Homeಕರ್ನಾಟಕಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

ಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್ ಗೆ ಭಾರತ ರತ್ನಕೊಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಇದೇ ವಿಷಯ ಈಗ ಪರ-ವಿರೋಧದ ಚರ್ಚೆಯ ಪ್ರಮುಖ ವಿಷಯವಾಗಿದೆ. ಬಿಜೆಪಿಯ ನಿಲುವನ್ನು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅಲ್ಲದೇ ಸಾವರ್ಕರ್ ಗೆ ಭಾರತ ರತ್ನ ಕೊಡುವ ವಿಚಾರವನ್ನು ಖಂಡಿಸಿದ್ದರು. ಇದೇ ವಿಷಯದಲ್ಲಿ ಈಗ ಸಚಿವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮತ್ತು ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್ ಶುರುವಾಗಿದೆ.

ಹೋದಲ್ಲಿ ಬಂದಲ್ಲಿ ಪರ-ವಿರೋಧ ಹೇಳಿಕೆ ನೀಡಿದ್ದ ನಾಯಕರ ಆರೋಪ-ಪ್ರತ್ಯಾರೋಪ ಈಗ ಸಾಮಾಜಿಕ ಜಾಲತಾಣದಲ್ಲಿಯೂ ಜೋರಾಗಿದೆ. ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ವಾದ-ಪ್ರತಿವಾದದ ಸದ್ದು ಕೇಳಿ ಬರುತ್ತಿದೆ.

ಸಿದ್ದರಾಮಯ್ಯಅವರ ವಿರೋಧಕ್ಕೆ ಟ್ವೀಟ್ ಮಾಡಿ ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾತ್ಮಾ ಗಾಂಧಿ ಹತ್ಯೆಯ ಸಂಚುಕೋರ ಎಂದು ರಾಷ್ಟ್ರವಾದಿ ಸಾವರ್ಕರ್ ಅವರನ್ನು ಅವಮಾನಿಸಿದ್ದೀರಿ. ಸಿಎಂ ಹುದ್ದೆ ಕಳೆದುಕೊಂಡ ಮೇಲೆ ನೀವು ಮಾನಸಿಕ ವೈಕಲ್ಯಕ್ಕೆ ತುತ್ತಾಗಿದ್ದೀರಾ..? ಇತಿಹಾಸದ ಬಗ್ಗೆ ನಿಮಗೆ ಗೊತ್ತಿದೆಯಾ..? ಸೆಲ್ಯುಲರ್ ಜೈಲಿಗೆ ನೀವು ಭೇಟಿ ನೀಡಿ, ಪ್ರವಾಸಕ್ಕೆ ವ್ಯವಸ್ಥೆ ಮಾಡುತ್ತೇನೆ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಹಾತ್ಮ ಗಾಂಧೀಜಿಯವರ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ. ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು, ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.  ನಮ್ಮಂತವರು ರಾಜಕೀಯದ ಮಧ್ಯೆ, ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಇದಕ್ಕೆ ಸಿ.ಟಿ.ರವಿ ಪ್ರತಿ ಟ್ವೀಟ್ ಮಾಡಿ, ಹಿಂದೂ ವಿರೋಧಿ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ದೇಶಭಕ್ತನೊಬ್ಬ ಗಾಂಧೀಜಿಯವರ ಹತ್ಯೆಯ ಆರಫಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು, ಮುಗ್ಧರು ನಿಗೂಢವಾಗಿ ಸಾವನ್ನಪ್ಪಿದಾಗ ರಾಜ್ಯವನ್ನಾಳುತ್ತಿದ್ದವರು ಕುಡಿಯುತ್ತಿದ್ದರೋ..? ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಇತ್ತ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ, ‘ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ‌. ಗಾಂಧಿ ಹತ್ಯೆ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೇನೆ. ಹಿಂದೂಗಳಿಗೆ ಕೊಡಬೇಡಿ ಎಂದು ಹೇಳಿಲ್ಲ. ಗಾಂಧೀಜಿ ಕೂಡಾ ಹಿಂದೂ, ನಾನು ಕೂಡ ಹಿಂದೂ. ನಮ್ಮ ಸರ್ಕಾರ ರಾಜ್ಯದಲ್ಲಿ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿರದಿದ್ದ ಕಾರಣದಿಂದಾಗಿ ವರದಿ ಜಾರಿಗೊಳಿಸಲು ಆಗಿರಲಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈಗಿನ ಸರ್ಕಾರಕ್ಕೆ ಸಮೀಕ್ಷೆಯ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಬಿಜೆಪಿ ತಿರಸ್ಕರಿಸಲು ಹುನ್ನಾರ ನಡೆಸುತ್ತಿದೆ. ಈ ಸಮೀಕ್ಷೆ ಯಾವುದೋ ಒಂದು ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ, ರಾಜ್ಯದ ಪ್ರತಿ ಕುಟುಂಬವನ್ನು ಸಂಪರ್ಕಿಸಿ ತಲೆ ಎಣಿಕೆ ಮೂಲಕ ವೈಜ್ಞಾನಿಕವಾಗಿ ನಡೆಸಿದ್ದ ಸಮೀಕ್ಷೆ. ಈ ವರದಿಯನ್ನು ಒಪ್ಪಿಕೊಂಡರೆ ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಾಗುತ್ತದೆ. ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ವಿರೋಧಿಯಾಗಿರುವ ಬಿಜೆಪಿಗೆ ಇದು ಇಷ್ಟ ಆಗುತ್ತಿಲ್ಲ’ ಎಂದು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ಸಾವರ್ಕರ್ ಗೆ ಭಾರತ ರತ್ನ ಕೊಡುತ್ತೇವೆ. ಎನ್ನುತ್ತಿರುವವರು ಮುಂದೆ ಗೋಡ್ಸೆಗೂ ಕೊಡುತ್ತೇವೆ ಎನ್ನಬಹುದು. ಕೊಡಲಿ ಬಿಡಿ. ಮನುವಾದಿಗಳಿಗೆ ಅಪಾರವಾದ ಬಹುಮತವನ್ನು ಕೊಟ್ಟಿರುವ ನಮಗೆ ಇಂತಹದ್ದನ್ನೆಲ್ಲ ನೊಡುವ ಸೌಭಾಗ್ಯ ದೊರಕಿದೆ.

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...