Homeಕರ್ನಾಟಕಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

- Advertisement -
- Advertisement -

ಬಜರಂಗದಳ ಮುಖಂಡನಿಂದ ಇತ್ತೀಚೆಗೆ ಕೊಲೆಯಾದ ಬೆಳ್ತಂಗಡಿಯ ದಲಿತ ಯುವಕ, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತ ದಿನೇಶ್ ಕನ್ಯಾಡಿ ಅವರ ಮನೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತ್ವಾನ ಹೇಳಿದ್ದಾರೆ.

ವೈಯಕ್ತಿಕ ಪರಿಹಾರವಾಗಿ ಒಂದು ಲಕ್ಷ ರೂ.ಗಳನ್ನು ಮೃತನ ಕುಟುಂಬದವರಿಗೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಜರಿದ್ದರು.

ಪ್ರಕರಣದ ಕುರಿತು ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಅವರು, ಧರ್ಮಸ್ಥಳದಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಹತ್ಯೆಗೈದ ಬಜರಂಗದಳ ಮುಖಂಡನನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಆರೋಪಿಸಿದ್ದರು. ಈ ಕೂಡಲೇ ದಲಿತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, “ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ‌ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಬಜರಂಗದಳದ ನಾಯಕ‌ನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ‌‌ ಮಣಿಯದೆ ಕೊಲೆ ಆರೋಪಿಯ‌ನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದ್ದರು.

“ಹಿಂದೂಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ ಬಿಜೆಪಿಯು ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವಿನ ರಾಜಕೀಯ ಮಾಡಲು ಹೋಗದೆ ಮೃತಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದರು.

ಫೆಬ್ರವರಿ 23 ರಂದು ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಕನ್ಯಾಡಿಯ ಕೃಷ್ಣ ಎಂಬ ಬಜರಂಗದಳದ ಮುಖಂಡ ಅದೇ ಗ್ರಾಮದ ದಿನೇಶ್ ಎಂಬ ದಲಿತ ಯುವಕನ ಮೇಲೆ ತೀವ್ರ ರೀತಿಯಲ್ಲಿ ಹಲ್ಲೆ ನಡೆಸಿದ್ದನು. ಆ ದೃಶ್ಯಗಳು ಸಿಸಿಕ್ಯಾಮೆರಾದಲ್ಲಿ ದಾಖಲಾಗಿದ್ದು, 45 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಆನಂತರ ಫೆಬ್ರವರಿ 24 ರಂದು ಆಸ್ಪತ್ರೆಗೆ ಸೇರಿಸಲಾಯಿತಾದರೂ ಫೆಬ್ರವರಿ 25 ರಂದು ದಿನೇಶ್ ಸಾವನಪ್ಪಿದ್ದರು.

ಈ ಕುರಿತು ಮೃತನ ತಾಯಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದಲಿತ ದೌರ್ಜನ್ಯ ತಡೆ ಕಾಯ್ದೆ, ಕೊಲೆ ಪ್ರಕರಣ ದಾಖಲಾಗಿತ್ತು.

ಧರ್ಮಸ್ಥಳ
ಸಿಸಿ ಕ್ಯಾಮರದಲ್ಲಿ ದಾಖಲಾದ ಹಲ್ಲೆ. ಬಲ ಭಾಗದಲ್ಲಿರುವುದು ಆರೋಪಿ ಕೃಷ್ಣ

ವಿವಿಧ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ “ಯುವಕರ ನಡೆ ಸಾಮರಸ್ಯದ ಕಡೆ” ಕಾರ್ಯಕ್ರಮವನ್ನು ಸಿದ್ದರಾಮಯ್ಯ ಉದ್ಘಾಟಿಸಿದರು. ಸಂವಿಧಾನದ ಮೂಲ ಆಶಯವಾದ ಸೌಹಾರ್ದಯುತ, ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿರಲಿದೆ ಎಂದು ಅವರು ತಿಳಿಸಿದ್ದಾರೆ.

ಭೂ ಸುಧಾರಣೆ ಕಾಯಿದೆ ಜಾರಿಯಾಗಿ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿಯ ಹಿರಿಯಡಕದಲ್ಲಿ ಇಂದು ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭವನ್ನು ಸಿದ್ದರಾಮಯ್ಯ ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರಾದ ವಿನಯಕುಮಾರ ಸೊರಕೆ, ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮೊಯಿದ್ದೀನ್ ಬಾವಾ, ಐವಾನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಹಾಜರಿದ್ದರು.


ಇದನ್ನೂ ಓದಿರಿ: ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...