Homeಕರ್ನಾಟಕನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ಶೋಭಾ ಕರಂದ್ಲಾಜೆ ಮಹಿಳಾ ವಿರೋಧಿ ಹೇಳಿಕೆಗೆ ಟ್ವಟ್ಟರ್ ನಲ್ಲಿ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯನವರೇ, ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಹೇಳಿದ ಶೋಭಾ ಕರಂದ್ಲಾಜೆರವರಿಗೆ ಓರ್ವ ಹೆಣ್ಣಾಗಿ ಮಹಿಳಾ ವಿರೋಧಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶೋಭಾ ಕರಂದ್ಲಾಜೆಯವರು ‘ಸಿದ್ದರಾಮಯ್ಯನವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ, ಅವರು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗಲ್ಲ, ಕೆಲಸ ಮಾಡಲು ಆಗಲ್ಲ ಎಂದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಹೇಳಿಕೆ ನೀಡಿದ್ದರು.

ಅದಕ್ಕೆ ಟ್ವಟ್ಟರ್‍ನಲ್ಲಿ ಪ್ರತಿಕ್ರಿಯಿಸಿದರುವ ಸಿದ್ದರಾಮನ್ಯನವರು “ಕುಮಾರಿ ಶೋಭಾ ಬಿಜೆಪಿ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟು ಸಾಧನೆಯ ಉತ್ತುಂಗಕ್ಕೇರಿದವರು” ಎಂದು ಟ್ವೀಟ್ ಮಾಡುವ ಮೂಲಕ ಮಹಿಳಾ ವಿರೋಧಿ ಹೇಳಿಕೆಯ ವಿರುದ್ಧ ಕಿಡಿಕಾರಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರು ಸೂಕ್ಷ್ಮತೆ ಮೆರೆದಿದ್ದಾರೆ

ಹಾಗೆ ನೋಡಿದರೆ ಬಳೆ ತೊಟ್ಟಿಕೊಳ್ಳಿ ಎಂದು ಟೀಕೆ ಮಾಡುವುದು ಅತ್ಯಂತ ಕೆಳಮಟ್ಟದ್ದು. ಏಕೆಂದರೆ ಬಳೆ ತೊಟ್ಟುಕೊಳ್ಳುವ ಮಹಿಳೆಯರಿಲ್ಲದೇ ಈ ಪ್ರಪಂಚ ಉಳಿಯಲು ಸಾಧ್ಯವಿಲ್ಲ. ಈ ಜಗತ್ತಿನಲ್ಲಿ ಪುರುಷನಿಗೆ ಸರಿಸಮವಾಗಿ ಮಹಿಳೆಯರು ದುಡಿಯುತ್ತಿರುವುದು ಸಾರ್ವಕಾಲಿಕ ಸತ್ಯವೇ ಸರಿ. ಹಾಗಿದ್ದರೂ ಗಾದೆಮಾತಿನಂತೆ ರೂಢಿಗತವಾಗಿ ಬಂದಿರುವ ಆ ಬಳೆ ತೊಟ್ಟಿಕೊಳ್ಳಿ ಎಂಬ ಕೆಟ್ಟ ಮಾತನ್ನು ಒಬ್ಬ ಹೆಣ್ಣು ಮಗಳಾಗಿ ಶೋಭಾ ಕರಂದ್ಲಾಜೆಯವರು ಬಳಸಿರುವು ಅಕ್ಷಮ್ಯ.

ಈ ಪ್ರತಿಕ್ರಿಯೆಯಿಂದ ತನ್ನ ತಪ್ಪನ್ನು ತಿದ್ದಿಕೊಳ್ಳದ ಅಥವಾ ಸುಮ್ಮನಾಗದ ಶೋಭಾ ಕರಂದ್ಲಾಜೆಯವರು “ಸಿದ್ದರಾಮಯ್ಯನವರೆ, ಇಂದಿರಾಗಾಂಧಿಯವರ ಹೆಜ್ಜೆಗುರುತುಗಳನ್ನು ಅನುಸರಿಸಿ ಅಥವಾ ನಿರ್ಮಲ ಸೀತಾರಾಮನ್ ಮತ್ತು ಸುಷ್ಮಾ ಸ್ವರಾಜ್‍ರವರಿಂದ ಸ್ಫೂರ್ತಿ ಪಡೆದುಕೊಳ್ಳಿ” ಎಂದು, ಲೋಕಸಭೆಯ ಫಲಿತಾಂಶವು ನಾನು ಮಾಡಿರುವ ಅಭಿವೃದ್ದಿ ಕೆಲಸದ ಪ್ರತಿಫಲವಾಗಿರುತ್ತದೆ, ಅದು ನಾನು ಮತ್ತೊಮ್ಮೆ ಎಂಪಿಯನ್ನಾಗಿ ಮಾಡುತ್ತದೆ, ನೀವು ಯಾಕೆ ಚಾಮುಂಡೇಶ್ವರಿಯಲ್ಲಿ ಸೋತಿರಿ ಎಂಬುದನ್ನು ನೆನಪಿಸಿಕೊಳ್ಳಿ” ಎಂದು ಮತ್ತೆರೆಡು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

ಒಟ್ಟಾರೆಯಾಗಿ ಶೋಭಾರವರ ಟ್ವೀಟ್‍ಗಳಿಗೆ ಜನ ನೆಗೆಟಿವ್ ಪ್ರತಿಕ್ರಿಯೆಗಳನ್ನು ನೀಡಿದರೆ, ಸಿದ್ದರಾಮಯ್ಯನವರ ಟ್ವೀಟ್‍ಗೆ ಪ್ರಶಂಸೆಯ ಸುರಿಮಳೆ ಸುರಿಸಿದ್ದಾರೆ. ಆ ಟ್ವೀಟ್ ಅನ್ನು ಸಾಕಷ್ಟು ಜನರು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು

ಟ್ವಿಟ್ಟರ್‍ನಲ್ಲಿ ಸಿದ್ದರಾಮಯ್ಯನವರು ಯಾವಾಗಲೂ ಮುಂದಿದ್ದಾರೆ. ಹಿಂದಿ ಹೇರಿಕೆಯ ವಿಚಾರ, ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಳ್ಳಲು, ಮೊನ್ನೆ ತಾನೇ ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು ಇದಕ್ಕೆ ಸಾಕ್ಷಿಯಾಗಿದೆ. ಇದು ಸಿದ್ದರಾಮಯ್ಯನವರೊಂದಿಗೆ ಅವರ ಟ್ವಿಟ್ಟರ್ ಹ್ಯಾಂಡಲ್ ನಿರ್ವಹಿಸುವವರು ಚುರುಕುತನ ಉಳ್ಳವರು ಮಾತ್ರವಲ್ಲದೇ ಸಂವೇದನಾಶೀಲರು ಎಂಬುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....