Homeಕರ್ನಾಟಕಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

ಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್ ಗೆ ಭಾರತ ರತ್ನಕೊಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಇದೇ ವಿಷಯ ಈಗ ಪರ-ವಿರೋಧದ ಚರ್ಚೆಯ ಪ್ರಮುಖ ವಿಷಯವಾಗಿದೆ. ಬಿಜೆಪಿಯ ನಿಲುವನ್ನು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅಲ್ಲದೇ ಸಾವರ್ಕರ್ ಗೆ ಭಾರತ ರತ್ನ ಕೊಡುವ ವಿಚಾರವನ್ನು ಖಂಡಿಸಿದ್ದರು. ಇದೇ ವಿಷಯದಲ್ಲಿ ಈಗ ಸಚಿವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮತ್ತು ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್ ಶುರುವಾಗಿದೆ.

ಹೋದಲ್ಲಿ ಬಂದಲ್ಲಿ ಪರ-ವಿರೋಧ ಹೇಳಿಕೆ ನೀಡಿದ್ದ ನಾಯಕರ ಆರೋಪ-ಪ್ರತ್ಯಾರೋಪ ಈಗ ಸಾಮಾಜಿಕ ಜಾಲತಾಣದಲ್ಲಿಯೂ ಜೋರಾಗಿದೆ. ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ವಾದ-ಪ್ರತಿವಾದದ ಸದ್ದು ಕೇಳಿ ಬರುತ್ತಿದೆ.

ಸಿದ್ದರಾಮಯ್ಯಅವರ ವಿರೋಧಕ್ಕೆ ಟ್ವೀಟ್ ಮಾಡಿ ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾತ್ಮಾ ಗಾಂಧಿ ಹತ್ಯೆಯ ಸಂಚುಕೋರ ಎಂದು ರಾಷ್ಟ್ರವಾದಿ ಸಾವರ್ಕರ್ ಅವರನ್ನು ಅವಮಾನಿಸಿದ್ದೀರಿ. ಸಿಎಂ ಹುದ್ದೆ ಕಳೆದುಕೊಂಡ ಮೇಲೆ ನೀವು ಮಾನಸಿಕ ವೈಕಲ್ಯಕ್ಕೆ ತುತ್ತಾಗಿದ್ದೀರಾ..? ಇತಿಹಾಸದ ಬಗ್ಗೆ ನಿಮಗೆ ಗೊತ್ತಿದೆಯಾ..? ಸೆಲ್ಯುಲರ್ ಜೈಲಿಗೆ ನೀವು ಭೇಟಿ ನೀಡಿ, ಪ್ರವಾಸಕ್ಕೆ ವ್ಯವಸ್ಥೆ ಮಾಡುತ್ತೇನೆ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಹಾತ್ಮ ಗಾಂಧೀಜಿಯವರ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ. ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು, ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.  ನಮ್ಮಂತವರು ರಾಜಕೀಯದ ಮಧ್ಯೆ, ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಇದಕ್ಕೆ ಸಿ.ಟಿ.ರವಿ ಪ್ರತಿ ಟ್ವೀಟ್ ಮಾಡಿ, ಹಿಂದೂ ವಿರೋಧಿ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ದೇಶಭಕ್ತನೊಬ್ಬ ಗಾಂಧೀಜಿಯವರ ಹತ್ಯೆಯ ಆರಫಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು, ಮುಗ್ಧರು ನಿಗೂಢವಾಗಿ ಸಾವನ್ನಪ್ಪಿದಾಗ ರಾಜ್ಯವನ್ನಾಳುತ್ತಿದ್ದವರು ಕುಡಿಯುತ್ತಿದ್ದರೋ..? ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಇತ್ತ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ, ‘ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ‌. ಗಾಂಧಿ ಹತ್ಯೆ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೇನೆ. ಹಿಂದೂಗಳಿಗೆ ಕೊಡಬೇಡಿ ಎಂದು ಹೇಳಿಲ್ಲ. ಗಾಂಧೀಜಿ ಕೂಡಾ ಹಿಂದೂ, ನಾನು ಕೂಡ ಹಿಂದೂ. ನಮ್ಮ ಸರ್ಕಾರ ರಾಜ್ಯದಲ್ಲಿ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿರದಿದ್ದ ಕಾರಣದಿಂದಾಗಿ ವರದಿ ಜಾರಿಗೊಳಿಸಲು ಆಗಿರಲಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈಗಿನ ಸರ್ಕಾರಕ್ಕೆ ಸಮೀಕ್ಷೆಯ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಬಿಜೆಪಿ ತಿರಸ್ಕರಿಸಲು ಹುನ್ನಾರ ನಡೆಸುತ್ತಿದೆ. ಈ ಸಮೀಕ್ಷೆ ಯಾವುದೋ ಒಂದು ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ, ರಾಜ್ಯದ ಪ್ರತಿ ಕುಟುಂಬವನ್ನು ಸಂಪರ್ಕಿಸಿ ತಲೆ ಎಣಿಕೆ ಮೂಲಕ ವೈಜ್ಞಾನಿಕವಾಗಿ ನಡೆಸಿದ್ದ ಸಮೀಕ್ಷೆ. ಈ ವರದಿಯನ್ನು ಒಪ್ಪಿಕೊಂಡರೆ ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಾಗುತ್ತದೆ. ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ವಿರೋಧಿಯಾಗಿರುವ ಬಿಜೆಪಿಗೆ ಇದು ಇಷ್ಟ ಆಗುತ್ತಿಲ್ಲ’ ಎಂದು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ಸಾವರ್ಕರ್ ಗೆ ಭಾರತ ರತ್ನ ಕೊಡುತ್ತೇವೆ. ಎನ್ನುತ್ತಿರುವವರು ಮುಂದೆ ಗೋಡ್ಸೆಗೂ ಕೊಡುತ್ತೇವೆ ಎನ್ನಬಹುದು. ಕೊಡಲಿ ಬಿಡಿ. ಮನುವಾದಿಗಳಿಗೆ ಅಪಾರವಾದ ಬಹುಮತವನ್ನು ಕೊಟ್ಟಿರುವ ನಮಗೆ ಇಂತಹದ್ದನ್ನೆಲ್ಲ ನೊಡುವ ಸೌಭಾಗ್ಯ ದೊರಕಿದೆ.

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...