Homeಕರ್ನಾಟಕಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

ಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್ ಗೆ ಭಾರತ ರತ್ನಕೊಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಇದೇ ವಿಷಯ ಈಗ ಪರ-ವಿರೋಧದ ಚರ್ಚೆಯ ಪ್ರಮುಖ ವಿಷಯವಾಗಿದೆ. ಬಿಜೆಪಿಯ ನಿಲುವನ್ನು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅಲ್ಲದೇ ಸಾವರ್ಕರ್ ಗೆ ಭಾರತ ರತ್ನ ಕೊಡುವ ವಿಚಾರವನ್ನು ಖಂಡಿಸಿದ್ದರು. ಇದೇ ವಿಷಯದಲ್ಲಿ ಈಗ ಸಚಿವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮತ್ತು ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್ ಶುರುವಾಗಿದೆ.

ಹೋದಲ್ಲಿ ಬಂದಲ್ಲಿ ಪರ-ವಿರೋಧ ಹೇಳಿಕೆ ನೀಡಿದ್ದ ನಾಯಕರ ಆರೋಪ-ಪ್ರತ್ಯಾರೋಪ ಈಗ ಸಾಮಾಜಿಕ ಜಾಲತಾಣದಲ್ಲಿಯೂ ಜೋರಾಗಿದೆ. ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ವಾದ-ಪ್ರತಿವಾದದ ಸದ್ದು ಕೇಳಿ ಬರುತ್ತಿದೆ.

ಸಿದ್ದರಾಮಯ್ಯಅವರ ವಿರೋಧಕ್ಕೆ ಟ್ವೀಟ್ ಮಾಡಿ ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾತ್ಮಾ ಗಾಂಧಿ ಹತ್ಯೆಯ ಸಂಚುಕೋರ ಎಂದು ರಾಷ್ಟ್ರವಾದಿ ಸಾವರ್ಕರ್ ಅವರನ್ನು ಅವಮಾನಿಸಿದ್ದೀರಿ. ಸಿಎಂ ಹುದ್ದೆ ಕಳೆದುಕೊಂಡ ಮೇಲೆ ನೀವು ಮಾನಸಿಕ ವೈಕಲ್ಯಕ್ಕೆ ತುತ್ತಾಗಿದ್ದೀರಾ..? ಇತಿಹಾಸದ ಬಗ್ಗೆ ನಿಮಗೆ ಗೊತ್ತಿದೆಯಾ..? ಸೆಲ್ಯುಲರ್ ಜೈಲಿಗೆ ನೀವು ಭೇಟಿ ನೀಡಿ, ಪ್ರವಾಸಕ್ಕೆ ವ್ಯವಸ್ಥೆ ಮಾಡುತ್ತೇನೆ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಹಾತ್ಮ ಗಾಂಧೀಜಿಯವರ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ. ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು, ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.  ನಮ್ಮಂತವರು ರಾಜಕೀಯದ ಮಧ್ಯೆ, ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಇದಕ್ಕೆ ಸಿ.ಟಿ.ರವಿ ಪ್ರತಿ ಟ್ವೀಟ್ ಮಾಡಿ, ಹಿಂದೂ ವಿರೋಧಿ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ದೇಶಭಕ್ತನೊಬ್ಬ ಗಾಂಧೀಜಿಯವರ ಹತ್ಯೆಯ ಆರಫಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು, ಮುಗ್ಧರು ನಿಗೂಢವಾಗಿ ಸಾವನ್ನಪ್ಪಿದಾಗ ರಾಜ್ಯವನ್ನಾಳುತ್ತಿದ್ದವರು ಕುಡಿಯುತ್ತಿದ್ದರೋ..? ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಇತ್ತ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ, ‘ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ‌. ಗಾಂಧಿ ಹತ್ಯೆ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೇನೆ. ಹಿಂದೂಗಳಿಗೆ ಕೊಡಬೇಡಿ ಎಂದು ಹೇಳಿಲ್ಲ. ಗಾಂಧೀಜಿ ಕೂಡಾ ಹಿಂದೂ, ನಾನು ಕೂಡ ಹಿಂದೂ. ನಮ್ಮ ಸರ್ಕಾರ ರಾಜ್ಯದಲ್ಲಿ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿರದಿದ್ದ ಕಾರಣದಿಂದಾಗಿ ವರದಿ ಜಾರಿಗೊಳಿಸಲು ಆಗಿರಲಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈಗಿನ ಸರ್ಕಾರಕ್ಕೆ ಸಮೀಕ್ಷೆಯ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಬಿಜೆಪಿ ತಿರಸ್ಕರಿಸಲು ಹುನ್ನಾರ ನಡೆಸುತ್ತಿದೆ. ಈ ಸಮೀಕ್ಷೆ ಯಾವುದೋ ಒಂದು ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ, ರಾಜ್ಯದ ಪ್ರತಿ ಕುಟುಂಬವನ್ನು ಸಂಪರ್ಕಿಸಿ ತಲೆ ಎಣಿಕೆ ಮೂಲಕ ವೈಜ್ಞಾನಿಕವಾಗಿ ನಡೆಸಿದ್ದ ಸಮೀಕ್ಷೆ. ಈ ವರದಿಯನ್ನು ಒಪ್ಪಿಕೊಂಡರೆ ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಾಗುತ್ತದೆ. ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ವಿರೋಧಿಯಾಗಿರುವ ಬಿಜೆಪಿಗೆ ಇದು ಇಷ್ಟ ಆಗುತ್ತಿಲ್ಲ’ ಎಂದು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ಸಾವರ್ಕರ್ ಗೆ ಭಾರತ ರತ್ನ ಕೊಡುತ್ತೇವೆ. ಎನ್ನುತ್ತಿರುವವರು ಮುಂದೆ ಗೋಡ್ಸೆಗೂ ಕೊಡುತ್ತೇವೆ ಎನ್ನಬಹುದು. ಕೊಡಲಿ ಬಿಡಿ. ಮನುವಾದಿಗಳಿಗೆ ಅಪಾರವಾದ ಬಹುಮತವನ್ನು ಕೊಟ್ಟಿರುವ ನಮಗೆ ಇಂತಹದ್ದನ್ನೆಲ್ಲ ನೊಡುವ ಸೌಭಾಗ್ಯ ದೊರಕಿದೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...