Homeಕರ್ನಾಟಕಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

ಸಿದ್ದರಾಮಯ್ಯ, ಸಿ.ಟಿ.ರವಿ ಟ್ವೀಟ್ ವಾರ್: ಆರೋಪ-ಪ್ರತ್ಯಾರೋಪದ್ದೇ ಸದ್ದು..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್ ಗೆ ಭಾರತ ರತ್ನಕೊಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಇದೇ ವಿಷಯ ಈಗ ಪರ-ವಿರೋಧದ ಚರ್ಚೆಯ ಪ್ರಮುಖ ವಿಷಯವಾಗಿದೆ. ಬಿಜೆಪಿಯ ನಿಲುವನ್ನು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅಲ್ಲದೇ ಸಾವರ್ಕರ್ ಗೆ ಭಾರತ ರತ್ನ ಕೊಡುವ ವಿಚಾರವನ್ನು ಖಂಡಿಸಿದ್ದರು. ಇದೇ ವಿಷಯದಲ್ಲಿ ಈಗ ಸಚಿವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮತ್ತು ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್ ಶುರುವಾಗಿದೆ.

ಹೋದಲ್ಲಿ ಬಂದಲ್ಲಿ ಪರ-ವಿರೋಧ ಹೇಳಿಕೆ ನೀಡಿದ್ದ ನಾಯಕರ ಆರೋಪ-ಪ್ರತ್ಯಾರೋಪ ಈಗ ಸಾಮಾಜಿಕ ಜಾಲತಾಣದಲ್ಲಿಯೂ ಜೋರಾಗಿದೆ. ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ವಾದ-ಪ್ರತಿವಾದದ ಸದ್ದು ಕೇಳಿ ಬರುತ್ತಿದೆ.

ಸಿದ್ದರಾಮಯ್ಯಅವರ ವಿರೋಧಕ್ಕೆ ಟ್ವೀಟ್ ಮಾಡಿ ಸಿ.ಟಿ.ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾತ್ಮಾ ಗಾಂಧಿ ಹತ್ಯೆಯ ಸಂಚುಕೋರ ಎಂದು ರಾಷ್ಟ್ರವಾದಿ ಸಾವರ್ಕರ್ ಅವರನ್ನು ಅವಮಾನಿಸಿದ್ದೀರಿ. ಸಿಎಂ ಹುದ್ದೆ ಕಳೆದುಕೊಂಡ ಮೇಲೆ ನೀವು ಮಾನಸಿಕ ವೈಕಲ್ಯಕ್ಕೆ ತುತ್ತಾಗಿದ್ದೀರಾ..? ಇತಿಹಾಸದ ಬಗ್ಗೆ ನಿಮಗೆ ಗೊತ್ತಿದೆಯಾ..? ಸೆಲ್ಯುಲರ್ ಜೈಲಿಗೆ ನೀವು ಭೇಟಿ ನೀಡಿ, ಪ್ರವಾಸಕ್ಕೆ ವ್ಯವಸ್ಥೆ ಮಾಡುತ್ತೇನೆ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಹಾತ್ಮ ಗಾಂಧೀಜಿಯವರ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ. ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು, ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.  ನಮ್ಮಂತವರು ರಾಜಕೀಯದ ಮಧ್ಯೆ, ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಇದಕ್ಕೆ ಸಿ.ಟಿ.ರವಿ ಪ್ರತಿ ಟ್ವೀಟ್ ಮಾಡಿ, ಹಿಂದೂ ವಿರೋಧಿ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ದೇಶಭಕ್ತನೊಬ್ಬ ಗಾಂಧೀಜಿಯವರ ಹತ್ಯೆಯ ಆರಫಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು, ಮುಗ್ಧರು ನಿಗೂಢವಾಗಿ ಸಾವನ್ನಪ್ಪಿದಾಗ ರಾಜ್ಯವನ್ನಾಳುತ್ತಿದ್ದವರು ಕುಡಿಯುತ್ತಿದ್ದರೋ..? ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಇತ್ತ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ, ‘ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ‌. ಗಾಂಧಿ ಹತ್ಯೆ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೇನೆ. ಹಿಂದೂಗಳಿಗೆ ಕೊಡಬೇಡಿ ಎಂದು ಹೇಳಿಲ್ಲ. ಗಾಂಧೀಜಿ ಕೂಡಾ ಹಿಂದೂ, ನಾನು ಕೂಡ ಹಿಂದೂ. ನಮ್ಮ ಸರ್ಕಾರ ರಾಜ್ಯದಲ್ಲಿ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿರದಿದ್ದ ಕಾರಣದಿಂದಾಗಿ ವರದಿ ಜಾರಿಗೊಳಿಸಲು ಆಗಿರಲಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈಗಿನ ಸರ್ಕಾರಕ್ಕೆ ಸಮೀಕ್ಷೆಯ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಬಿಜೆಪಿ ತಿರಸ್ಕರಿಸಲು ಹುನ್ನಾರ ನಡೆಸುತ್ತಿದೆ. ಈ ಸಮೀಕ್ಷೆ ಯಾವುದೋ ಒಂದು ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ, ರಾಜ್ಯದ ಪ್ರತಿ ಕುಟುಂಬವನ್ನು ಸಂಪರ್ಕಿಸಿ ತಲೆ ಎಣಿಕೆ ಮೂಲಕ ವೈಜ್ಞಾನಿಕವಾಗಿ ನಡೆಸಿದ್ದ ಸಮೀಕ್ಷೆ. ಈ ವರದಿಯನ್ನು ಒಪ್ಪಿಕೊಂಡರೆ ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಾಗುತ್ತದೆ. ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ವಿರೋಧಿಯಾಗಿರುವ ಬಿಜೆಪಿಗೆ ಇದು ಇಷ್ಟ ಆಗುತ್ತಿಲ್ಲ’ ಎಂದು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ಸಾವರ್ಕರ್ ಗೆ ಭಾರತ ರತ್ನ ಕೊಡುತ್ತೇವೆ. ಎನ್ನುತ್ತಿರುವವರು ಮುಂದೆ ಗೋಡ್ಸೆಗೂ ಕೊಡುತ್ತೇವೆ ಎನ್ನಬಹುದು. ಕೊಡಲಿ ಬಿಡಿ. ಮನುವಾದಿಗಳಿಗೆ ಅಪಾರವಾದ ಬಹುಮತವನ್ನು ಕೊಟ್ಟಿರುವ ನಮಗೆ ಇಂತಹದ್ದನ್ನೆಲ್ಲ ನೊಡುವ ಸೌಭಾಗ್ಯ ದೊರಕಿದೆ.

LEAVE A REPLY

Please enter your comment!
Please enter your name here

- Advertisment -

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...