುವ ಪ್ಲಾನ್ ಮಾಡಿದರು. ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ಧರಾಮಯ್ಯ ದ್ರೋಹ ಬಗೆದರು. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಖರ್ಗೆ ಅವರು ಸಿದ್ಧರಾಮಯ್ಯರ ಜೊತೆಗೆ ನಿಂತಿದ್ದರು. ಖರ್ಗೆ ಅವರ ವಿರುದ್ಧ ಉಮೇಶ್ ಜಾಧವ ಅವರನ್ನು ಕಳಿಸುವ ಆಟ ಆಡಲು ಪ್ರಯತ್ನಿಸಿದರು. ಅದು ಕೈಮೀರಿ ಹೋದ ನಂತರ ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದರೂ ಫಲಕಾರಿಯಾಗಲಿಲ್ಲ. ಬಿಜೆಪಿ ಸೇರಲಿಕ್ಕೆ ಜಾರಕಿಹೊಳಿ ಜೊತೆ ಮುಂಬೈಗೆ ಹೋದ ಜಾಧವ್ ನಂತರ ಕಾಂಗ್ರೆಸ್ಸಿಗರ ಕೈಗೆ ಸಿಗಲಿಲ್ಲ.’

‘ಮಂಡ್ಯದಲ್ಲಿ ಗೌಡರ ಕುಟುಂಬವನ್ನು ಹತೋಟಿಯಲ್ಲಿ ಇಡುವುದಕ್ಕಾಗಿ ಚಿತ್ರನಟ ಅಂಬರೀಶ ಅವರ ಪತ್ನಿ ಸುಮಲತಾ ಅವರನ್ನು ಕಣಕ್ಕೆ ಇಳಿಯುವಂತೆ ನೋಡಿಕೊಂಡರು. ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಸಿದ್ಧರಾಮಯ್ಯ ಅವರ ಬಣದ ಕಾಂಗ್ರೆಸ್ಸಿಗರು ಅವರ ಜೊತೆಗಿದ್ದರು ಎಂಬುದು ಗುಟ್ಟಿನ ಸಂಗತಿಯೇನಲ್ಲ. ಸುಮಲತಾ ಅವರಿಗೆ ದೊರೆತ ಕಾಂಗ್ರೆಸ್ ಬೆಂಬಲದ ಕಾರಣದಿಂದ ಮೈಸೂರು ಮತ್ತಿತರ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‍ಗೆ ಜೆಡಿಎಸ್ ತನ್ನ ಸಂಪೂರ್ಣ ಸಹಕಾರ ನೀಡಲು ಸಾಧ್ಯವಾಗಲಿಲ್ಲ. ಕಲಬುರ್ಗಿಯ ಖರ್ಗೆಯವರ ಹಿನ್ನಡೆ ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ ಕ್ಷೇತ್ರಗಳ ಮೇಲೆಯೂ ಪರಿಣಾಮ ಬೀರಿತು. ಜೆಡಿಎಸ್ ತನ್ನ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಹೆಣಗಾಡುವಂತೆ ಮಾಡಿದ ಕಾಂಗ್ರೆಸ್ ಮತ್ತು ಸಿದ್ಧರಾಮಯ್ಯ ಅದಕ್ಕಾಗಿ ಬೆಲೆ ತೆರಬೇಕಾಯಿತು.’

ಮೇಲಿನ ಮಾತುಗಳೆಲ್ಲವೂ ಸತ್ಯ ಎಂದು ಹೇಳಲಾಗದೇ ಇದ್ದರೂ, ಸಂಪೂರ್ಣ ಅಲ್ಲಗಳೆಯುವುದೂ ಸಾಧ್ಯವಿಲ್ಲ ಎನ್ನುವ ರೀತಿಯಲ್ಲಿ ಸಿದ್ದರಾಮಯ್ಯನವರ ನಡೆಗಳಿವೆ. ಮೋದಿ ಎದುರು ಸಮರ್ಥವಾದ ಸೈದ್ಧಾಂತಿಕ ನಾಯಕತ್ವ ನೀಡುವರೆಂಬ ನಿರೀಕ್ಷೆ ಹುಟ್ಟಿಸಿದ್ದ ಸಿದ್ದರಾಮಯ್ಯನವರು ಹೀಗೆ ಮಾಡಿದ್ದು ಹೌದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...