Homeಕರ್ನಾಟಕನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ಶೋಭಾ ಕರಂದ್ಲಾಜೆ ಮಹಿಳಾ ವಿರೋಧಿ ಹೇಳಿಕೆಗೆ ಟ್ವಟ್ಟರ್ ನಲ್ಲಿ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯನವರೇ, ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಹೇಳಿದ ಶೋಭಾ ಕರಂದ್ಲಾಜೆರವರಿಗೆ ಓರ್ವ ಹೆಣ್ಣಾಗಿ ಮಹಿಳಾ ವಿರೋಧಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶೋಭಾ ಕರಂದ್ಲಾಜೆಯವರು ‘ಸಿದ್ದರಾಮಯ್ಯನವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ, ಅವರು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗಲ್ಲ, ಕೆಲಸ ಮಾಡಲು ಆಗಲ್ಲ ಎಂದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಹೇಳಿಕೆ ನೀಡಿದ್ದರು.

ಅದಕ್ಕೆ ಟ್ವಟ್ಟರ್‍ನಲ್ಲಿ ಪ್ರತಿಕ್ರಿಯಿಸಿದರುವ ಸಿದ್ದರಾಮನ್ಯನವರು “ಕುಮಾರಿ ಶೋಭಾ ಬಿಜೆಪಿ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟು ಸಾಧನೆಯ ಉತ್ತುಂಗಕ್ಕೇರಿದವರು” ಎಂದು ಟ್ವೀಟ್ ಮಾಡುವ ಮೂಲಕ ಮಹಿಳಾ ವಿರೋಧಿ ಹೇಳಿಕೆಯ ವಿರುದ್ಧ ಕಿಡಿಕಾರಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರು ಸೂಕ್ಷ್ಮತೆ ಮೆರೆದಿದ್ದಾರೆ

ಹಾಗೆ ನೋಡಿದರೆ ಬಳೆ ತೊಟ್ಟಿಕೊಳ್ಳಿ ಎಂದು ಟೀಕೆ ಮಾಡುವುದು ಅತ್ಯಂತ ಕೆಳಮಟ್ಟದ್ದು. ಏಕೆಂದರೆ ಬಳೆ ತೊಟ್ಟುಕೊಳ್ಳುವ ಮಹಿಳೆಯರಿಲ್ಲದೇ ಈ ಪ್ರಪಂಚ ಉಳಿಯಲು ಸಾಧ್ಯವಿಲ್ಲ. ಈ ಜಗತ್ತಿನಲ್ಲಿ ಪುರುಷನಿಗೆ ಸರಿಸಮವಾಗಿ ಮಹಿಳೆಯರು ದುಡಿಯುತ್ತಿರುವುದು ಸಾರ್ವಕಾಲಿಕ ಸತ್ಯವೇ ಸರಿ. ಹಾಗಿದ್ದರೂ ಗಾದೆಮಾತಿನಂತೆ ರೂಢಿಗತವಾಗಿ ಬಂದಿರುವ ಆ ಬಳೆ ತೊಟ್ಟಿಕೊಳ್ಳಿ ಎಂಬ ಕೆಟ್ಟ ಮಾತನ್ನು ಒಬ್ಬ ಹೆಣ್ಣು ಮಗಳಾಗಿ ಶೋಭಾ ಕರಂದ್ಲಾಜೆಯವರು ಬಳಸಿರುವು ಅಕ್ಷಮ್ಯ.

ಈ ಪ್ರತಿಕ್ರಿಯೆಯಿಂದ ತನ್ನ ತಪ್ಪನ್ನು ತಿದ್ದಿಕೊಳ್ಳದ ಅಥವಾ ಸುಮ್ಮನಾಗದ ಶೋಭಾ ಕರಂದ್ಲಾಜೆಯವರು “ಸಿದ್ದರಾಮಯ್ಯನವರೆ, ಇಂದಿರಾಗಾಂಧಿಯವರ ಹೆಜ್ಜೆಗುರುತುಗಳನ್ನು ಅನುಸರಿಸಿ ಅಥವಾ ನಿರ್ಮಲ ಸೀತಾರಾಮನ್ ಮತ್ತು ಸುಷ್ಮಾ ಸ್ವರಾಜ್‍ರವರಿಂದ ಸ್ಫೂರ್ತಿ ಪಡೆದುಕೊಳ್ಳಿ” ಎಂದು, ಲೋಕಸಭೆಯ ಫಲಿತಾಂಶವು ನಾನು ಮಾಡಿರುವ ಅಭಿವೃದ್ದಿ ಕೆಲಸದ ಪ್ರತಿಫಲವಾಗಿರುತ್ತದೆ, ಅದು ನಾನು ಮತ್ತೊಮ್ಮೆ ಎಂಪಿಯನ್ನಾಗಿ ಮಾಡುತ್ತದೆ, ನೀವು ಯಾಕೆ ಚಾಮುಂಡೇಶ್ವರಿಯಲ್ಲಿ ಸೋತಿರಿ ಎಂಬುದನ್ನು ನೆನಪಿಸಿಕೊಳ್ಳಿ” ಎಂದು ಮತ್ತೆರೆಡು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

ಒಟ್ಟಾರೆಯಾಗಿ ಶೋಭಾರವರ ಟ್ವೀಟ್‍ಗಳಿಗೆ ಜನ ನೆಗೆಟಿವ್ ಪ್ರತಿಕ್ರಿಯೆಗಳನ್ನು ನೀಡಿದರೆ, ಸಿದ್ದರಾಮಯ್ಯನವರ ಟ್ವೀಟ್‍ಗೆ ಪ್ರಶಂಸೆಯ ಸುರಿಮಳೆ ಸುರಿಸಿದ್ದಾರೆ. ಆ ಟ್ವೀಟ್ ಅನ್ನು ಸಾಕಷ್ಟು ಜನರು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು

ಟ್ವಿಟ್ಟರ್‍ನಲ್ಲಿ ಸಿದ್ದರಾಮಯ್ಯನವರು ಯಾವಾಗಲೂ ಮುಂದಿದ್ದಾರೆ. ಹಿಂದಿ ಹೇರಿಕೆಯ ವಿಚಾರ, ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಳ್ಳಲು, ಮೊನ್ನೆ ತಾನೇ ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು ಇದಕ್ಕೆ ಸಾಕ್ಷಿಯಾಗಿದೆ. ಇದು ಸಿದ್ದರಾಮಯ್ಯನವರೊಂದಿಗೆ ಅವರ ಟ್ವಿಟ್ಟರ್ ಹ್ಯಾಂಡಲ್ ನಿರ್ವಹಿಸುವವರು ಚುರುಕುತನ ಉಳ್ಳವರು ಮಾತ್ರವಲ್ಲದೇ ಸಂವೇದನಾಶೀಲರು ಎಂಬುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...